ರಾಜಕೀಯ ಪಕ್ಷಗಳ ಸ್ಥಿರಾಸ್ತಿ ವೆಬ್ ಸೈಟ್ ನಲ್ಲಿ ಬಹಿರಂಗಪಡಿಸಿ
ನವದೆಹಲಿ, ಜ.4: ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿರುವ ಜಮೀನು, ಬಂಗಲೆ ಮುಂತಾದ ಸ್ಥಿರಾಸ್ತಿ ವಿವರಗಳನ್ನು ವೆಬ್ ಸೈಟ್ ನಲ್ಲಿ ಸಾರ್ವಜನಿಕರಿಗೆ ತಿಳಿಯುವಂತೆ ಬಹಿರಂಗಪಡಿಸುವ ಸಾಧ್ಯತೆಯಿದೆ. ಈ ಕುರಿತಂತೆ ನಗರಾಭಿವೃದ್ಧಿ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ನಿರ್ದೇಶನ ನೀಡಿದೆ.
ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಕೇಂದ್ರ ಕಚೇರಿ 'ರಾಬ್ರಿ ಭವನ್' ಎಂದು ಹೆಸರಿಸಿರುವ ಬಗ್ಗೆ ಪ್ರಶ್ನೆಗಳು ಎದ್ದಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ಇದಗಿಸುವಂತೆ ಸಚಿವಾಲಯಕ್ಕೆ ಆಯೋಗ ಸೂಚಿಸಿದೆ.

ಇದರ ಪರಿಣಾಮ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಎಲ್ಲಾ ನೋಂದಾಯಿತ ರಾಜಕೀಯ ಪಕ್ಷಗಳ ಅಧಿಕೃತ ಕಚೇರಿ, ಬಂಗಲೆ, ಅತಿಥಿ ಗೃಹ, ಕಡತಗಳು, ಸುತ್ತೋಲೆಗಳ ವಿವರಗಳನ್ನು ಕಲೆಹಾಕಿ ನಗರಾಭಿವೃದ್ಧಿ ಸಚಿವಾಲಯ(MoUD)ದ ವೆಬ್ ಸೈಟ್ ನಲ್ಲಿ ಪ್ರಕಟಿಸಲಿದ್ದಾರೆ. ಈ ಕಾರ್ಯ ಪೂರ್ತಿಗೊಳಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಮಾಹಿತಿ ಆಯೋಗ ನೀಡಿದೆ ಎಂದು ಮಾಹಿತಿ ಆಯುಕ್ತ ಯಶೋವರ್ಧನ್ ಆಜಾದ್ ಹೇಳಿದ್ದಾರೆ.
ಏನಿದರ ಪ್ರಯೋಜನ: ಇದರಿಂದಾಗಿ ಕುಟುಂಬ ರಾಜಕೀಯ ಮಾಡುತ್ತಾ ಪಕ್ಷದ ಕಚೇರಿ, ಬಂಗಲೆಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ರಾಜಕೀಯ ಮುಖಂಡರಿಗೆ ಕಡಿವಾಣ ಹಾಕಿದ್ದಂತಾಗುತ್ತದೆ. ಅನಧಿಕೃತ ಕಟ್ಟಡಗಳನ್ನು ಹೊಂದಿರುವ ಪಕ್ಷಗಳ ಬಗ್ಗೆ ಸಾರ್ವಜನಿಕರಿಗೆ ತಕ್ಷಣವೇ ತಿಳಿಯುತ್ತದೆ. (ಪಿಟಿಐ)
-
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications