ಯೋಗಿ ವಿರುದ್ಧ ಉತ್ತರ ಪ್ರದೇಶದಲ್ಲಿ ಮಾಂಸ ಮಾರಾಟಗಾರರ ಮುಷ್ಕರ
ನೂತನ ಸಿಎಂ ಯೋಗಿ ಆದಿತ್ಯನಾಥ್ ಅವರು ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಿರುವ ಹಿನ್ನೆಲೆಯಲ್ಲಿ ಅನಿಷ್ಟಾವಧಿ ಮುಷ್ಕರ ನಡೆಸಲು ಅಲ್ಲಿನ ಮಾಂಸ ಮಾರಾಟಗಾರರು ನಿರ್ಧರಿಸಿದ್ದಾರೆ.
ಲಕ್ನೋ, ಮಾರ್ಚ್ 27: ಯೋಗಿ ಆದಿತ್ಯಾನಾಥ್ ಅವರು ಮುಖ್ಯಮಂತ್ರಿಯಾದ ಮೇಲೆ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಂಸ ಮಾರಾಟಗಾರರು ಸೋಮವಾರದಿಂದ (ಮಾರ್ಚ್ 27) ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ.
ಈ ಎಲ್ಲಾ ಮಾಂಸ ಮಾರಾಟಗಾರರು, ಹೊಸದಾಗಿ ಬಂದಿರುವ ಬಿಜೆಪಿ ಸರ್ಕಾರವು ತಮ್ಮನ್ನು ಗುರಿಯಾಗಿಸಿ ತಮ್ಮ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ್ದಾರೆ.[ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಮ್ಮ ಗುರಿ: ಯೋಗಿ ಆದಿತ್ಯನಾಥ್]

ಮುಷ್ಕರದ ಬಗ್ಗೆ ವಿವರಣೆ ನೀಡಿರುವ 'ಲಕ್ನೋ ಬಕ್ರಾ ಗೋಷ್ ವ್ಯಾಪಾರ್ ಮಂಡಲ್'ನ ಮುಖ್ಯಸ್ಥ ಮುಬೀನ್ ಖುರೇಷಿ, ''ಕೆಲ ಅಂಗಡಿಗಳನ್ನು ಮುಚ್ಚಿಸಿರುವುದು ಬಡವರ ಹೊಟ್ಟೆಯ ಮೇಲೆ ಹೊಡೆದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ನಮ್ಮ ಜತೆಗೆ ಮೀನು ಮಾರಾಟಗಾರರೂ ಕೈ ಜೋಡಿಸಲಿದ್ದಾರೆ'' ಎಂದು ತಿಳಿಸಿದರು.[ಸಂಪಾದಕೀಯದಲ್ಲಿ ಯೋಗಿ ಆಯ್ಕೆ ಪ್ರಶ್ನೆ: 'ಟೈಮ್ಸ್' ಗೆ ಕೇಂದ್ರದ ನೋಟಿಸ್]
ಅನಧಿಕೃತ ಮಾಂಸ ಮಾರಾಟಗಾರರ ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೊಪ್ಪು ಹಾಕಲಾರರು ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ, ಕೆಲ ದಿನಗಳ ಹಿಂದೆಯೇ ತಮ್ಮ ಕ್ರಮವನ್ನು ಸ್ಪಷ್ಟಪಡಿಸಿದ್ದ ಅವರು, ''ತಮ್ಮ ಯುದ್ದ ಕೇವಲ ಅಕ್ರಮ ಮಾಂಸ ಮಾರಾಟದ ಅಂಗಡಿಗಳ ವಿರುದ್ಧವೇ ಹೊರತು, ಪರವಾನಗಿ ಪಡೆದಿರುವ ಮಾಂಸದಂಗಡಿಗಳಿಗೆ ಯಾವುದೇ ತೊಂದರೆಯಿಲ್ಲ'' ಎಂದು ತಿಳಿಸಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications