ಯುಪಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿ ಪತ್ತೆ
ಲಕ್ನೋ, ಅಕ್ಟೋಬರ್ 25: ಉತ್ತರ ಪ್ರದೇಶದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ತಿರ್ವಾ ಪ್ರದೇಶದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ 12 ವರ್ಷದ ಬಾಲಕಿ ರಕ್ತಸ್ರಾವ ಹಾಗೂ ತೀವ್ರ ನೋವಿನಿಂದ ಬಳತ್ತಿರುವುದು ಕಂಡುಬಂದಿದೆ ಎಂಬ ಮಾಹಿತಿಯನ್ನು ಪೊಲೀಸರು ಮಂಗಳವಾರ ನೀಡಿದ್ದಾರೆ.
ಗಾಯಗೊಂಡು ನರಳುತ್ತಿದ್ದ ಬಿದ್ದಿದ್ದ ಬಾಲಕಿಯ ವಿಡಿಯೋವನ್ನು ಜನರು ರೆಕಾರ್ಡ್ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸರು ಆ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.
ಬಾಲಕಿಯು ಭಾನುವಾರ ಮನೆಯಿಂದ ಹೊರ ಹೋಗಿದ್ದಳು. ಆದರೆ, ಆಕೆ ಮನೆಗೆ ಹಿಂತಿರುಗಿರಲಿಲ್ಲ. ಆ ನಂತರ ಕುಟುಂಬ ಸದಸ್ಯರು ಆಕೆಯನ್ನು ಹುಡುಕಲು ಆರಂಭಿಸಿದ್ದರು ಎಂದು ಪೊಲೀಸ್ ಅಧೀಕ್ಷಕ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.
ಬಾಲಕಿಯು ರಕ್ತಸ್ರಾವದಿಂದ ಬಳಲುತ್ತ ಬಿದ್ದಿದ್ದಳು. ಆಕೆ ನೋವಿನಿಂದ ಒದ್ದಾಡುತ್ತಿದ್ದಳು. ಇದನ್ನು ನೋಡಿದ ಅತಿಥಿ ಗೃಹದ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಮನೋಜ್ ಪಾಂಡೆ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆ ನಂತರ ಬಾಲಕಿಯನ್ನು ಕಾನ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಗಳು ಮಾಹಿತಿ ನೀಡಿದ್ದಾರೆ.
ಅತಿಥಿ ಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿಯು ಯುವಕರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ
ಯುವಕನ ಗುರುತು ಪತ್ತೆ ಮಾಡಲಾಗುತ್ತಿದೆ. ಆಸ್ಪತ್ರೆಯ ವರದಿಗಳ ನಂತರವೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications