'ದೇಶದ ಯುವಶಕ್ತಿಗೆ ಕೌಶಲ್ಯ ತುಂಬಿ ನವಸೈನ್ಯ ಕಟ್ಟಬೇಕಿದೆ'
ನವದೆಹಲಿ, ಜುಲೈ 15: 'ಬಡತನ ನಿರ್ಮೂಲನೆ ಹೊಸ ಸೈನ್ಯ ಕಟ್ಟ್ಟೋಣ, ಗ್ರಾಮೀಣ ಭಾಗದ ಯುವಕರಿಗೆ ಹೊಸ ವಿಶ್ವಾಸ ತುಂಬೋಣ, ಕೌಶಲ್ಯಯುಕ್ತರಾಗಿ ಉದ್ಯೋಗ ರಂಗಕ್ಕೆ ಇಳಿಯೋಣ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದರು. ವಿಜ್ಞಾನ ಭವನದಲ್ಲಿ ಕೌಶಲ್ಯ ಭಾರತ ಯೋಜನೆಗೆ ಮೋದಿ ಅಧಿಕೃತವಾಗಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿರುವ ಕೌಶಲ್ಯ ಭಾರತ (ಸ್ಕಿಲ್ ಇಂಡಿಯಾ) ಕ್ಕೆ ವಿಶ್ವ ಕೌಶಲ್ಯ ದಿನಾಚರಣೆ ದಿನ (ಜುಲೈ 15) ಚಾಲನೆ ಸಿಕ್ಕಿದೆ. ಭಾರತವನ್ನು 'ಸ್ಕಾಮ್ ಇಂಡಿಯಾ' ದಿಂದ 'ಸ್ಕಿಲ್ ಇಂಡಿಯಾ' ದತ್ತ ಕೊಂಡೊಯ್ಯುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರೆ ನೀಡಿದ್ದಾರೆ. [ಏನಿದು ಕೌಶಲ್ಯ ಭಾರತ ಯೋಜನೆ? ಎಷ್ಟು ಉದ್ಯೋಗ ಸಿಗಲಿದೆ?]
ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮುದಾಯಕ್ಕೆ ಅನುಕೂಲ ನೀಡುವ 'ಕೌಶಲ್ಯ ಭಾರತ ಯೋಜನೆ' ಗೆ ಚಾಲನೆ ನೀಡಿ ಮಾತನಾಡಿದರು. ಮೋದಿ ಅವರ ಭಾಷಣ (ಒಂದೂವರೆ ಗಂಟೆ ಕಾರ್ಯಕ್ರಮದ ನಂತರ ಶುರು), ಇಡೀ ಕಾರ್ಯಕ್ರಮದ ವಿಡಿಯೋ, ಇನ್ನಿತರ ವಿವರ ಮುಂದಿದೆ...

ಪದವೀಧರರಾದರೆ ಮಾತ್ರ ಸಾಲದು
ಯುವ ಸಮುದಾಯ ಪದವೀಧರರಾದರೆ ಮಾತ್ರ ಸಾಲದು, ಕೌಶಲ್ಯ ಅಭಿವೃದ್ಧಿಯಾಗಬೇಕು. ಉದ್ಯೋಗಕ್ಕೆ ಅಣಿಯಾಗಬೇಕು ಎಂದು ಜೂನ್ 11, 2014 ರಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರು ಘೋಷಿಸಿದ್ದರು. ಕೌಶಲ್ಯ ಅಭಿವೃದ್ಧಿ ಯೋಜನೆಗೆ ಜಪಾನ್ ದೇಶದ ನೆರವು ಕೋರಲಾಗಿದೆ.
|
ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನೀತಿ
ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನೀತಿ, ನಿಯಮಗಳನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರಮೋದಿ.
|
ಸಿಲ್ಕ್ ಇಂಡಿಯಾ ಅಭಿಯಾನಕ್ಕೆ ಚಾಲನೆ
ದೆಹಲಿಯ ವಿಜ್ಞಾನಭವನದಲ್ಲಿ ಸಿಲ್ಕ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ.

ಕೌಶಲ್ಯ ಅಭಿವೃದ್ಧಿ ಸಾಲ ಯೋಜನೆ
* 5 ಸಾವಿರ ರು ನಿಂದ 1.5 ಲಕ್ಷ ರು ತನಕ ಸಾಲ ಪಡೆಯಬಹುದು. ಇದು ದೇಶದ 34 ಲಕ್ಷ ಯುವ ಸಮುದಾಯಕ್ಕೆ ನೆರವಾಗಲಿದೆ.
* ಕೌಶಲ್ಯ ಅಭಿವೃದ್ಧಿಗಾಗಿ ನೂತನ ರಾಷ್ಟ್ರೀಯ ನೀತಿ.
* ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ(ಎನ್ ಎಸ್ ಡಿಸಿ) ವತಿಯಿಂದ ಯೋಜನೆಯ ಕಾರ್ಯರೂಪ ಹಾಗೂ ನಿರ್ವಹಣೆ ದೇಶದೆಲ್ಲೆಡೆ ನಡೆಯಲಿದೆ.
|
ಪ್ರಧಾನ್ ಮಂತ್ರಿ ಅವರಿಂದ ಮಹತ್ವದ ಯೋಜನೆ
ಪ್ರಧಾನ್ ಮಂತ್ರಿ ಅವರಿಂದ ಮಹತ್ವದ ಯೋಜನೆಗೆ ಚಾಲನೆ.
ಕಾರ್ಯಕ್ರಮದ ವಿಡಿಯೋ ಇಲ್ಲಿದೆ ನೋಡಿ
ಮೋದಿ ಅವರ ಭಾಷಣ, ಇಡೀ ಕಾರ್ಯಕ್ರಮದ ವಿಡಿಯೋ ಇಲ್ಲಿದೆ ನೋಡಿ:
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications