ಜು.25 : ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜು.25: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
15.45: ಗುದ್ದೋಡು ಪ್ರಕರಣ: ನಟ ಸಲ್ಮಾನ್ ಖಾನ್ ವಿಚಾರಣೆಯನ್ನು ಮತ್ತೊಮ್ಮೆ ಬಾಂಬೆ ಕೋರ್ಟ್ ಮುಂದೂಡಿದ್ದು, ಆಗಸ್ಟ್ 21 ರಂದು ವಿಚಾರನೆ ನಡೆಯಲಿದೆ.
2.55: ಯುಪಿಎಸ್ ಸಿ ನೇಮಕಾತಿ ವಿವಾದ ಮತ್ತೆ ಮುಂದುವರೆದಿದ್ದು, ದೆಹಲಿಯಲ್ಲಿ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳನ್ನು ಪೊಲೀಸರು ಪ್ರಯಾಸದಿಂದ ತಡೆಗಟ್ಟಿದ್ದಾರೆ.

2.45: 26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಉಪ ರಾಯಭಾರಿಗೆ ಭಾರತದಿಂದ ಸಮನ್ಸ್ ಜಾರಿ ಮಾಡಲಾಗಿದೆ.
2.30: ಸಾಧ್ವಿ ಪ್ರಾಚಿ ಅವರನ್ನು ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
1.30: ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ಪ್ರಮಾಣ ತೋರಿಸಿದೆ.
10.50 : ಶಾರದಾ ಚಿಟ್ ಫಂಡ್ ಹಗರಣ: ಜಾರಿ ನಿರ್ದೇಶನಾಲಯದಿಂದ ತೃಣಮೂಲ ಕಾಂಗ್ರೆಸ್ ಸಂಸದ ಮಿಥುನ್ ಚಕ್ರವರ್ತಿ ಅವರ ವಿಚಾರಣೆ.
10.45 : ಕಾರ್ಗಿಲ್ ಯುದ್ಧವಾದ 15 ವರ್ಷಗಳ ನಂತರ ವಿಜಯ್ ದಿವಸ್ ಆಚರಣೆ. ಭಾರತದ ಹೆಮ್ಮೆಯ ವೀರಯೋಧರಿಗೆ ದೇಶ ನಮಿಸುತ್ತದೆ ಎಂದು ಭೂಸೇನಾ ಮುಖ್ಯಸ್ಥ ವಿಕ್ರಮ್ ಸಿಂಗ್ ಹೇಳಿಕೆ.
10.15 : ಎಂಎಚ್ 17 ವಿಮಾನ ದುರಂತದ ಹಿನ್ನೆಲೆಯಲ್ಲಿ ಉಕ್ರೇನ್ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

10.00: ಅಲ್ಜೀರಿಯಾದಲ್ಲಿ ಗುರುವಾರ ಎಎಚ್ 5017 ವಿಮಾನ ಮಾಲಿ ಬಳಿ ಪತನಗೊಂಡಿದ್ದು, 116 ಜನ ಮೃತಪಟ್ಟಿದ್ದಾರೆ ಎಂದು ಅಲ್ಜೀರಿಯಾ ಸರ್ಕಾರ ದೃಢಪಡಿಸಿದೆ.
9.30: ಮುಂಬೈನ ಹಿರಿಯ ಐಪಿಎಸ್ ಅಧಿಕಾರಿ ಸುನಿಲ್ ಪರಾಸ್ಕಾರ್ ಮೇಲೆ ರೂಪದರ್ಶಿಯೊಬ್ಬರು ಮಾನಭಂಗ ಆರೋಪ ಹೊರೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications