Get Updates
Get notified of breaking news, exclusive insights, and must-see stories!

UP: ಯುಪಿ ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ: 107 ಮಂದಿ ಸಾವು!

ಲಕ್ನೋ ಜುಲೈ 2: ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದ್ದು 107 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.

ಹತ್ರಾಸ್‌ನ ಸಿಕಂದರಾವ್ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಆಯೋಜಿಸಿದ್ದ ಭೋಲೆ ಬಾಬಾರವರ ಸತ್ಸಂಗವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರೀಕ್ಷೆ ಮೀರಿದ ಜನ ಭಾಗವಹಿಸಿದ್ದರು. ಗುಂಪಿನಲ್ಲಿ ಏಕಾಏಕಿ ಜನ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಈ ವೇಳೆ ಕೆಲವರು ಗಾಬರಿಗೊಂಡು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದರಿಂದ ಕಾಲ್ತುಳಿತಕ್ಕೆ 107 ಮಂದಿ ಬಲಿಯಾಗಿದ್ದಾರೆ.

Uttar pradesh stampede 27 die in stampede at bhole baba satsang event in hathras

ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅಲ್ಲದೆ ಈ ದುರ್ಘಟನೆಯಲ್ಲಿ 100ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಇವರಲ್ಲೂ ಮಹಿಳೆಯರು ಮತ್ತು ಮಕ್ಕಳು ಸಂಖ್ಯೆ ಹೆಚ್ಚಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಂತರ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ವರದಿಯ ಪ್ರಕಾರ ಕಾಲ್ತುಳಿತಕ್ಕೆ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ ಭದ್ರತಾ ಸಿಬ್ಬಂದಿ ಭಕ್ತರನ್ನು ಒಂದೇ ಕಡೆ ನಿಲ್ಲಿಸಿದ್ದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಇದರಿಂದ ಹಲವರು ಸ್ಥಳದಲ್ಲೇ ಪ್ರಜ್ಞಾಹೀನರಾಗಿದ್ದಾರೆ. ಪ್ರಸ್ತುತ ಈ ಘಟನೆಯನ್ನು ಆಡಳಿತವು ತನಿಖೆ ನಡೆಸುತ್ತಿದೆ. ಡಿಎಂ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

ಆಮ್ಲಜನಕ ಕಾರಣದಿಂದಾಗಿ ದುರ್ಘಟನೆ

ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ನೆರೆದಿದ್ದರು. ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮಕ್ಕೆ ಅನುಮತಿ ಕೋರಿದ್ದರು. ಆದರೆ ಭಕ್ತರ ಸಂಖ್ಯೆ ಕುರಿತು ಆಡಳಿತ ಮಂಡಳಿಗೆ ನೀಡಿದ ಮಾಹಿತಿಗಿಂತ ಹೆಚ್ಚಿನ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆಡಳಿತದ ನಿರ್ಲಕ್ಷ್ಯ

ಸತ್ಸಂಗದಲ್ಲಿ ಭಾಗವಹಿಸಿದ ಇಷ್ಟೊಂದು ಸಂಖ್ಯೆ ನೋಡಿದರೆ ಆಡಳಿತದ ನಿರ್ಲಕ್ಷ್ಯ ಬೆಳಕಿಗೆ ಬರುತ್ತಿದೆ. ಆಡಳಿತವು ಈ ಕಾರ್ಯಕ್ರಮಕ್ಕೆ ಸರಿಯಾಗಿ ತಯಾರಿ ನಡೆಸಿರಲಿಲ್ಲ. ಅನಿಯಂತ್ರಿತ ಜನಸಂದಣಿ ಮತ್ತು ಆಮ್ಲಜನಕ ಕೊರತೆ ಕಾರಣ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಪ್ರತ್ಯಕ್ಷದರ್ಶಿಗಳು ವಿವರಿಸಿದ್ದು ಹೀಗೆ...

ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಸತ್ಸಂಗ ಮುಗಿದ ಮೇಲೆ ಹೊರಡಲು ಶುರು ಮಾಡಿದೆವು. ಅಲ್ಲಿ ಭಾರೀ ಜನಸಂದಣಿ ಇತ್ತು. ಆಗ ಇದ್ದಕ್ಕಿದ್ದಂತೆ ಗುಂಪಿನಲ್ಲಿ ಕಾಲ್ತುಳಿತ ಉಂಟಾಯಿತು. ಅನೇಕ ಜನರು ಪ್ರಜ್ಞೆತಪ್ಪಿ ಬಿದ್ದರು. ಅನೇಕ ಜನರು ಸ್ಥಳದಲ್ಲಿ ಪ್ರಾಣ ಕಳೆದುಕೊಂಡರು. ನನ್ನ ಜೊತೆ ಬಂದಿದ್ದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನನಗೂ ನಾನು ಬದುಕುವುದು ಖಚಿತವಿರಲಿಲ್ಲ. ಹೇಗೋ ತಪ್ಪಿಸಿಕೊಂಡು ಹೊರಬಂದೆ ಎಂದು ಅವರು ನೋವಿನಿಂದ ಹೇಳಿಕೊಂಡಿದ್ದಾರೆ.

ಯುಪಿ ಸಿಎಂ ಸಂತಾಪ

"ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಂತೆ ಅವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ" ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+