ಜೂ.6: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜೂ.6: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
4.15: ಜುಲೈನಲ್ಲಿ ಪ್ರಧಾನಿ ಮೋದಿ ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
3.45: ಸೋಮವಾರ ತನಕ ಲೋಕಸಭೆ ಕಲಾಪ ಮುಂದೂಡಲಾಗಿದೆ.
3.30: ನಿತಿನ್ ಗಡ್ಕರಿ ಅವರ ಮಾನನಷ್ಟ ಮೊಕದ್ದಮೆ ಪ್ರಕರಣ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ವಿರುದ್ಧ ಚಾರ್ಜ್ ಶೀಟ್
3.15: ಸೆನ್ಸೆಕ್ಸ್ ನಲ್ಲಿ 358.72 ಅಂಕ ಜಿಗಿತ. 25,378.23 ದಾಟಿ ಹೊಸ ದಾಖಲೆ. ನಿಫ್ಟಿ ಕೂಡಾ 7,572.80 ಅಂಕ ದಾಟಿ ದಾಖಲೆ.
2.15: ಸೆ.266 ಅಥವಾ ಸೆ.30ರಂದು ಮೋದಿ-ಒಬಾಮ ಭೇಟಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

1.00: ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ವಿದೇಶ ಪ್ರವಾಸವನ್ನು ಭೂತಾನ್ನಿಂದ ಆರಂಭಿಸುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಶುಕ್ರವಾರ ಉನ್ನತ ಅಧಿಕಾರಿಗಳ ತಂಡವೊಂದು ರಾಜಧಾನಿ ಥಿಂಪುವಿಗೆ ತೆರಳಲಿದೆ.
12.45: ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ಕೈ ಕಾಲು ಕಳೆದುಕೊಂಡವರಿಗೆ ಉಚಿತ ಕೃತಕ ಅಂಗಗಳನ್ನು ನೀಡುವುದಾಗಿ ಜೈಪುರ್ ಫುಟ್ ತಯಾರಕರು ತಿಳಿಸಿದ್ದಾರೆ. ಜೂ.8ರಿಂದ ತಿಂಗಳ ಕಾಲ ಕಾಬೂಲ್ನಲ್ಲಿ ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿ (ಬಿಎಂವಿಎಸ್ಎಸ್) ಶಿಬಿರವನ್ನು ನಡೆಸಲಿದೆ.
11.45 : 16ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿಯ ಸುಮಿತ್ರಾ ಮಹಾಜನ್ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಸುಮಿತ್ರಾ ಮಹಾಜನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರ ಆಯ್ಕೆಯನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದೆ.
10.25: ಮಹಾರಾಷ್ಟ್ರದಲ್ಲಿನ ಆಮ್ ಆದ್ಮಿ ಪಾರ್ಟಿಯ ಹಿರಿಯ ನಾಯಕಿ ಅಂಜಲಿ ದಮಾನಿಯಾ ಅವರು ಪಕ್ಷಕ್ಕೆ ರಾಜೀನಾಮೆ ಹಿಂಪಡೆದಿದ್ದು, ಮಹಾರಾಷ್ಟ್ರದಲ್ಲಿ ಎಎಪಿ ಬೆಳೆಸುವುದಾಗಿ ಹೇಳಿದ್ದಾರೆ.

10.15: ಪುಣೆಯಲ್ಲಿ ಟೆಕ್ಕಿ ಹತ್ಯೆಯನ್ನು ಅಮೆರಿಕದ ಹಿಂದೂ ಸಂಘಟನೆ ಖಂಡಿಸಿದೆ.
10.00: ಆಪರೇಷನ್ ಬ್ಲೂ ಸ್ಟಾರ್ ಕುರಿತಂತೆ ಚರ್ಚೆ ಮತ್ತೆ ಆರಂಭಗೊಂಡಿದೆ. 1984ರ ಸಿಖ್ ಹತ್ಯಾಕಾಂಡದ ತನಿಖೆಯನ್ನು ವಿಶ್ವಸಂಸ್ಥೆ ವಹಿಸಿಕೊಳ್ಳಬೇಕು ಎಂದು ಸಿಖ್ ಸಂಘಟನೆಗಳು ಕೇಳಿಕೊಂಡಿವೆ, ಅಕಾಲಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

9.45: ಎಎಪಿಯಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ ಮನೀಷ್ ಸಿಸೋಡಿಯಾ ಹಾಗೂ ಯೋಗೇಂದ್ರ ಯಾದವ್ ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ.
9.30: ಸಿಯಾಟಲ್ ನ ವಿಶ್ವವಿದ್ಯಾಲಯವೊಂದರಲ್ಲಿ ಶೂಟೌಟ್ ನಡೆದಿದ್ದು ಒಬ್ಬ ಮೃತಪಟ್ಟು, ಮೂವರಿಗೆ ಗಾಯಗಳಾಗಿವೆ.
9.15: ಬೆಂಗಳೂರಿನ ಮಂಡೂರಿನ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಹೊಸ ಡೆಡ್ ಲೈನ್ ನೀಡಲಾಗಿದೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications