ನ.27: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ನ.27: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
14.50: 15 ವರ್ಷ ಮೇಲ್ಪಟ್ಟ ವಾಹನಗಳಿಗೆ ದೆಹಲಿಯ ರಸ್ತೆಯಲ್ಲಿ ಪ್ರಯಾಣಿಸಲು ಅನುಮತಿ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಮಹತ್ವದ ಆದೇಶ ನೀಡಿದೆ. ಹಸಿರು ಪೀಠದ ಅಧ್ಯಕ್ಷ ಜಸ್ಟೀಸ್ ಸ್ವತಂತ್ರ ಕುಮಾರ್ ಅವರು ನೀಡಿದ ಆದೇಶದಿಂದ ಹಳೆ ವಾಹನಗಳಿಗೆ ನೋ ಎಂಟ್ರಿ ಬೋರ್ಡ್ ತೋರಿಸಬೇಕಾಗಿದೆ.

12.45: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿರುವ ಮೇಯಪ್ಪನ್ ಅವರ ಸಹ ಮಾಲೀಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಏಕೆ ಅನರ್ಹಗೊಳಿಸಬಾರದು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. [ಪ್ರಶ್ನೆಗಳ ಸುರಿಮಳೆ ಇಲ್ಲಿದೆ]
11.00: ಆಸ್ಟ್ರೇಲಿಯಾದ ಕ್ರಿಕೆಟರ್ ಫಿಲ್ ಹ್ಯೂಸ್ ಅಕಾಲಿಕ ಮರಣಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ. ಟೀಂ ಇಂಡಿಯಾದ ಅಟಗಾರರು ಸೇರಿದಂತೆ ಅನೇಕ ಜನ ಹಾಲಿ, ಮಾಜಿ ಕ್ರಿಕೆಟರ್ ಗಳು ಸಂತಾಪ ವ್ಯಕ್ತಪಡಿಸಿದ್ದಾರೆ.[ ಟ್ವೀಟ್ ಕಂಬನಿ ಓದಿ]
10.30: ಬ್ರೇಕಿಂಗ್ ನ್ಯೂಸ್: ಆಸ್ಟ್ರೇಲಿಯಾದ ಕ್ರಿಕೆಟರ್ ಫಿಲ್ ಹ್ಯೂಸ್ ಗುರುವಾರ ಬೆಳಗ್ಗೆ ನಿಧನ.
10.25: ಎಂಡಿಎಂಕೆ ಮುಖ್ಯಸ್ಥ ವೈಕೋ ಅವರು ಈರೋಡಿನಲ್ಲಿ ಎಲ್ಟಿಟಿಇ ಮುಖ್ಯಸ್ಥ ಪ್ರಭಾಕರನ್ ಅವರ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅಲ್ಲದೆ, ಪ್ರಭಾಕರನ್ ಅವರನ್ನು ಹೊಗಳುವ ಭರದಲ್ಲಿ ಶ್ರೀಲಂಕಾದ ಅಧ್ಯಕ್ಷ ರಾಜಪಕ್ಸೆ ಕೈಕುಲುಕಿದ ಪ್ರಧಾನಿ ಮೋದಿ ಅವರನ್ನು ವೈಕೋ ತೆಗಳಿದ್ದಾರೆ.

10.10: ಇಂಡೋನೇಷಿಯಾದಲ್ಲಿ ಪ್ರಬಲವಾದ ಭೂಕಂಪ ಸಾಗರದ ಆಳದಲ್ಲಿ ಸಂಭವಿಸಿದೆ.
10.00: ಭಾರತದ ಮೂಲದ ಮಹಮ್ಮದ್ ಆಮೀರ್ ಎಂಬುವರು ಲಿಬೇರಿಯಾದಲ್ಲಿ ಎಬೋಲಾ ಸೋಂಕಿಗೆ ಬಲಿಯಾಗಿದ್ದಾರೆ.
9.30: ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ತೃಣಮೂಲ ಕಾಂಗ್ರೆಸ್ ನ ಶ್ರೀನ್ಜೋಯ್ ಬೋಸ್ ಅವರನ್ನು ಇನ್ನೂ ಮೂರು ದಿನಗಳವರೆಗೆ ಸಿಬಿಐ ಕಸ್ಟಡಿಗೆ ನೀಡಲಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications