ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2ಜಿ ಹಗರಣ : 'ಸುಳ್ಳು ವರದಿ ನೀಡಿದ ವಿನೋದ್ ರೈ ಕ್ಷಮೆಯಾಚಿಸಲಿ'

By Prasad
|
Google Oneindia Kannada News

ನವದೆಹಲಿ, ಡಿಸೆಂಬರ್ 21 : 2ಜಿ ತರಂಗಗುಚ್ಛ ಹಗರಣವನ್ನು ಬಯಲಿಗೆಳೆದಿದ್ದ ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ಅವರ ವಿರುದ್ಧ ತಿರುಗಿಬಿದ್ದಿರುವ ಯುಪಿಎ ಶಾಸಕರು, ವಿನೋದ್ ರೈ ಕೂಡಲೆ ಕ್ಷಮೆ ಕೇಳಬೇಕೆಂಬು ದುಂಬಾಲು ಬಿದ್ದಿವೆ.

Breaking: 2ಜಿ ಸ್ಪೆಕ್ಟ್ರಂ ಹಗರಣ: ಎಲ್ಲಾ ಆರೋಪಿಗಳು ಖುಲಾಸೆ Breaking: 2ಜಿ ಸ್ಪೆಕ್ಟ್ರಂ ಹಗರಣ: ಎಲ್ಲಾ ಆರೋಪಿಗಳು ಖುಲಾಸೆ

1.76 ಲಕ್ಷ ಕೋಟಿ ರುಪಾಯಿ - ಇದು 2ಜಿ ತರಂಗಗುಚ್ಛ ಹಗರಣದ ಮೊತ್ತ. ಹೆಚ್ಚೂ ಕಡಿಮೆ ಕರ್ನಾಟಕದ ವರ್ಷದ ಬಜೆಟ್ಟಿನಷ್ಟು. ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಸರಕಾರವಿದ್ದಾಗ, ಡಿಎಂಕೆ ಪಕ್ಷದ ನಾಯಕ, ಮಾಜಿ ಟೆಲಿಕಾಂ ಸಚಿವ ಎ ರಾಜಾ ಮತ್ತಿತರರ ಮೇಲೆ ವಿನೋದ್ ರೈ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.

UPA demands apolozy by Vinod Rai, who submitted report of 2G scam

ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಒಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದರೆ, ಮತ್ತೆರಡನ್ನು ಸಿಬಿಐ ತನಿಖೆ ನಡೆಸಿತ್ತು. ಈ ಮೂರು ಪ್ರಕರಣಗಳಲ್ಲಿ ಎ ರಾಜಾ, ಕನ್ನಿಮೋಳಿ ಮತ್ತಿತರ ಆರೋಪಿಗಳು ನಿರ್ದೋಷಿಗಳಾಗಿದ್ದಾರೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಓ ಪಿ ಸೈನಿ ಅವರು ತೀರ್ಪು ನೀಡಿದ್ದಾರೆ.

2ಜಿ ಸ್ಪೆಕ್ಟ್ರಂ, ಏನಿದು ಹಗರಣ? ಇಲ್ಲಿದೆ ಟೈಮ್ ಲೈನ್ 2ಜಿ ಸ್ಪೆಕ್ಟ್ರಂ, ಏನಿದು ಹಗರಣ? ಇಲ್ಲಿದೆ ಟೈಮ್ ಲೈನ್

ಲೈಸೆನ್ಸ್ ನೀಡಲು ಮತ್ತು 2ಜಿ ತರಂಗಗುಚ್ಛ ಹಂಚಿಕೆಯ ಹಗರಣ, ಯುಪಿಎ ಸರಕಾರವಿದ್ದಾಗ 2008ರಲ್ಲಿಯೇ ಬಯಲಾಗಿತ್ತು. ಆದರೆ, ಮಾಜಿ ಮಹಾ ಲೆಕ್ಕ ಪರಿಶೋಧಕ ವಿನೋದ್ ರೈ ವರದಿ ನೀಡಿದ ಮೇಲೆ 2010ರಲ್ಲಿ ಬೃಹದಾಕಾರ ಪಡೆದುಕೊಂಡಿತ್ತು. ಈ ಪ್ರಕರಣದಲ್ಲಿ ಡಿಎಂಕೆ ಪಕ್ಷದ ಕನ್ನಿಮೋಳಿ ಫಲಾನುಭವಿಯಾಗಿ 213 ಕೋಟಿ ರುಪಾಯಿ ನುಂಗಿದ್ದಾರೆ ಎಂದೂ ಆರೋಪಿಸಲಾಗಿತ್ತು.

ವಿನೋದ್ ರೈ ಮೇಲೆ ತಿರುಗಿಬಿದ್ದಿರುವ ಕಾಂಗ್ರೆಸ್ ನಾಯಕ, ವಕೀಲ ಕಪಿಲ್ ಸಿಬಲ್ ಅವರು, "ನಾನು ಮೊದಲಿನಿಂದಲೂ ಹೇಳುತ್ತಲೇ ಬರುತ್ತಿದ್ದೆ. ಇಲ್ಲಿ ಯಾವ ಭ್ರಷ್ಟಾಚಾರ ನಡೆದಿಲ್ಲ, ದೇಶಕ್ಕೆ ಯಾವುದೇ ನಷ್ಟವಾಗಿಲ್ಲ ಇದು ಹಗರಣ ಅಲ್ಲವೇ ಅಲ್ಲ ಎಂದು. ಅದೀಗ ರುಜುವಾತಾಗಿದೆ" ಎಂದು ಆರೋಪಿಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರು, ದೇಶದ ಭಾರೀ ದೊಡ್ಡ ಹಗರಣ ಎಂದು ಬಿಂಬಿಸಲಾಗುತ್ತಿದ್ದ 2ಜಿ ತರಂಗಗುಚ್ಛ ಹಗರಣದ ಆರೋಪ ಯಾವತ್ತೂ ನಿಜವಾಗಿರಲಿಲ್ಲ. ಆದರೆ, ವಿನೋದ್ ರೈ ಮತ್ತು ಬಿಜೆಪಿ ನಾಯಕರು ಸುಳ್ಳು ಹಬ್ಬಿಸುತ್ತಲೇ ಬಂದರು ಎಂದು ತಿರುಗೇಟು ನೀಡಿದ್ದಾರೆ.

English summary
Former UPA ministers have quickly begun targetting former CAG Vinod Rai, who had submitted the report that had estimated the loss to the exchequer at Rs 1.76 lakh crore, due to issuances of licence and allocation of 2G spectrum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X