ಕಾಶ್ಮೀರದಲ್ಲಿ ಎಟಿಎಂ ಲೂಟಿ ಮಾಡಲು ಲಷ್ಕರ್ ಪಡೆಯಿಂದ ಐನಾತಿ ಪ್ಲ್ಯಾನ್
ಶ್ರೀನಗರ, ಜುಲೈ 10 : ಜಮ್ಮು ಮತ್ತು ಕಾಶ್ಮೀರದ ಎಟಿಎಂ ಲೂಟಿ ಮಾಡಲು ಬೇರೆ ರಾಜ್ಯದ ವ್ಯಕ್ತಿಯೊಬ್ಬನನ್ನು ಲಷ್ಕರ್ ಉಗ್ರ ಸಂಘಟನೆ ಬಳಸಿಕೊಂಡಿದೆ.
ಉತ್ತರಪ್ರದೇಶದ ಮೂಲದ ಸಂದೀಪ್ ಎಂಬಾತನನ್ನು ಬಳಸಿಕೊಂಡು ಎಟಿಎಂ ಲೂಟಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಜಮ್ಮು ಮತ್ತು ಕಾಶ್ಮೀರದದ ಐಜಿಪಿ ಮುನೀರ್ ಖಾನ್ ಹೇಳಿದ್ದಾರೆ.

ಲಷ್ಕರ್ ಇ ತೋಯ್ಬಾದ ಉಗ್ರ ಬಷೀರ್ ಲಷ್ಕರ್ ನೆಲೆಸಿದ್ದ ಮನೆಯಲ್ಲೇ ಆರೋಪಿ ಸಂದೀಪ್ ಕೂಡಾ ವಾಸವಾಗಿದ್ದ. ಇತ್ತೀಚೆಗೆ ಲಷ್ಕರ್ ಉಗ್ರ ಬಷೀರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಯಿತು. ಆನಂತರ ಸಂದೀಪ್ ಕೂಡಾ ನಾಪತ್ತೆಯಾಗಿದ್ದ.
ಸ್ಥಳೀಯರು ಹಾಗೂ ಪೊಲೀಸರ ಫೈಲಿನಲ್ಲಿ ಇರುವ ಶಂಕಿತರನ್ನು ಬಳಸಿಕೊಂಡು ದುಷ್ಕೃತ್ಯ ಎಸಗುವುದಕ್ಕಿಂತ ಹೊಸಬರನ್ನು ಕಣಕ್ಕಿಳಿಸುವುದು ಲಷ್ಕರ್ ಕಾರ್ಯತಂತ್ರವಾಗಿದೆ.
ಅದರಂತೆ ಸಂದೀಪ್ ಎಂಬಾತನನ್ನು ಬಳಸಿಕೊಂಡು ಎಟಿಎಂ ಲೂಟಿ ಸೇರಿದಂತೆ ಅನೇಕ ಕೃತ್ಯಗಳನ್ನು ಎಸಗಿರುವ ಸಾಧ್ಯತೆಯಿದೆ ಎಂದು ಮುನೀರ್ ಖಾನ್ ಹೇಳಿದರು. ಸದ್ಯ ಸಂದೀಪ್ ನನ್ನು ವಿಚಾರಣೆಗೊಳಪಡಿಸಲಾಗುತ್ತಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications