ಉತ್ತರಪ್ರದೇಶ ಚುನಾವಣಾ ಸಮೀಕ್ಷೆ: ಜಾತಿ ಲೆಕ್ಕಾಚಾರದಲ್ಲಿ ಯಾರು ಮುಂದೆ?
ಖಾಸಗಿ ಸಂಸ್ಥೆಯೊಂದು ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮುನ್ನ ನಡೆಸಿದ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಅಲ್ಲಿ ಅನುಕೂಲಕರವಾದ ವಾತಾವರಣವಿದೆ.
ನವದೆಹಲಿ, ಫೆ 8: ಇನ್ನೇನು ಮೂರು ದಿನದಲ್ಲಿ (ಫೆ 11) ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಅಲ್ಲಿ ಅನುಕೂಲಕರವಾದ ವಾತಾವರಣವಿದೆ.
ಫೋರ್ತ್ ಲಯನ್ ಟೆಕ್ನಾಲಜೀಸ್ ಸಂಸ್ಥೆ ದೂರವಾಣಿ ಮೂಲಕ ನಡೆಸಿದ ಸಮೀಕ್ಷೆಯಲ್ಲಿ, ಬಿಜೆಪಿ ತನ್ನ ಸಮೀಪದ ಎದುರಾಳಿಗಳಾದ ಎಸ್ಪಿ- ಕಾಂಗ್ರೆಸ್ ಮೈತ್ರಿಕೂಟಕ್ಕಿಂತ ಮುಂದಿದೆ ಎಂದು ಸರ್ವೇಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಆದರೆ ಸಮೀಕ್ಷೆಯಲ್ಲಿ ಭಾಗವಹಿಸಿದವರ ಪೈಕಿ ಶೇ. 40ರಷ್ಟು ಜನ, ಚುನಾವಣೆ ಹತ್ತಿರದಲ್ಲಿದ್ದರೂ ಯಾವ ಪಕ್ಷಕ್ಕೆ ಮತ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ.

ಒಟ್ಟಾರೆ ಫಲಿತಾಂಶದ ಪ್ರಕಾರ, ಸಮೀಕ್ಷೆಯಲ್ಲಿ ಭಾಗವಹಿಸಿದ್ದವರಲ್ಲಿ ಬಿಜೆಪಿ ಪರವಾಗಿ ಶೇ. 28, ಎಸ್ಪಿ ಪರವಾಗಿ ಶೇ. 18, ಬಿಎಸ್ಪಿ ಪರವಾಗಿ ಶೇ. 4 ಮತ್ತು ಕಾಂಗ್ರೆಸ್ ಪರವಾಗಿ ಶೇ. 1ರಷ್ಟು ಮಂದಿ ಜೈ ಎಂದಿದ್ದಾರೆ.
ಜಾತಿ ಲೆಕ್ಕಾಚಾರದ ಪ್ರಕಾರ ಸಮೀಕ್ಷೆಯಲ್ಲಿ ದಲಿತರು ಶೇ. 22, ಹಿಂದುಳಿದ ವರ್ಗ ಶೇ. 33 ಮತ್ತು ಮುಸ್ಲಿಂ ಸಮುದಾಯ ಶೇ. 11 ಬಿಜೆಪಿ ಪರವಾಗಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಇನ್ನು ಸಮಾಜವಾದಿ ಪಕ್ಷದ ಪರ ಮುಸ್ಲಿಮರು ಶೇ. 29, ದಲಿತರು ಶೇ. 14, ಬಹುಜನ ಸಮಾಜಪಕ್ಷದ ಪರ ದಲಿತರು ಶೇ. 40, ಹಿಂದುಳಿದ ವರ್ಗ ಶೇ. 22 ಮತ್ತು ಮುಸ್ಲಿಮರು ಶೇ.16ರಷ್ಟು ಒಲವು ತೋರಿದ್ದಾರೆ.
ಏಳು ಹಂತದಲ್ಲಿ ನಡೆಯುವ, 403 ಸದಸ್ಯ ಬಲದ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಮಾರ್ಚ್ ಹನ್ನೊಂದರಂದು ಹೊರಬೀಳಲಿದೆ. (ಚಿತ್ರ:ಪಿಟಿಐ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications