UP Fire Crackers Erupts: ಹಬ್ಬದ ಸಡಗರದಲ್ಲಿ ಯುಪಿಯಲ್ಲಿ ಪಟಾಕಿ ದುರಂತ, ಆಗಿದ್ದೇನು?
ನವದೆಹಲಿ, ನವೆಂಬರ್, 12: ದೇಶವು ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದಾಗ ಉತ್ತರ ಪ್ರದೇಶದ ಮಥುರಾ ನಗರದ ಹೊರವಲಯದ ಗೋಪಾಲಬಾಗ್ ಪ್ರದೇಶದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 9 ಮಂದಿಗೆ ಗಂಭೀರ ಗಾಯಗಳಾಗಿವೆ.
ಗೋಪಾಲಬಾಗ್ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುವಾಗ ಭಾನುವಾರ ಬೆಂಕಿ ದುರಂತ ಸಂಭವಿಸಿದೆ. ಮೊದಲು ಒಂದೇ ಪಟಾಕಿ ಅಂಗಡಿಗೆ ತಗುಲಿದ್ದ ಬೆಂಕಿ ನೋಡ ನೋಡುತ್ತಿದ್ದಂತೆ ಏಳು ಮಳಿಗೆಗಳಿಗೆ ವ್ಯಾಪಿಸಿದೆ. ಈ ವೇಳೆ ಪಟಾಕಿ ಮಾರಾಟದಲ್ಲಿ ತೊಡಗಿದ್ದವರ ಪೈಕಿ ಒಟ್ಟು ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ದೀಪಾಳಿ ಹಿನ್ನೆಲೆಯಲ್ಲಿ ಇಲ್ಲಿನ ಗೋಪಾಲಬಾಗ್ ಪ್ರದೇಶದಲ್ಲಿ ಪರಿಣಿತರನ್ನು ಹೊಂದಿದ್ದ ಏಳು ಅಂಗಡಿಗಳ ಪಟಾಕಿ ಮಾರಾಟ ಮಾಡುತ್ತಿದ್ದರು. ಇದೇ ವೇಳೆ ಸಂಜೆ ದಿಢೀರ್ನೆ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿವೆ. ಪ್ರಾಥಮಿಕ ತನಿಖೆ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ ಎಂದು ರಾಯಾ ಪೊಲೀಸ್ ಠಾಣೆಯ SHO ಅಜಯ್ ಕಿಶೋರ್ ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಗೂ ಗಾಯ
ಮುಂಜಾಗೃತ ದೃಷ್ಟಿಯಿಂದ ಮಾರುಕಟ್ಟೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ನಿಯೋಜಿಸಲಾಗಿತ್ತು. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕದ ಚಂದ್ರಶೇಖರ್ ಅವರ ಸಹ ಅಂಗಡಿಗಳಿಗೆ ಹತ್ತಿದ್ದ ಬೆಂಕಿ ನಂದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮಳಿಗೆಯಲ್ಲಿದ್ದ ಜನರನ್ನು ರಕ್ಷಿಸುವ ವೇಳೆ ಅವರಿಗೂ ಸಹ ಸುಟ್ಟ ಗಾಯಗಳಾಗಿವೆ.

ಈ ಪಟಾಖಿ ದುರಂತದಲ್ಲಿ ಏಳು ಅಂಗಡಿಗಳು ಅಧಿಕ ಹಾನಿ ಆಗಿದೆ. ಈ ಅಂಡಿ ಮಾಲೀಕರು ಪಟಾಕಿ ರಕ್ಷಿಸಿಕೊಳ್ಳಲು ಹೋಗಿ ಅವರು ಸಹ ಗಾಯಗೊಂಡ ಘಟನೆ ನಡೆದಿದೆ. ಅಗ್ನಿಶಾಮಕ ಚಂದ್ರಶೇಖರ್ ಜೊತೆಗೆ ಮತ್ತೊಬ್ಬ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ವಿವಿಧ ಆಯಾಮಗದಲ್ಲಿ ಪೊಲೀಸ್ ತನಿಖೆ
ಬೆಂಕಿಗೆ ಆಹುತಿಯಾದ ಈ ಮಳಿಗೆಗಳು ಪಟಾಕಿಗಳನ್ನು ಮಾರಾಟ ಮಾಡಲು ಪರವಾನಗಿ ಪಡೆದಿವೆ. ಸರ್ಕಾರದ ಮಾರ್ಗಸೂಚಿಯಂತೆ ಹೊರವಲಯದಲ್ಲಿ ಮಾರಾಟ ನಡೆಸುತ್ತಿದ್ದವು. ಸದ್ಯ ಗಾಯಗೊಂಡ ಎಲ್ಲರು ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಪೊಲೀಸರು ಬೆಂಕಿಗೆ ಕೇವಲ ಶಾರ್ಟ್ ಸರ್ಕೂಟ್ ಒಂದೇ ಕಾರಣವಾ ಅಥವಾ ಬೇರೆ ಯಾರಾದರೂ ದುರದ್ದೇಶದಿಂದ ಹೀಗೆ ಮಾಡಿದರಾ ಎಂಬ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications