ಸೈನಿಕರ ತ್ಯಾಗ ವ್ಯರ್ಥವಾಗಲ್ಲ, ಉರಿ ದಾಳಿ ಮರೆಯಲ್ಲ: ಮೋದಿ
ಕೋಳಿಕ್ಕೋಡ್, ಸೆಪ್ಟೆಂಬರ್ 25: ಉರಿ ದಾಳಿಯನ್ನು ಮರೆಯುವುದಿಕ್ಕೆ ಸಾಧ್ಯವಿಲ್ಲ ಮತ್ತು 18 ಯೋಧರನ್ನು ಕಳೆದುಕೊಂಡಿರುವುದು ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ.
ಕಳೆದ ಭಾನುವಾರ ಉರಿಯಲ್ಲಿ ನಡೆದ ಉಗ್ರಗಾಮಿಗಳ ದಾಳಿ ನಂತರ ಕೇರಳದಲ್ಲಿ ಭಾಗವಹಿಸಿದ್ದ ಮೊದಲ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಭಯೋತ್ಪಾದನೆ ರಫ್ತು ಮಾಡುತ್ತಿರುವ, ಅಮಾಯಕರನ್ನು ಕೊಂದು, ರಕ್ತಪಾತಕ್ಕೆ ಕಾರಣವಾಗುತ್ತಿರುವ ಪಾಕಿಸ್ತಾನದ ಬಣ್ಣವನ್ನು ಬಯಲು ಮಾಡುತ್ತೇವೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯನ್ನಾಗಿ ಮಾಡುತ್ತೇವೆ ಎಂದರು.[ಗಡಿಯಾಚೆಗಿನ ಕಾರ್ಯಾಚರಣೆ ನಡೆದಿಲ್ಲ: ಭಾರತೀಯ ಸೇನೆ]

"ಉರಿ ದಾಳಿಯನ್ನು ಭಾರತ ಮರೆಯುವುದಿಲ್ಲ ಎಂಬುದನ್ನು ಉಗ್ರಗಾಮಿಗಳು ಕೇಳಿಸಿಕೊಳ್ಳಲಿ. ಪಾಕಿಸ್ತಾನದ ನಾಯಕರು ತಿಳಿದುಕೊಳ್ಳಲಿ, ನಮ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ" ಎಂದು ಖಡಕ್ ಸಂದೇಶ ರವಾನಿಸಿದರು. ಕೋಳಿಕ್ಕೋಡ್ ನಲ್ಲಿ ನಡೆದ ಬೃಹತ್ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉರಿ ಸೇನಾ ನೆಲೆಯ ಮೇಲಿನ ದಾಳಿ ಬಗ್ಗೆ ಹೇಳಿಕೆ ನೀಡಿರುವ್ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರದ ಜನರ ಮೇಲೆ ನಡೆದ ದೌರ್ಜನ್ಯದ 'ಪ್ರತೀಕಾರದ ಕೃತ್ಯ' ಎಂದು ಹೇಳುವ ಮೂಲಕ ಭಾರತವನ್ನು ಮತ್ತಷ್ಟು ಕೆರಳಿಸಿದ್ದಾರೆ.[ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಇಪ್ಪತ್ತು ಉಗ್ರರ ಹತ್ಯೆ?]
ಕಾಶ್ಮೀರ ಹಿಂಸಾಚಾರದಲ್ಲಿ ಮೃತಪಟ್ಟವರ, ಗಾಯಗೊಂಡವರ ಸಂಬಂಧಿಕರೋ ಆಪ್ತರೋ ಕೋಪದಿಂದ ಈ ದಾಳಿ ನಡೆಸಿರಬಹುದು ಎಂದು ಲಂಡನ್ ನಲ್ಲಿ ಷರೀಫ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications