ಯೋಗಿ ನಾಡು ಉತ್ತರ ಪ್ರದೇಶದಲ್ಲಿ ಪ್ರತಿದಿನ ಕರೆಂಟ್ ಕಣ್ಣಾಮುಚ್ಚಾಲೆ!
ಲಖನೌ: ಹಿಂದುತ್ವದ ಫೈರ್ ಬ್ರ್ಯಾಂಡ್ ಅಂತಾನೆ ಗುರುತಿಸಿಕೊಂಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ತಮ್ಮ ಖಡಕ್ ನಿರ್ಧಾರದ ಮೂಲಕ ಸದ್ದು ಮಾಡ್ತಿದ್ದಾರೆ. ಅದರಲ್ಲೂ ಕ್ರಿಮಿನಲ್ಗಳ ವಿರುದ್ಧ ಯೋಗಿ ಕಠಿಣ ಕ್ರಮ ಕೈಗೊಳ್ಳುವುದರಲ್ಲಿ ನಂಬರ್ 1 ಅನ್ನೋದು ಅಭಿಮಾನಿಗಳ ಮಾತು. ಇಂತಿಪ್ಪ ಉತ್ತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯ ಬಗ್ಗೆ ನಿಮಗೆ ಗೊತ್ತಾ? ಬನ್ನಿ ತಿಳಿಯೋಣ.
ಹೌದು, ಸಿಎಂ ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಈ ಬಾರಿ ಬೇಸಿಗೆ ಅತಿ ಕಷ್ಟಕರವಾಗಿತ್ತು. ಒಂದು ಕಡೆ ಅತಿಯಾದ ತಾಪಮಾನ ಏರಿಕೆ ಜನರನ್ನ ಕಾಡುತ್ತಿದ್ರೆ, ಈ ಹೊತ್ತಲ್ಲಿ ಉತ್ತರ ಪ್ರದೇಶ ರಾಜ್ಯದಾದ್ಯಂತ ವಿದ್ಯುತ್ ಕಡಿತ ಕೂಡ ಸಾಕಷ್ಟು ಸಮಸ್ಯೆಯನ್ನ ನೀಡಿತ್ತು. ಈ ಕುರಿತು ಸಮೀಕ್ಷೆ ವರದಿಯೊಂದು ಹೊರಬಿದ್ದಿದ್ದು ಸ್ವತಃ ಉತ್ತರ ಪ್ರದೇಶದ ಜನ ಅಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಜುಲೈ ತಿಂಗಳಲ್ಲಿ ಭಾರಿ ಪ್ರಮಾಣದಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿರುವುದಾಗಿ ವರದಿ ಪ್ರಕಟವಾಗಿದೆ.

ಕರೆಂಟ್ ಕೈಕೊಡಲು ಕಾರಣ ಏನು?
ಅಂದಹಾಗೆ ಸಮುದಾಯ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆ ಲೋಕಲ್ ಸರ್ಕಲ್ ಈ ಸಮೀಕ್ಷೆ ನಡೆಸಿದೆ. ಈ ವರದಿ ಪ್ರಕಾರ 2023ರ ಜುಲೈ ತಿಂಗಳಲ್ಲಿ ಉತ್ತರ ಪ್ರದೇಶದ ಜನ ಬಹುತೇಕ ಪ್ರತಿದಿನ ವಿದ್ಯುತ್ ಸಮಸ್ಯೆ ಎದುರಿಸಿದ್ದಾರಂತೆ. 4,206 ಜನರು ಸಮೀಕ್ಷೆಯಲ್ಲಿ ಉತ್ತರ ನೀಡಿದ್ದು, ಶೇಕಡಾ 74ರಷ್ಟು ಜನರು ವಿದ್ಯುತ್ ಸಮಸ್ಯೆ ಎದುರಾಗಿದೆ ಎಂಬುದನ್ನ ಒಪ್ಪಿಕೊಂಡಿದ್ದಾರೆ. ಹೀಗೆ ಬೇಸಿಗೆ ಸಮಯದಲ್ಲಿ, ಭಾರಿ ಬಿಸಿಲಿನ ಪರಿಣಾಮ ನರಳುವಾಗ ಕರೆಂಟ್ ಕೂಡ ಕೈಕೊಟ್ಟು ಆಟ ನೋಡಿದೆ. ಹಾಗಾದರೆ ಈ ಸಮಸ್ಯೆಗೆ ಪ್ರಮುಖ ಕಾರಣ ಏನು? ಉತ್ತರ ಪ್ರದೇಶ ವಿದ್ಯುತ್ ನಿಗಮಗಳ ಸ್ಥಿತಿ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ.
ಆರ್ಥಿಕವಾಗಿ ನರಳುತ್ತಿದೆಯಾ ವಿದ್ಯುತ್ ನಿಗಮ?
ಅಷ್ಟಕ್ಕೂ ದೇಶದ ಬಹುದೊಡ್ಡ ರಾಜ್ಯ ಉತ್ತರ ಪ್ರದೇಶ. ಆದ್ರೆ ಈ ಬಹುದೊಡ್ಡ ರಾಜ್ಯದ ವಿದ್ಯುತ್ ನಿಗಮ ನಷ್ಟದಲ್ಲಿದೆಯಂತೆ. ಉತ್ತರ ಪ್ರದೇಶ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPPCL)ನ ಮುಖ್ಯಸ್ಥ ದೇವರಾಜ್ ಅವರ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬರೋಬ್ಬರಿ ಒಂದು ಲಕ್ಷ ಕೋಟಿ ರೂಪಾಯಿ ನಷ್ಟ ಉತ್ತರ ಪ್ರದೇಶದ ವಿದ್ಯುತ್ ನಿಗಮಕ್ಕೆ ಬರ ಸಿಡಿಲಿನಂತೆ ಬಡಿದಿದೆ. ಹೀಗಾಗಿ ನಷ್ಟವನ್ನು ಸರಿಪಡಿಸಲು ಹಾಗೂ ವಿದ್ಯುತ್ ಕಳ್ಳತನ ನಡೆಯದಂತೆ ನೋಡಿಕೊಳ್ಳಲು ವ್ಯವಸ್ಥೆ ಬದಲಿಸುವ ಲೆಕ್ಕಾಚಾರ ಕೂಡ ಇದೆ. ಆದರೆ ಈ ಎಲ್ಲಾ ಸಮಸ್ಯೆಯ ಪರಿಣಾಮ ಎದುರಿಸುತ್ತಿರುವುದು ಅಲ್ಲಿನ ಜನಸಾಮಾನ್ಯರು.

ಒಟ್ನಲ್ಲಿ ಉತ್ತರ ಪ್ರದೇಶದಲ್ಲಿ ವಿದ್ಯುತ್ ಕಡಿತ ದೊಡ್ಡ ಸಮಸ್ಯೆ ತಂದೊಡ್ಡಿದೆ. ಈ ಕುರಿತು ಜನರು ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲು ತೋಡಿಕೊಳ್ಳುತ್ತಾರೆ. ಆದರೂ ಸಮಸ್ಯೆ ಬಗೆಹರಿದಿಲ್ಲ ಎಂಬ ಬೇಸರ ಇದೆ. ಇಷ್ಟೆಲ್ಲದರ ನಡುವೆ ಉತ್ತರ ಪ್ರದೇಶ ವಿದ್ಯುತ್ ನಿಗಮದಲ್ಲಿರುವ ಲೋಪಗಳನ್ನು ಸರಿ ಮಾಡಬೇಕು ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ. ಆದರೆ ಈ ಸಮಸ್ಯೆ ಯಾವಾಗ ಬಗೆಹರಿಯುತ್ತೆ? ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಇದರ ಜೊತೆಗೆ ವಿದ್ಯುತ್ ಕಳ್ಳತನ ಕೂಡ ಉತ್ತರ ಪ್ರದೇಶದ ವಿದ್ಯುತ್ ನಿಗಮಕ್ಕೆ ದೊಡ್ಡ ತಲೆನೋವು ತಂದೊಡಿದ್ದು, ಇನ್ನಾದ್ರೂ ಇದೆಲ್ಲಾ ಬಗೆಹರಿಯುತ್ತಾ? ಅನ್ನೋದನ್ನ ಕಾದು ನೋಡಬೇಕು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications