ಅಕ್ಟೋಬರ್ 10ಕ್ಕೆ UPSC ಪೂರ್ವಭಾವಿ ಪರೀಕ್ಷೆ 2021,ಇಲ್ಲಿವೆ ಮಾರ್ಗಸೂಚಿ
ನವದೆಹಲಿ, ಅಕ್ಟೋಬರ್ 08: ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 10 ರಂದು ನಡೆಸುತ್ತಿದೆ. ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಗಳು 3 ಹಂತಗಳಲ್ಲಿ ನಡೆಯಲಿವೆ. ಈ ಸೇವೆಗಳಿಗೆ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಐಎಎಸ್, ಐಪಿಎಸ್, ಐಎಫ್ಎಸ್ ಮುಂತಾದ ಹುದ್ದೆಗಳಿಗೆ ಈ ಪರೀಕ್ಷೆಯ ಮೂಲಕವೇ ನೇಮಕಾತಿ ನಡೆಯುತ್ತದೆ.
ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು, ವೈಯಕ್ತಿಕವಾಗಿ ಅರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಸೂಚಿಸಲಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಯುಪಿಎಸ್ಸಿ ತಿಳಿಸಿದೆ.

ಇದಲ್ಲದೇ, ಪಾರದರ್ಶಕ ಬಾಟಲಿನಲ್ಲಿ ಸ್ಯಾನಿಟೈಸರ್ ಅನ್ನು ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗಲು ಅವಕಾಶ ಕೊಡಲಾಗಿದೆ. ಈ ಬಾರಿ ಲಡಾಖ್ನ ಲೇಹ್ನಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ.
ಪರಿಶೀಲನೆ ಸಮಯದಲ್ಲಿ ಅಭ್ಯರ್ಥಿಗಳು ಮಾಸ್ಕ್ ತೆಗೆಯಬೇಕೆಂದು ಅಧಿಕಾರಿಗಳು ಸೂಚಿಸಿದರೆ ತೆಗೆದು ಸಹಕರಿಸಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಲಾಗಿದೆ.
ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು, ಅಕ್ಟೋಬರ್ 10ರಂದು ನಡೆಸಲಾಗುವುದು ಎಂದು ಆಯೋಗ ತಿಳಿಸಿತ್ತು. ಕೋವಿಡ್ ಕಾರಣದಿಂದ ಕಳೆದ ವರ್ಷ ಕೂಡಾ ಸತತವಾಗಿ ನಾಲ್ಕು ಬಾರಿ ಪರೀಕ್ಷೆ ರದ್ದು ಪಡಿಸಿ, ಮುಂದೂಡಲಾಗಿತ್ತು.
ಐಎಎಸ್, ಐಎಫ್ಎಸ್ ಹಾಗೂ ಐಪಿಎಸ್ ನೇಮಕಾತಿಗಾಗಿ ವಾರ್ಷಿಕವಾಗಿ ನಾಗರಿಕ ಸೇವಾ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ಕಳೆದ ಅವಧಿಯ ಮುಖ್ಯ ಪರೀಕ್ಷೆ ಮುಕ್ತಾಯವಾಗಿದೆ. ಆದರೆ, ಸಂದರ್ಶನ ಪ್ರಕ್ರಿಯೆ ಆರಂಭಕ್ಕೆ ಕೋವಿಡ್ ಮತ್ತೊಮ್ಮೆ ಅಡ್ಡಿಪಡಿಸಿತ್ತು. ಯುಪಿಎಸ್ಸಿ ಇತರೆ ಪರೀಕ್ಷೆಗಳನ್ನು ಮುಂದೂಡಿತ್ತು.
ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಪ್ರಸ್ತುತ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1ಕ್ಕಿಂತ ಕಡಿಮೆ ಅಂದರೆ ಶೇ.0.71 ಇದು 2020ರ ಮಾರ್ಚ್ ತಿಂಗಳಲ್ಲಿ ದಾಖಲಾದ ಪ್ರಮಾಣಕ್ಕಿಂತ ಕಡಿಮೆ ಎನ್ನಲಾಗಿದೆ.
ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2, 40, 221ಕ್ಕೆ ಕುಸಿದಿದ್ದು, ಇದು ಕಳೆದ 205 ದಿನಗಳಲ್ಲೇ ಕಡಿಮೆ ಎನ್ನಲಾಗಿದೆ. ಇನ್ನು ಚೇತರಿಕೆ ಪ್ರಮಾಣ ಶೇ.97.96ಕ್ಕೆ ಏರಿಕೆಯಾಗಿದ್ದು, ಇದು 2020 ಮಾರ್ಚ್ ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24, 963 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಕೆ ಪ್ರಮಾಣ 3, 32, 25, 221ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ಮಾರಕ ಕೊರೊನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಪ್ರಸ್ತುತ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1ಕ್ಕಿಂತ ಕಡಿಮೆ ಅಂದರೆ ಶೇ.0.71 ಇದು 2020ರ ಮಾರ್ಚ್ ತಿಂಗಳಲ್ಲಿ ದಾಖಲಾದ ಪ್ರಮಾಣಕ್ಕಿಂತ ಕಡಿಮೆ ಎನ್ನಲಾಗಿದೆ.
ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2, 40, 221ಕ್ಕೆ ಕುಸಿದಿದ್ದು, ಇದು ಕಳೆದ 205 ದಿನಗಳಲ್ಲೇ ಕಡಿಮೆ ಎನ್ನಲಾಗಿದೆ. ಇನ್ನು ಚೇತರಿಕೆ ಪ್ರಮಾಣ ಶೇ.97.96ಕ್ಕೆ ಏರಿಕೆಯಾಗಿದ್ದು, ಇದು 2020 ಮಾರ್ಚ್ ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24, 963 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಕೆ ಪ್ರಮಾಣ 3, 32, 25, 221ಕ್ಕೆ ಏರಿಕೆಯಾಗಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ












Click it and Unblock the Notifications