ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ಕೊಚ್ಚಿ ಹೋದ ಆರು ಬಾಲಕರು

|
Google Oneindia Kannada News

ಕಾನ್ಪುರ, ಜುಲೈ 9: ಗಂಗಾ ನದಿಯ ನೀರಿನಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಆರು ಮಕ್ಕಳು ಕೊಚ್ಚಿ ಹೋದ ಘಟನೆ ಭಾನುವಾರ ನಡೆದಿದೆ.

ಇದುವರೆಗೂ ಮೂರು ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಮೂರು ಶವಗಳ ಪತ್ತೆಗೆ ಹುಡುಕಾಟ ನಡೆದಿದೆ.

ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

2020 ರ ಹೊತ್ತಿಗೂ ಗಂಗೆಗಿಲ್ಲವೇ ಸ್ವಚ್ಛತೆಯ ಭಾಗ್ಯ?!2020 ರ ಹೊತ್ತಿಗೂ ಗಂಗೆಗಿಲ್ಲವೇ ಸ್ವಚ್ಛತೆಯ ಭಾಗ್ಯ?!

ಆರು ಮಕ್ಕಳು ನೀರಿನಲ್ಲಿ ಮುಳುಗಿ ಕೊಚ್ಚಿ ಹೋಗಿದ್ದಾರೆ. ನಾವು ಮೂವರ ಶವಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದೇವೆ. ಇನ್ನು ಉಳಿದ ಮೂವರ ಪತ್ತೆಗೆ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

uttar pradesh: six boys drowned in ganga river

ಕಾರ್ಯಾಚರಣೆ ಸಾಕಷ್ಟು ಬೋಟ್‌ಗಳು, ನುರಿತ ಈಜುಗಾರರು ಮತ್ತು ಬಲೆಗಳು ಲಭ್ಯವಾಗಿವೆ ಎಂದು ಕರ್ನಲ್‌ಗಂಜ್‌ನ ವೃತ್ತ ಅಧಿಕಾರಿ ಮನೋಜ್ ಗುಪ್ತಾ ತಿಳಿಸಿದ್ದಾರೆ.

ಪಾಟ್ನಾದಲ್ಲಿ ದೋಣಿ ದುರಂತ: ಐವರು ಜಲಸಮಾಧಿಪಾಟ್ನಾದಲ್ಲಿ ದೋಣಿ ದುರಂತ: ಐವರು ಜಲಸಮಾಧಿ

ಭಾನುವಾರ ಮಧ್ಯಾಹ್ನದ ವೇಳೆಗೆ 10-12 ವರ್ಷದ ಬಾಲಕರು ಗಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಆದರೆ, ನೀರಿನ ಸೆಳೆತಕ್ಕೆ ಸಿಲುಕಿ ಅವರು ಕೊಚ್ಚಿಕೊಂಡು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಈಜುಗಾರರಿಗೆ ಮಾಹಿತಿ ನೀಡಿದ್ದರು.

ಪತ್ತೆಯಾದ ಮೂರು ಶವಗಳನ್ನು ಕಾನ್ಪುರದ ಹಾಲ್ಲೆಟ್ ಆಸ್ಪತ್ರೆಗೆ ರವಾನಿಸಲಾಗಿದೆ.

English summary
Six boys aged between 10-12 have drowned in river Ganga in kanpur on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X