ಸೈನಿಕರ ತ್ಯಾಗ ವ್ಯರ್ಥವಾಗಲ್ಲ, ಉರಿ ದಾಳಿ ಮರೆಯಲ್ಲ: ಮೋದಿ
ಕೋಳಿಕ್ಕೋಡ್, ಸೆಪ್ಟೆಂಬರ್ 25: ಉರಿ ದಾಳಿಯನ್ನು ಮರೆಯುವುದಿಕ್ಕೆ ಸಾಧ್ಯವಿಲ್ಲ ಮತ್ತು 18 ಯೋಧರನ್ನು ಕಳೆದುಕೊಂಡಿರುವುದು ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ.
ಕಳೆದ ಭಾನುವಾರ ಉರಿಯಲ್ಲಿ ನಡೆದ ಉಗ್ರಗಾಮಿಗಳ ದಾಳಿ ನಂತರ ಕೇರಳದಲ್ಲಿ ಭಾಗವಹಿಸಿದ್ದ ಮೊದಲ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಭಯೋತ್ಪಾದನೆ ರಫ್ತು ಮಾಡುತ್ತಿರುವ, ಅಮಾಯಕರನ್ನು ಕೊಂದು, ರಕ್ತಪಾತಕ್ಕೆ ಕಾರಣವಾಗುತ್ತಿರುವ ಪಾಕಿಸ್ತಾನದ ಬಣ್ಣವನ್ನು ಬಯಲು ಮಾಡುತ್ತೇವೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯನ್ನಾಗಿ ಮಾಡುತ್ತೇವೆ ಎಂದರು.[ಗಡಿಯಾಚೆಗಿನ ಕಾರ್ಯಾಚರಣೆ ನಡೆದಿಲ್ಲ: ಭಾರತೀಯ ಸೇನೆ]

"ಉರಿ ದಾಳಿಯನ್ನು ಭಾರತ ಮರೆಯುವುದಿಲ್ಲ ಎಂಬುದನ್ನು ಉಗ್ರಗಾಮಿಗಳು ಕೇಳಿಸಿಕೊಳ್ಳಲಿ. ಪಾಕಿಸ್ತಾನದ ನಾಯಕರು ತಿಳಿದುಕೊಳ್ಳಲಿ, ನಮ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ" ಎಂದು ಖಡಕ್ ಸಂದೇಶ ರವಾನಿಸಿದರು. ಕೋಳಿಕ್ಕೋಡ್ ನಲ್ಲಿ ನಡೆದ ಬೃಹತ್ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉರಿ ಸೇನಾ ನೆಲೆಯ ಮೇಲಿನ ದಾಳಿ ಬಗ್ಗೆ ಹೇಳಿಕೆ ನೀಡಿರುವ್ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರದ ಜನರ ಮೇಲೆ ನಡೆದ ದೌರ್ಜನ್ಯದ 'ಪ್ರತೀಕಾರದ ಕೃತ್ಯ' ಎಂದು ಹೇಳುವ ಮೂಲಕ ಭಾರತವನ್ನು ಮತ್ತಷ್ಟು ಕೆರಳಿಸಿದ್ದಾರೆ.[ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಇಪ್ಪತ್ತು ಉಗ್ರರ ಹತ್ಯೆ?]
ಕಾಶ್ಮೀರ ಹಿಂಸಾಚಾರದಲ್ಲಿ ಮೃತಪಟ್ಟವರ, ಗಾಯಗೊಂಡವರ ಸಂಬಂಧಿಕರೋ ಆಪ್ತರೋ ಕೋಪದಿಂದ ಈ ದಾಳಿ ನಡೆಸಿರಬಹುದು ಎಂದು ಲಂಡನ್ ನಲ್ಲಿ ಷರೀಫ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications