ರಸಗುಲ್ಲಾ ಬೇಕು... ಮದುವೆ ಸಮಾರಂಭದಲ್ಲಿ ರಸಗುಲ್ಲಾಕ್ಕಾಗಿ ಜಗಳ: 6 ಮಂದಿಗೆ ಗಾಯ!
ಆಗ್ರಾ ನವೆಂಬರ್ 21: ರಸಗುಲ್ಲಾಕ್ಕಾಗಿ ನಡೆದ ಜಗಳದಲ್ಲಿ ಜನ ಗಾಯಗೊಂಡ ಘಟನೆ ಉತ್ತರಪ್ರದೇಶದಲ್ಲಿ ಮತ್ತೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಮದುವೆ ಸಮಾರಂಭದಲ್ಲಿ ರಸಗುಲ್ಲಾಗಳ ಕೊರತೆಯಿಂದಾಗಿ ನಡೆದ ಮಾರಾಮಾರಿಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದರಿಂದ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್ಎಚ್ಒ ಅನಿಲ್ ಶರ್ಮಾ ತಿಳಿಸಿದ್ದಾರೆ.

ಭಾನುವಾರ ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು. ಸಮಾರಂಭದಲ್ಲಿ ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಾಮೆಂಟ್ ಮಾಡಿದರು. ಇದು ಜಗಳಕ್ಕೆ ಕಾರಣವಾಗಿದೆ. ಈ ಜಗಳದಲ್ಲಿ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ.
ಮತ್ತೊಂದು ಘಟನೆ
ಕಳೆದ ವರ್ಷ ಅಕ್ಟೋಬರ್ನಲ್ಲಿ ಎತ್ಮಾದ್ಪುರದಲ್ಲಿ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆಯ ಜಗಳದಲ್ಲಿ ಒಬ್ಬ ವ್ಯಕ್ತಿಯನ್ನು ಕೊಲ್ಲಲಾಯಿತು. ಎತ್ಮಾದ್ಪುರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಸಿಹಿತಿಂಡಿಗಳ ಕೊರತೆಯಿಂದಾಗಿ ಪರಸ್ಪರ ಹಲ್ಲೆ ನಡೆದು 22ರ ಹರೆಯದ ಯುವಕ ಸಾವನ್ನಪ್ಪಿದನು. ಜೊತೆಗೆ ಐವರು ಗಾಯಗೊಂಡಿದ್ದರು.
ಮೊಹಲ್ಲಾ ಶೈಖಾನ್ ನಿವಾಸಿ ಉಸ್ಮಾನ್ ಅವರ ಪುತ್ರಿಯರ ವಿವಾಹ ಸಮಾರಂಭದಲ್ಲಿ ಈ ಘಟನೆ ನಡೆದಿತ್ತು. ರಸಗುಲ್ಲಾ (ಸಿಹಿತಿಂಡಿ) ಕೊರತೆಯಿಂದಾಗಿ ವಧು ಮತ್ತು ವರನ ಕಡೆಯವರ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯ ಕಂಡಿತು.
ಎತ್ಮಾದ್ಪುರ್ ಸರ್ಕಲ್ ಆಫೀಸರ್ ರವಿಕುಮಾರ್ ಗುಪ್ತಾ, "ಸಿಹಿ ಕೊರತೆಯ ಬಗ್ಗೆ ವಾದವು ಗಂಭೀರ ಜಗಳಕ್ಕೆ ತಿರುಗಿತು. ಒಬ್ಬ ವ್ಯಕ್ತಿ ಹಾಜರಿದ್ದವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸನ್ನಿ (22) ಅವರನ್ನು ಮೊದಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ನಂತರ ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ದಾಳಿಯಲ್ಲಿ ಗಾಯಗೊಂಡ ಐವರನ್ನು ಎತ್ಮಾದ್ಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ'' ಎಂದು ತಿಳಿಸಿದರು.
ಸಂತ್ರಸ್ತೆಯ ಕುಟುಂಬದವರು ದೂರು ದಾಖಲಿಸಿದ್ದಾರೆ ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಸಂತ್ರಸ್ತೆಯ ಕುಟುಂಬದವರ ದೂರಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗುಪ್ತಾ ತಿಳಿಸಿದ್ದಾರೆ. ಇಂತಹ ಕ್ಷುಲ್ಲಕ ಕಾರಣಕ್ಕೆ ಹಲ್ಲೆಯಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಆತಂಕ ಸೃಷ್ಟಿಯಾಗಿದ್ದು ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಹೆಚ್ಚಾಗಿದೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Anupama Gowda: ನನ್ನ ಮದುವೆಗೆ ನನ್ನನ್ನೂ ಕರೆಯಿರಿ: ಎಂಗೇಜ್ಮೆಂಟ್ ಸುದ್ದಿ ಹಬ್ಬಿಸಿದವರಿಗೆ ನಿರೂಪಕಿ ಅನುಪಮಾ ಗೌಡ ಕ್ಲಾರಿಟಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications