ಆ.26: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಆ.26: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
10.55: ನರೇಂದ್ರ ಮೋದಿ ಸರ್ಕಾರ ಬುಲೆಟ್ ರೈಲು ಯೋಜನೆ ಘೋಷಣೆ ಮಾಡುತ್ತಿದ್ದಂತೆ ಚೀನಾ ಹಾಗೂ ಜಪಾನ್ ದೇಶಗಳು ತಮ್ಮ ಬುಲೆಟ್ ರೈಲು ಭಾರತಕ್ಕೆ ಮಾರಾಟ ಮಾಡಲು ಪೈಪೋಟಿ ನಡೆಸಿವೆ.
10.50: ಅಹಮದಾಬಾದ್ ಹಾಗೂ ಮುಂಬೈ ಕಾರಿಡಾರ್ ನಡುವೆ ಬುಲೆಟ್ ರೈಲು ಓಡಿಸಲು ಜಪಾನ್ ಉತ್ಸುಕವಾಗಿದ್ದು, ಈಗಾಗಲೇ ಸಮೀಕ್ಷೆ ನಡೆಸಿರುವ ಸುದ್ದಿ ಬಂದಿದೆ.
10.45: ಭಾರತದ ಬುಲೆಟ್ ಟ್ರೈನ್ ಯೋಜನೆಗೆ ಮತ್ತೆ ಚಾಲನೆ ಬಂದಿದೆ. ಮುಂಬೈ, ದೆಹಲಿ ಆಗ್ರಾ, ಮೈಸೂರು-ಬೆಂಗಳೂರು- ಚೆನ್ನೈ, ಮುಂಬೈ-ಗೋವಾ ಹಾಗೂ ಹೈದರಾಬಾದ್-ಸಿಕಂದರಾಬಾದ್ ಮಾರ್ಗಗಳಲ್ಲಿ ಯೋಜನೆ ಜಾರಿಗೊಳ್ಳಲಿದೆ. ಸುಮಾರು 60,000 ಕೋಟಿ ವೆಚ್ಚದ ಯೋಜನೆ ಇದಾಗಿದೆ. [ಬುಲೆಟ್ ರೈಲಿನ ವಿಶೇಷತೆಗಳು!]

10.20: ಫ್ರಾನ್ಸ್ ನಲ್ಲಿ ಸರ್ಕಾರ ವಿಸರ್ಜನೆಗೊಂಡಿದೆ. ದೇಶದ ತಟಸ್ಥ ಆರ್ಥಿಕತೆ ಬಗ್ಗೆ ತನ್ನದೇ ಸಚಿವ ಸಂಪುಟದಲ್ಲಿ ಎದ್ದಿರುವ ಬಹಿರಂಗ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಸೋಮವಾರ ಸರ್ಕಾರವನ್ನು ವಿಸರ್ಜಿಸಿದ್ದಾರೆ.
10.00 : ಫ್ರಾನ್ಸ್ ಪ್ರಧಾನಿ ಮ್ಯಾನುಯಲ್ ವಾಲ್ಸ್ ರಾಜೀನಾಮೆಯನ್ನು ಸ್ವೀಕರಿಸಿದ ಹೊಲಾಂಡ್, ಮಂಗಳವಾರದ ವೇಳೆಗೆ ನೂತನ ಸರಕಾರವನ್ನು ರಚಿಸುವಂತೆ ಅವರಿಗೆ ಸೂಚನೆ ನೀಡಿದರು.
9.45: ಮುಂಬೈ ವಿಮಾನ ನಿಲ್ದಾಣದಲ್ಲಿ ಎಬೋಲಾ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸೋಮವಾರ ಒಬ್ಬ ಪ್ರಯಾಣಿಕರಿಗೆ ಸೋಂಕು ಇರುವ ಶಂಕೆ ವ್ಯಕ್ತವಾಗಿತ್ತು.[ಎಬೋಲಾ ವೈರಾಣು ಭೀತಿ 'ಸೆಕ್ಸ್'ಗೂ ಕೊಕ್ಕೆ]
9.30: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಾರತೀಯ ಯೋಧರು ಹಾಗೂ 5 ಜನ ಉಗ್ರರು ಹತರಾಗಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications