ಯುಪಿ: ರಹಸ್ಯ ಬಯಲಾಗುವ ಭೀತಿ- ಅತೀಕ್ ಹತ್ಯೆಯ ಹಿಂದೆ ವಿರೋಧ ಪಕ್ಷಗಳ ಕೈವಾಡ- ಯುಪಿ ಸಚಿವರ ಆರೋಪ
ಲಕ್ನೋ ಏಪ್ರಿಲ್ 23: ಕೆಲವು ರಹಸ್ಯಗಳು ಬಯಲಾಗುವ ಭಯದಿಂದ ವಿರೋಧ ಪಕ್ಷಗಳು ಅತೀಕ್ನನ್ನು ಕೊಂದಿವೆ ಎಂದು ಯುಪಿ ಸಚಿವರೊಬ್ಬರು ಆರೋಪ ಮಾಡಿದ್ದಾರೆ. ಚಂಡೌಸಿ ನಗರ ಚುನಾವಣೆಗಾಗಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಧರ್ಮಪಾಲ್ ಸಿಂಗ್ ವಿಪಕ್ಷಗಳ ವಿರುದ್ಧ ಹಲವು ಆರೋಪ ಮಾಡಿದರು.
ಕ್ರಿಮಿನಲ್ ಅತಿಕ್ ಅಹ್ಮದ್ ಅವರ ಹತ್ಯೆಯಲ್ಲಿ ಪ್ರತಿಪಕ್ಷಗಳ ಕೈವಾಡವಿದೆ ಎಂದು ಭಾನುವಾರ ಉತ್ತರ ಪ್ರದೇಶದ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಧರ್ಮಪಾಲ್ ಸಿಂಗ್ ಅವರು ಪ್ರತಿಪಾದಿಸಿದ್ದಾರೆ. ಅಹ್ಮದ್ ಬಂಧನದ ನಂತರ ಅನೇಕ ರಹಸ್ಯಗಳನ್ನು ಬಹಿರಂಗಪಡಿಸಲು ಹೊರಟಿದ್ದನು. ಇದು ಅವರ ಹತ್ಯೆಗೆ ಕಾರಣವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕಳೆದ ವಾರ ವೈದ್ಯಕೀಯ ಪರೀಕ್ಷೆಗಾಗಿ ಪ್ರಯಾಗ್ರಾಜ್ಗೆ ಕರೆದೊಯ್ಯುತ್ತಿದ್ದಾಗ ಹತ್ಯೆ ಮಾಡಲಾಗಿತ್ತು. 2005ರಲ್ಲಿ ನಡೆದ ಬಿಎಸ್ಪಿ ಶಾಸಕ ರಾಜುಪಾಲ್ ಹತ್ಯೆ ಹಾಗೂ ಈ ವರ್ಷದ ಫೆಬ್ರುವರಿಯಲ್ಲಿ ಬಿಎಸ್ಪಿ ನಾಯಕ ರಾಜುಪಾಲ್ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅತೀಕ್ ಆರೋಪಿಯಾಗಿದ್ದನು.
"ಅತೀಕ್ನನ್ನು ಕೊಲ್ಲುವಲ್ಲಿ ಪ್ರತಿಪಕ್ಷಗಳು ಭಾಗಿಯಾಗಿವೆ ಎಂಬುದು ಸತ್ಯ. ಅತೀಕ್ನಿಂದ ಕೆಲವು ಗಂಭೀರ ರಹಸ್ಯಗಳು ಬಹಿರಂಗಗೊಳ್ಳಬೇಕಿತ್ತು. ಈ ಬೆದರಿಕೆಯಿಂದಾಗಿ ಪ್ರತಿಪಕ್ಷಗಳು ಅವರನ್ನು ಹತ್ಯೆ ಮಾಡಿದೆ" ಎಂದು ಶುಕ್ರವಾರ ಇಲ್ಲಿಗೆ ಆಗಮಿಸಿದ ರಾಜ್ಯ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವ ಸಿಂಗ್ ಹೇಳಿದ್ದಾರೆ.

ಪ್ರಯಾಗ್ರಾಜ್ನ ಆಸ್ಪತ್ರೆಯೊಂದರ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅತೀಕ್ ಮಾತನಾಡುತ್ತಿದ್ದಾಗ ಪತ್ರಕರ್ತರಂತೆ ಕಾಣಿಸಿಕೊಂಡಿದ್ದ ಮೂವರು ವ್ಯಕ್ತಿಗಳು ಅತೀಕ್ ಮತ್ತು ಅಶ್ರಫ್ ಮೇಲೆ ಗುಂಡು ಹಾರಿಸಿದರು. ಶೂಟರ್ಗಳನ್ನು ಶೀಘ್ರದಲ್ಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಮತ್ತು ನಂತರ ಅವರನ್ನು ಲವ್ಲೇಶ್ ತಿವಾರಿ, ಸನ್ನಿ ಸಿಂಗ್ ಮತ್ತು ಅರುಣ್ ಮೌರ್ಯ ಎಂದು ಗುರುತಿಸಲಾಗಿದೆ.
ಗುರುವಾರ ಮುಂಜಾನೆ, ಉತ್ತರ ಪ್ರದೇಶ ಸರ್ಕಾರ ರಚಿಸಿದ್ದ ನ್ಯಾಯಾಂಗ ಸಮಿತಿಯು ಪ್ರಯಾಗ್ರಾಜ್ಗೆ ಭೇಟಿ ನೀಡಿತು. ವಿಶೇಷ ತನಿಖಾ ತಂಡ ಅತೀಕ್ ಮತ್ತು ಅವನ ಸಹೋದರನನ್ನು ಗುಂಡಿಕ್ಕಿ ಕೊಂದ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಿತು. ಹೆಚ್ಚಿನ ತನಿಖೆಗಾಗಿ ಪೊಲೀಸ್ ತಂಡ ಕೊಲೆಗೂ ಮುನ್ನ ಅತಿಕ್ ಹಂತಕರು ತಂಗಿದ್ದ ಹೋಟೆಲ್ಗೆ ತಲುಪಿತು.

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಲವ್ಲೇಶ್ ತಿವಾರಿಯ ಮೂವರು ಸ್ನೇಹಿತರನ್ನು ಎಸ್ಐಟಿ ತಂಡ ಬಂಧಿಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಎಸ್ಐಟಿ ತಂಡವು ಹಮೀರ್ಪುರ ಮತ್ತು ಕಾಸ್ಗಂಜ್ಗೂ ತಲುಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications