ಯುಪಿಎಸ್ಸಿ ಅರ್ಹತಾ ಪರೀಕ್ಷಾ ಫಲಿತಾಂಶ ಪ್ರಕಟ
ನವದೆಹಲಿ, ಅ.13: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) ಅರ್ಹತಾ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಯುಪಿಎಸ್ಸಿ ವೆಬ್ ತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು.ಒಟ್ಟು 15 ಸಾವಿರ ಅಭ್ಯರ್ಥಿಗಳು ಪ್ರಾಥಮಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
2015ನೇ ಸಾಲಿನ ಕೇಂದ್ರ ನಾಗರಿಕ ಸೇವೆಗಳ ಅರ್ಹತಾ ಪರೀಕ್ಷೆಯ ಫಲಿತಾಂಶಕ್ಕಾಗಿ www.upsc.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಒಟ್ಟಾರೆ, 15,008 ಅಭ್ಯರ್ಥಿಗಳು ಪ್ರಾಥಮಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಯುಪಿಎಸ್ಸಿ ಕಾರ್ಯದರ್ಶಿ ಆಶೀಂ ಖುರಾನಾ ಹೇಳಿದ್ದಾರೆ. [ಯುಪಿಎಸ್ಸಿ ಫಲಿತಾಂಶ : ಕರ್ನಾಟಕದಿಂದ 56 ಜನ ಆಯ್ಕೆ]

ಈ ಬಾರಿ ಪರೀಕ್ಷೆಗೆ 9,45,908 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 23ರಂದು ನಡೆದ ಅರ್ಹತಾ ಪರೀಕ್ಷೆಯಲ್ಲಿ 4.63 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಅರ್ಜಿ ಹಾಕಿದ ಶೇ 49ರಷ್ಟು ಜನ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ 50 ದಿನಗಳಲ್ಲಿ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಯುಪಿಎಸ್ಸಿ ಕಾರ್ಯದರ್ಶಿ ಆಶೀಂ ಖರಾನಾ ತಿಳಿಸಿದ್ದಾರೆ.[ಯುಪಿಎಸ್ಸಿ: ಕುಬ್ಜ ಇರಾಳದ ಎತ್ತರದ ಸಾಧನೆ]
ಪರೀಕ್ಷಾರ್ಥಿಗಳ ದೂರು ಆಲಿಸಲು ಮಾಹಿತಿ ಕೇಂದ್ರ ಆರಂಭಿಸಿದ್ದು, ಅಭ್ಯರ್ಥಿಗಳು ದೂ. ಸಂಖ್ಯೆ 011-23385271, 011-23098543 ಮತ್ತು 011-23381125ಗೆ ಸಂಪರ್ಕಿಸಬಹುದು. ಬೆಳಗ್ಗೆ 10 ರಿಂದ ಸಂಜೆ 5ರ ತನಕ ಕಚೇರಿ ತೆರೆದಿರುತ್ತದೆ. ಮುಖ್ಯ ಪರೀಕ್ಷೆ ಡಿಸೆಂಬರ್ 18, 2015ರಂದು ನಡೆಯಲಿದೆ.
ಐಎಎಸ್, ಐಎಫ್ ಎಸ್ ಹಾಗೂ ಐಪಿಎಸ್ ಹಾಗೂ ಇನ್ನಿತರ ಕೇಂದ್ರ ನಾಗರಿಕ ಸೇವೆಗಳ ಪರೀಕ್ಷೆಗಳು ಅರ್ಹತಾ ಸುತ್ತಿನ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಪ್ರಕ್ರಿಯೆ ನಡೆಯಲಿದೆ.(ಪಿಟಿಐ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications