ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ: ಗೂಗಲ್ ಪೇ ಮತ್ತು ಪೇಟಿಎಂ ಬಳಕೆದಾರರ ಪರದಾಟ
UPI services down; ನಿನ್ನೆಯಷ್ಟೇ ಎಸ್ಬಿಐ ಯುಪಿಐ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದೀಗ ಎಲ್ಲಾ ಬ್ಯಾಂಕ್ಗಳ ಯುಪಿಐ ಪಾವತಿಯಲ್ಲಿ ವ್ಯತ್ಯಯ ಉಂಟಾಗಿದೆ. ಆದ್ದರಿಂದ ಬಳಕೆದಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪೋನ್ ಪೇ, ಗೂಗಲ್ ಪೇ ಸೇರಿದಂತೆ ಇತರೆ ಬ್ಯಾಂಕ್ ವರ್ಗಾವಣೆಯ ಯುಪಿಐ ಆಪ್ಗಳಲ್ಲಿ ಸರ್ವರ್ ಡೌನ್ ಆಗಿದೆ. ಒಬ್ಬರಿಂದ ಒಬ್ಬರಿಗೆ ಹಣ ಕಳಿಸುವುದಕ್ಕೆ, ಅಂಗಡಿ ಮುಂಗಟ್ಟುಗಳಲ್ಲಿನ ಖರೀದಿಗೆ ಯುಪಿಐ ಪಾವತಿಗೆ ಸಮಸ್ಯೆ ಉಂಟಾಗಿದೆ.

ಯುಪಿಐನಿಂದ ಬಳಕೆದಾರರು ಹಣ ವರ್ಗಾವಣೆಗೆ ಸಾದ್ಯವಾಗದೇ ಸಂಕಷ್ಟ ಎದುರಿಸುತ್ತಿದ್ದಾರೆ. ತಾವು ಖರೀದಿಸಿದಂತಹ ಯಾವುದೇ ವಸ್ತುಗಳಿಗೆ ಯುಪಿಐ ಪೇಮೆಂಟ್ ಮೂಲಕ ಪಾವತಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ವರದಿಗಳನ್ನು ಮಾಡಿದ್ದಾರೆ. ತಮಗೆ ಯುಪಿಐ ಮೂಲಕ ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ ಸೇರಿದಂತೆ ಎಲ್ಲಾ ಬ್ಯಾಂಕ್ಗಳ ವ್ಯವಹಾರಕ್ಕೆ ಅಡಚಣೆ ಉಂಟಾಗಿದೆ.
ಯುಪಿಐ ಬಳಕೆದಾರರ ಪರದಾಟ: ದೇಶಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ ಸೇವೆಯು ಇತ್ತೀಚೆಗಷ್ಟೇ ಸುಮಾರು ಎರಡೂವರೆ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಈ ಸಮಯದಲ್ಲಿ, ಜನರು ಗೂಗಲ್ ಪೇ, ಫೋನ್ಪೇ ಮತ್ತು ಪೇಟಿಎಂ ನಂತಹ ಅಪ್ಲಿಕೇಶನ್ಗಳ ಮೂಲಕ ಹಣವನ್ನು ವರ್ಗಾಯಿಸುವಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಅಲ್ಲದೆ 10ಕ್ಕೂ ಹೆಚ್ಚು ಬ್ಯಾಂಕ್ಗಳ ಯುಪಿಐ ಮತ್ತು ನೆಟ್ ಬ್ಯಾಂಕಿಂಗ್ ಸೇವೆಗಳ ಮೇಲೂ ಪರಿಣಾಮ ಬೀರಿತು.
ಕಳೆದ ಬುಧವಾರ ಸಂಜೆ ಇದ್ದಕ್ಕಿದ್ದಂತೆ ಬಳಕೆದಾರರು ಅಪ್ಲಿಕೇಶನ್ಗೆ ಲಾಗಿನ್ ಆಗಲು ಮತ್ತು ನೆಟ್ ಬ್ಯಾಂಕಿಂಗ್ ಅನ್ನು ಸಹ ಪ್ರವೇಶಿಸಲು ಸಾಧ್ಯ ಆಗಲಿಲ್ಲ. ಸಂಜೆ ವೇಳೆ ದೇಶಾದ್ಯಂತ ಹಲವು ಚಿಕ್ಕ ಮಳಿಗೆಯಿಂದ ಹಿಡಿದು ಶಾಪಿಂಗ್ ಮಾಲ್ಗಳವರೆಗೆ ಯುಪಿಐ ಬಳಕೆಯಲ್ಲಿ ವ್ಯತ್ಯಯವಾಗಿ ಜನರು ಪರದಾಡಿದ ಘಟನೆ ನಡೆದಿತ್ತು.
ಮೂಲಗಳ ಪ್ರಕಾರ, ಕಳೆದ ಬುಧವಾರ ಸಂಜೆ 7ರಿಂದ 9:30 ರ ನಡುವೆ ಯುಪಿಐ ಮೂಲಕ ಪಾವತಿಗಳನ್ನು ಮಾಡುವಲ್ಲಿ ಬಳಕೆದಾರರು ಗರಿಷ್ಠ ಸಮಸ್ಯೆಗಳನ್ನು ಎದುರಿಸಿದರು. ಈ ಅವಧಿಯಲ್ಲಿ 23,000ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಆದರೆ ಈ ತಾಂತ್ರಿಕ ದೋಷಕ್ಕೆ ಕಾರಣ ತಿಳಿದುಬಂದಿರಲಿಲ್ಲ.
ಬಳಕೆದಾರರು ತಾತ್ಕಾಲಿಕ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದರು, ಇದರಿಂದಾಗಿ UPIನಲ್ಲಿ ಭಾಗಶಃ ಅಡಚಣೆ ಉಂಟಾಯಿತು ಎಂದು ರಾಷ್ಟ್ರೀಯ ಪಾವತಿ ನಿಗಮ ತಿಳಿಸಿತ್ತು. ಬಳಿಕ ಈ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ವ್ಯವಸ್ಥೆಯು ಸ್ಥಿರವಾಗಿದೆ ಎಂದು ಎನ್ಪಿಸಿಐ ತಿಳಿಸಿತ್ತು.
ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಮಧ್ಯಂತರ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು, ಇದರಿಂದ UPI ಭಾಗಶಃ ಕುಸಿತ ಕಂಡಿತ್ತು. ಅದನ್ನು ಈಗ ಪರಿಹರಿಸಲಾಗಿದೆ ಮತ್ತು ವ್ಯವಸ್ಥೆಯು ಸ್ಥಿರವಾಗಿದೆ. ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಎನ್ಪಿಸಿಐ ಸಂಸ್ಥೆ ತನ್ನ ಟ್ವಿಟರ್ ಖಾತೆಯಲ್ಲಿ ತಿಳಿಸಿತ್ತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications