ಯುಪಿ: ಸುಪ್ರೀಂ ಕೋರ್ಟ್ ವಕೀಲೆಯ ಹತ್ಯೆ ಪ್ರಕರಣ- ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?
ಲಕ್ನೋ ಸೆಪ್ಟೆಂಬರ್ 12: 61 ವರ್ಷದ ಸುಪ್ರೀಂ ಕೋರ್ಟ್ ವಕೀಲೆ ರೇಣು ಸಿನ್ಹಾ ಹತ್ಯೆಗೀಡಾಗಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಆರೋಪಿ ಪತಿ ಅವರ ಕತ್ತು ಹಿಸುಕುವ ಮೊದಲು ಅವರೊಂದಿಗೆ ಜಗಳವಾಡಿ ಹಲ್ಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ.
ರೇಣು ಸಿನ್ಹಾ ಅವರ ಮುಖ ಮತ್ತು ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆ ಹೇಳಿದೆ. ರೇಣು ಸಿನ್ಹಾ ಮತ್ತು ಆಕೆಯ ಪತಿ, 62 ವರ್ಷದ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ನಿತಿನ್ ಸಿನ್ಹಾ ಅವರು ಸೆಪ್ಟೆಂಬರ್ 10 ರಂದು ಬೆಳಿಗ್ಗೆ ಚಹಾ ಕುಡಿಯುವಾಗ ಜಗಳವಾಡಿದರು.

ರೇಣು ಸಿನ್ಹಾ ಅವರನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ರೇಣು ಸಿನ್ಹಾ ಕೆಳಗೆ ಬಿದ್ದಿದ್ದರಿಂದ ಅವರ ತಲೆಗೆ ಗಾಯವಾಗಿದೆ ಎಂದು ಮರಣೋತ್ತರ ಪರೀಕ್ಷೆ ತಿಳಿಸಿದೆ. ಸದ್ಯ ಪೊಲೀಸರು ಫೊರೆನ್ಸಿಕ್ ವರದಿಗಾಗಿ ಕಾಯಲಾಗುತ್ತಿದೆ.
ಆರೋಪಿ ನಿತಿನ್ ಸಿನ್ಹಾ ಸಿಕ್ಕಿಬೀಳುವವರೆಗೂ ಮನೆಯಿಂದ ಹೊರಬಾರದೇ ಇರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆರೋಪಿ ನಿತಿನ್ ಸಿನ್ಹಾ ಕೃತ್ಯ ಎಸಗಿದ ಬಳಿಕ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದನು. ನಿತಿನ್ ಸಿನ್ಹಾ ಅವರ ಕರೆ ರೆಕಾರ್ಡಿಂಗ್ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಎರಡು ದಿನಗಳಿಂದ ರೇಣು ಸಿನ್ಹಾ ಅವರ ಸಹೋದರಿ ಕರೆ ಸ್ವೀಕರಿಸದಿದ್ದಾಗ ಅವರ ಸಹೋದರ ಆತಂಕಗೊಂಡು ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಹೋದರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಂಗಲೆಯೊಳಗೆ ಬಲವಂತವಾಗಿ ಪ್ರವೇಶಿಸಿದ ನಂತರ, ಪೊಲೀಸರು ವಾಶ್ ರೂಂನಲ್ಲಿ ರೇಣು ಸಿನ್ಹಾ ಅವರ ದೇಹವನ್ನು ಪತ್ತೆ ಮಾಡಿದರು.
ಬಳಿಕ ರೇಣು ಸಿನ್ಹಾ ಅವರ ಪತಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದರು. ಹತ್ಯೆಯ ಬಳಿಕ ತಲೆ ಮರಿಸಿಕೊಂಡಿದ್ದ ಆರೋಪಿ ಬಂಗಲೆಯ ಸ್ಟೋರ್ ರೂಂನಲ್ಲಿ ಪತ್ತೆಯಾಗಿದ್ದಾರೆ. ಆರೋಪಿ ನಿತಿನ್ ಬಂಗಲೆಗೆ ಬೀಗ ಜಡಿದು ಟೆರೇಸ್ ಮೇಲೆ ಖಾಲಿ ಇದ್ದ ಸ್ಟೋರ್ ರೂಂನಲ್ಲಿ ಆಶ್ರಯ ಪಡೆದಿದ್ದ ಎನ್ನಲಾಗಿದೆ. ನಂತರ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪಿ ವಿಚಾರಣೆ ವೇಳೆ ಪತ್ನಿಯ ಕೊಲೆಗೆ ಕಾರಣವನ್ನು ಹಂಚಿಕೊಂಡಿದ್ದಾರೆ. ಆರೋಪಿ ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು. ಮುಂಗಡವನ್ನೂ ತೆಗೆದುಕೊಂಡಿದ್ದರು. ಆದರೆ ಅವರ ಪತ್ನಿ ಮಾರಾಟಕ್ಕೆ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ ಕ್ಯಾನ್ಸರ್ ಮುಕ್ತರಾಗಿದ್ದರು. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications