Get Updates
Get notified of breaking news, exclusive insights, and must-see stories!

ಸೈನಿಕರ ಸೆಣಸಾಟ: ಭಾರತ-ಚೀನಾ ಗಡಿ ಘರ್ಷಣೆ ಬಗ್ಗೆ ಅಮೆರಿಕಾ ಹೇಳುವುದೇನು?

ನವದೆಹಲಿ, ಡಿಸೆಂಬರ್ 14: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಘರ್ಷಣೆಯ ನಂತರ ಭಾರತ ಮತ್ತು ಚೀನಾ ಎರಡೂ ತ್ವರಿತವಾಗಿ ಬೇರ್ಪಟ್ಟಿದ್ದಕ್ಕೆ ಯುಎಸ್ ಅಧ್ಯಕ್ಷ ಜೋ ಬೈಡೆನ್ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮಂಗಳವಾರ (ಸ್ಥಳೀಯ ಕಾಲಮಾನ) ಪತ್ರಿಕಾಗೋಷ್ಠಿಯಲ್ಲಿ, ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಮಾತನಾಡಿದರು. ಈ ಪರಿಸ್ಥಿತಿಯನ್ನು ಯುಎಸ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ವಿವಾದಿತ ಗಡಿಗಳನ್ನು ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾಧ್ಯಮಗಳನ್ನು ಬಳಸಿಕೊಳ್ಳಲು ಎರಡೂ ಕಡೆಯವರನ್ನು ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.

"ಎರಡೂ ಕಡೆಯವರು ಘರ್ಷಣೆಯಿಂದ ಶೀಘ್ರವಾಗಿ ಹೊರಬಂದಿರುವುದಕ್ಕೆ ನಮಗೆ ಸಂತೋಷವಾಗಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವಿವಾದಿತ ಗಡಿಗಳ ಕುರಿತು ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾಧ್ಯಮವನ್ನು ಬಳಸಿಕೊಳ್ಳಲು ಭಾರತ ಮತ್ತು ಚೀನಾಗೆ ಪ್ರೋತ್ಸಾಹಿಸುತ್ತೇವೆ," ಎಂದು ಭಾರತ-ಚೀನಾ ಘರ್ಷಣೆ ಕುರಿತು ಕರೀನ್ ಜೀನ್-ಪಿಯರ್ ಉಲ್ಲೇಖಿಸಿದರು.

ಭಾರತೀಯ ಯೋಧರಿಂದ ಚೀನಾ ಸೈನಿಕರಿಗೆ ಉತ್ತರ

ಭಾರತೀಯ ಯೋಧರಿಂದ ಚೀನಾ ಸೈನಿಕರಿಗೆ ಉತ್ತರ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಶುಕ್ರವಾರ ಭಾರತ ಮತ್ತು ಚೀನಾ ಸೈನಿಕರ ನಡುವೆ ಮುಖಾಮುಖಿಯಾಗಿದ್ದು, ಎರಡೂ ಕಡೆಯ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೀಗೆ ಮುಖಾಮುಖಿಯಾದ ಪ್ರದೇಶದಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಚೀನಾ ಸೈನಿಕರಿಗೆ ತಕ್ಕ ಪ್ರತ್ಯುತ್ತರ ನೀಡಿದರು. ಈ ಘರ್ಷಣೆಯಲ್ಲಿ ಗಾಯಗೊಂಡಿರುವ ಚೀನಾ ಸೈನಿಕರ ಸಂಖ್ಯೆ ಭಾರತೀಯ ಸೈನಿಕರ ಸಂಖ್ಯೆಗಿಂತ ಹೆಚ್ಚು ಎಂದು ಹೇಳಲಾಗುತ್ತಿದೆ.

ಘರ್ಷಣೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

ಘರ್ಷಣೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

ಕಳೆದ ಡಿಸೆಂಬರ್ 9ರಂದು ಅರುಣಾಚಲದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದಲ್ಲಿ ನೈಜ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಉಲ್ಲಂಘಿಸದಂತೆ ಭಾರತೀಯ ಸೇನಾ ಪಡೆಗಳು ಚೀನಾ ಸೇನೆಯನ್ನು ಧೈರ್ಯದಿಂದ ತಡೆದವು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

"ಯಾವುದೇ ಭಾರತೀಯ ಸೈನಿಕರು ಸಾವನ್ನಪ್ಪಿಲ್ಲ ಅಥವಾ ತೀವ್ರವಾಗಿ ಗಾಯಗೊಂಡಿಲ್ಲ ಎಂದು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ನಮ್ಮ ಸೇನೆಯು ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸುತ್ತದೆ ಎಂದು ಸದನಕ್ಕೆ ಭರವಸೆ ನೀಡುತ್ತೇನೆ. ನಮ್ಮ ಸೇನೆಯು ಯಾವುದೇ ಉಲ್ಲಂಘನೆಯನ್ನು ನಿಭಾಯಿಸಲು ಸಿದ್ಧವಾಗಿದೆ. ನಮ್ಮ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಧೈರ್ಯವನ್ನು ಸದನ ಬೆಂಬಲಿಸುತ್ತದೆ ಎಂದು ದೃಢವಾಗಿ ನಂಬುತ್ತೇನೆ," ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಹೇಳಿದರು.

ಚೀನಾ ಸೈನಿಕರಿಗೆ ಬ್ರೇಕ್ ಹಾಕಿದ ಭಾರತೀಯ ಯೋಧರು

ಚೀನಾ ಸೈನಿಕರಿಗೆ ಬ್ರೇಕ್ ಹಾಕಿದ ಭಾರತೀಯ ಯೋಧರು

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಮುಖಾಮುಖಿಯಲ್ಲಿ, ಪಿಎಲ್ಎ ಪಡೆಗಳು ವಿವಿಧ ಪದಾತಿ ದಳಗಳಿಗೆ ಸೇರಿದ ಭಾರತೀಯ ಸೇನೆಯ ಮೂರು ತುಕಡಿಗಳೊಂದಿಗೆ ಘರ್ಷಣೆ ನಡೆಸಿದವು. ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿದ್ದ ಯಥಾಸ್ಥಿತಿಯನ್ನು ಬದಲಾಯಿಸುವ ಅವರ ಪ್ರಯತ್ನವನ್ನು ಭಾರತೀಯ ಯೋಧರು ವಿಫಲಗೊಳಿಸಿದರು.

ಜಮ್ಮು ಮತ್ತು ಕಾಶ್ಮೀರ ರೈಫಲ್ಸ್, ಜಾಟ್ ರೆಜಿಮೆಂಟ್ ಮತ್ತು ಸಿಖ್ ಲೈಟ್ ಇನ್‌ಫಾಂಟ್ರಿ ಸೇರಿದಂತೆ ಮೂರು ವಿಭಿನ್ನ ಬೆಟಾಲಿಯನ್‌ಗಳಿಗೆ ಸೇರಿದ ಪಡೆಗಳು ಕಳೆದ ವಾರ ಘರ್ಷಣೆಯ ಸ್ಥಳದಲ್ಲಿ ಚೀನೀಯರು ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿದಾಗ ಸ್ಥಳದಲ್ಲಿ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಚೀನಾ ಸೈನಿಕರದ್ದು ಪ್ರತಿವರ್ಷ ಇದೇ ಕಥೆ

ಚೀನಾ ಸೈನಿಕರದ್ದು ಪ್ರತಿವರ್ಷ ಇದೇ ಕಥೆ

ಚೀನಿಯರು ಘರ್ಷಣೆಗಾಗಿ ಕ್ಲಬ್‌ಗಳು, ಕೋಲುಗಳು ಮತ್ತು ಇತರ ಸಲಕರಣೆಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದರು. ಎದುರಾಳಿಯ ಉದ್ದೇಶಗಳನ್ನು ತಿಳಿದಿದ್ದರಿಂದ ಭಾರತೀಯ ಸೈನಿಕರು ಸಹ ಘರ್ಷಣೆಗೆ ಸಿದ್ಧರಾಗಿದ್ದರು.

ಭಾರತೀಯ ಸೇನೆಯ ಒಂದು ತುಕಡಿಯು ಅಲ್ಲಿಂದ ಹೊರಡುವ ಹಾದಿಯಲ್ಲಿತ್ತು. ಹೊಸ ಘಟಕವನ್ನು ಆ ಪ್ರದೇಶಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಆದಾಗ್ಯೂ, ಈ ಪ್ರದೇಶದಲ್ಲಿ ಎರಡೂ ಘಟಕಗಳಿದ್ದ ದಿನದಂದು ಚೀನಿಯರು ಘರ್ಷಣೆಯನ್ನು ಆರಿಸಿಕೊಂಡರು. ಚೀನಾದ ಸೇನಾ ಪಡೆಗಳು ಪ್ರತಿ ವರ್ಷವೂ ಈ ಪ್ರದೇಶಗಳನ್ನು ಪ್ರವೇಶಿಸಲು ಪ್ರಯತ್ನಿಸುತ್ತವೆ. ಭಾರತವು ಅದಕ್ಕೆ ಅನುಮತಿಸದೇ ಹಕ್ಕು ರೇಖೆಯನ್ನು ಗಸ್ತು ತಿರುಗಲು ಪ್ರಯತ್ನಿಸುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+