2ಜಿ ಹಗರಣ : 'ಸುಳ್ಳು ವರದಿ ನೀಡಿದ ವಿನೋದ್ ರೈ ಕ್ಷಮೆಯಾಚಿಸಲಿ'
ನವದೆಹಲಿ, ಡಿಸೆಂಬರ್ 21 : 2ಜಿ ತರಂಗಗುಚ್ಛ ಹಗರಣವನ್ನು ಬಯಲಿಗೆಳೆದಿದ್ದ ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ಅವರ ವಿರುದ್ಧ ತಿರುಗಿಬಿದ್ದಿರುವ ಯುಪಿಎ ಶಾಸಕರು, ವಿನೋದ್ ರೈ ಕೂಡಲೆ ಕ್ಷಮೆ ಕೇಳಬೇಕೆಂಬು ದುಂಬಾಲು ಬಿದ್ದಿವೆ.
1.76 ಲಕ್ಷ ಕೋಟಿ ರುಪಾಯಿ - ಇದು 2ಜಿ ತರಂಗಗುಚ್ಛ ಹಗರಣದ ಮೊತ್ತ. ಹೆಚ್ಚೂ ಕಡಿಮೆ ಕರ್ನಾಟಕದ ವರ್ಷದ ಬಜೆಟ್ಟಿನಷ್ಟು. ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಸರಕಾರವಿದ್ದಾಗ, ಡಿಎಂಕೆ ಪಕ್ಷದ ನಾಯಕ, ಮಾಜಿ ಟೆಲಿಕಾಂ ಸಚಿವ ಎ ರಾಜಾ ಮತ್ತಿತರರ ಮೇಲೆ ವಿನೋದ್ ರೈ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.

ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಒಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದರೆ, ಮತ್ತೆರಡನ್ನು ಸಿಬಿಐ ತನಿಖೆ ನಡೆಸಿತ್ತು. ಈ ಮೂರು ಪ್ರಕರಣಗಳಲ್ಲಿ ಎ ರಾಜಾ, ಕನ್ನಿಮೋಳಿ ಮತ್ತಿತರ ಆರೋಪಿಗಳು ನಿರ್ದೋಷಿಗಳಾಗಿದ್ದಾರೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಓ ಪಿ ಸೈನಿ ಅವರು ತೀರ್ಪು ನೀಡಿದ್ದಾರೆ.
ಲೈಸೆನ್ಸ್ ನೀಡಲು ಮತ್ತು 2ಜಿ ತರಂಗಗುಚ್ಛ ಹಂಚಿಕೆಯ ಹಗರಣ, ಯುಪಿಎ ಸರಕಾರವಿದ್ದಾಗ 2008ರಲ್ಲಿಯೇ ಬಯಲಾಗಿತ್ತು. ಆದರೆ, ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ವರದಿ ನೀಡಿದ ಮೇಲೆ 2010ರಲ್ಲಿ ಬೃಹದಾಕಾರ ಪಡೆದುಕೊಂಡಿತ್ತು. ಈ ಪ್ರಕರಣದಲ್ಲಿ ಡಿಎಂಕೆ ಪಕ್ಷದ ಕನ್ನಿಮೋಳಿ ಫಲಾನುಭವಿಯಾಗಿ 213 ಕೋಟಿ ರುಪಾಯಿ ನುಂಗಿದ್ದಾರೆ ಎಂದೂ ಆರೋಪಿಸಲಾಗಿತ್ತು.
ವಿನೋದ್ ರೈ ಮೇಲೆ ತಿರುಗಿಬಿದ್ದಿರುವ ಕಾಂಗ್ರೆಸ್ ನಾಯಕ, ವಕೀಲ ಕಪಿಲ್ ಸಿಬಲ್ ಅವರು, "ನಾನು ಮೊದಲಿನಿಂದಲೂ ಹೇಳುತ್ತಲೇ ಬರುತ್ತಿದ್ದೆ. ಇಲ್ಲಿ ಯಾವ ಭ್ರಷ್ಟಾಚಾರ ನಡೆದಿಲ್ಲ, ದೇಶಕ್ಕೆ ಯಾವುದೇ ನಷ್ಟವಾಗಿಲ್ಲ ಇದು ಹಗರಣ ಅಲ್ಲವೇ ಅಲ್ಲ ಎಂದು. ಅದೀಗ ರುಜುವಾತಾಗಿದೆ" ಎಂದು ಆರೋಪಿಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರು, ದೇಶದ ಭಾರೀ ದೊಡ್ಡ ಹಗರಣ ಎಂದು ಬಿಂಬಿಸಲಾಗುತ್ತಿದ್ದ 2ಜಿ ತರಂಗಗುಚ್ಛ ಹಗರಣದ ಆರೋಪ ಯಾವತ್ತೂ ನಿಜವಾಗಿರಲಿಲ್ಲ. ಆದರೆ, ವಿನೋದ್ ರೈ ಮತ್ತು ಬಿಜೆಪಿ ನಾಯಕರು ಸುಳ್ಳು ಹಬ್ಬಿಸುತ್ತಲೇ ಬಂದರು ಎಂದು ತಿರುಗೇಟು ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications