ಯುಪಿಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ: ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರಾ ಯೋಗಿ ಆದಿತ್ಯನಾಥ್?
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ಜಯ ಪಕ್ಕಾ ಎಂದು ಭಾವಿಸಲಾಗಿತ್ತು. ಆದರೆ ಸಮಾಜವಾದಿ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುತ್ತಿದೆ.
ಹೌದು... ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಕಾರ್ಯ ಇಂದು (ಜೂನ್ 4) ಮುಂದುವರೆದಿದ್ದು ಬಿಜೆಪಿಗೆ ಸಮಾಜವಾದಿ ಪಕ್ಷ ಕಠಿಣ ಸ್ಪರ್ಧೆ ನೀಡುತ್ತಿದೆ. ಬಿಜೆಪಿ 37 ಸ್ಥಾನಗಳನ್ನು ತನ್ನ ತೆಕ್ಕೆಗೆ ಪಡೆದು ಮುನ್ನುಗ್ಗಿದರೆ, ಸಮಾಜವಾದಿ ಪಕ್ಷ 32 ಸ್ಥಾನಗಳನ್ನು ಪಡೆದು ಕಠಿಣ ಸ್ಪರ್ಧೆ ನೀಡುತ್ತಿದೆ.

ಬಿಜೆಪಿ ಅಧಿಕಾರ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಡೀ ದೇಶವೇ ಕೊಂಡಾಡಿತ್ತು. ಇದೊಂದು ವಿಚಾರ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಸದ್ದು ಮಾಡಿತ್ತು. ರಾಮ ಮಂದಿರ ನಿರ್ಮಾಣದಿಂದಾಗಿ ವಿಶೇಷವಾಗಿ ಉತ್ತರಪ್ರದೇಶದ ಗರಿಮೆ ಉತ್ತುಂಗದಲ್ಲಿತ್ತು. ಇದಕ್ಕೆ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರೇ ಕಾರಣ ಎಂದು ಯುಪಿಯ ಜನ ಕೊಂಡಾಡಿದ್ದರು.
ಸಾವಿರಾರು ಸಂಖ್ಯೆಯಲ್ಲಿ ಜನ ದೇಶ ವಿದೇಶದಿಂದ ರಾಮ ಮಂದಿರಕ್ಕೆ ಭೇಟಿ ನೀಡಿ ಸಿಎಂ ಯೋಗಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಇದು ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನಗಳ ಅಂತರದಿಂದ ಜಯ ಗಳಿಸಲಿದೆ ಎಂಬುದರ ಸೂಚನೆ ಕೂಡ ಆಗಿತ್ತು. ಆದರೆ ಈವರೆಗಿನ ಫಲಿತಾಂಶ ಬುಡಮೇಲಾಗಿಸಿದೆ. ಸಮಾಜವಾದಿ ಪಕ್ಷ ಬಿಜೆಪಿಯೊಂದಿಗೆ ತೀವ್ರ ಪೈಪೋಟಿಗೆ ಇಳಿದಿದೆ.

ಮತ ಎಣಿಕೆ ಕಾರ್ಯ ಇನ್ನೂ ಮುಂದುವರೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಬಿಜೆಪಿ ಗೆಲ್ಲುವ ನಿರೀಕ್ಷೆಯನ್ನು ಹುಸಿಯಾಗಿಸುವ ಸಾಧ್ಯತೆ ಕೂಡ ಇದೆ. ಹಾಗೊಂದು ವೇಳೆ ಉತ್ತರಪ್ರದೇಶದಲ್ಲಿ ಬಿಜೆಪಿ ಸೋಲನ್ನು ಕಂಡರೆ ಈ ಫಲಿತಾಂಶ ಇಡೀ ದೇಶಕ್ಕೆ ಅಚ್ಚರಿಯ ಫಲಿತಾಂಶ ಆಗುವುದರಲ್ಲಿ ಅನುಮಾನವೇ ಇಲ್ಲ.
ಸಿಎಂ ಸ್ಥಾನ ಕಳೆದುಕೊಳ್ಳುತ್ತಾರಾ ಯೋಗಿ ಆಧಿತ್ಯನಾಥ್?
ಇದರಿಂದಾಗಿ ಒಂದು ವೇಳೆ ಬಿಜೆಪಿ ಸೋತರೆ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರಾ ಯೋಗಿ ಆಧಿತ್ಯನಾಥ್ ಎನ್ನುವ ಅನುಮಾನ ಸೃಷ್ಟಿಯಾಗಿದೆ. ಹಾಗೊಂದು ವೇಳೆ ಬಿಜೆಪಿ ಸೋತರೆ ಸೋಲಿನ ಹೊಣೆಯನ್ನು ಹೊತ್ತು ಯೋಗಿ ಆದಿತ್ಯನಾಥ್ ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ.
ಉತ್ತರಪ್ರದೇಶ ಲೋಕಸಭಾ ಚುನಾವಣೆ
ಪ್ರಸ್ತುತ ಲಭ್ಯವಿರುವ ಮಾಹಿತಿಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 37 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಸಮಾಜವಾದಿ ಪಕ್ಷ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ರಾಜ್ಯದ ಪಾತ್ರ ಬಹಳ ನಿರ್ಣಾಯಕವಾಗಿದ್ದು, ಒಟ್ಟು 80 ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟುಗಳನ್ನು ಪಡೆದವರಿಗೇ ಕೇಂದ್ರದಲ್ಲಿ ಅಧಿಕಾರ ಖಚಿತ ಎಂಬ ಅಭಿಪ್ರಾಯವಿದೆ. ವಾರಣಾಸಿಯಲ್ಲಿ ಪ್ರಧಾನಿ ಮೋದಿ, ಕನೌಜ್ನಲ್ಲಿ ಅಖಿಲೇಶ್ ಯಾದವ್, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ಉತ್ತರಪ್ರದೇಶದಲ್ಲಿ ವಾರಣಾಸಿ, ರಾಯ್ ಬರೇಲಿ, ಅಮೇಥಿ, ಕನ್ನೌಜ್, ಮೈನ್ಪುರಿ, ಅಜಮ್ಗಢ, ಘಾಜಿಯಾಬಾದ್, ಮೀರತ್, ಫೈಜಾಬಾದ್, ಮಥುರಾ, ಗೌತಮ್ ಬುದ್ಧ ನಗರ, ಕಾನ್ಪುರ, ಗೋರಖ್ಪುರ ಗಮನ ಸೆಳೆದಿರುವ ಪ್ರಮುಖ ಕ್ಷೇತ್ರಗಳಾಗಿವೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications