ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್: ಉತ್ತರ ಪ್ರದೇಶದಲ್ಲಿ 13 ಮಕ್ಕಳು ಸಾವು

|
Google Oneindia Kannada News

ಖುಷಿನಗರ, ಏಪ್ರಿಲ್ 26: ಶಾಲಾ ವಾಹನವೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಕ್ಕಳು ದುರ್ಮರಣಕ್ಕೀಡಾದ ದುರ್ಘಟನೆ ಉತ್ತರ ಪ್ರದೇಶದ ಖುಷಿ ನಗರದಲ್ಲಿ ನಡೆದಿದೆ.

ಬೆಳ್ಳಂಬೆಳಗ್ಗೆ ಶಾಲೆಗೆ ಹೋರಟಿದ್ದ ಮಕ್ಕಳನ್ನು ಹೊತ್ತು ಸಾಗುತ್ತಿದ್ದ ಬಸ್ಸು ರೈಲ್ವೇ ಕ್ರಾಸಿಂಗ್ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಸುಮಾರು 20-30 ಮಕ್ಕಳು ಪ್ರಯಾಣಿಸುತ್ತಿದ್ದರು. ಇವರಲ್ಲಿ 13 ವಿದ್ಯಾರ್ಥಿಗಳು ಮೃತರಾಗಿದ್ದು, 8 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಮರಿಗೆ ಬಸ್ ಉರುಳಿ 26 ಮಕ್ಕಳ ಸಾವುಹಿಮಾಚಲ ಪ್ರದೇಶದಲ್ಲಿ ಕಮರಿಗೆ ಬಸ್ ಉರುಳಿ 26 ಮಕ್ಕಳ ಸಾವು

ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡವರಿಗೆ ತಕ್ಷಣವೇ ವೈದ್ಯಕೀಯ ನೆರವು ನೀಡುವಂತೆ ಆದೇಶಿಸಿದ್ದಾರೆ. ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮತ್ತು ಘಟನೆ ಕುರಿತಂತೆ ತನಿಖೆ ನಡೆಸುವಂತೆಯೂ ಆದೇಶಿಸಿದ್ದಾರೆ.

ಏಪ್ರಿಲ್ 9 ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ 26 ಮಕ್ಕಳು ಮೃತರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Uttar Pradesh: 13 school students dead after the vehicle they were travelling in collided with a train at an unmanned crossing in Kushinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X