UP: ಯುಪಿ ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ: 107 ಮಂದಿ ಸಾವು!
ಲಕ್ನೋ ಜುಲೈ 2: ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದ್ದು 107 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.
ಹತ್ರಾಸ್ನ ಸಿಕಂದರಾವ್ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಆಯೋಜಿಸಿದ್ದ ಭೋಲೆ ಬಾಬಾರವರ ಸತ್ಸಂಗವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರೀಕ್ಷೆ ಮೀರಿದ ಜನ ಭಾಗವಹಿಸಿದ್ದರು. ಗುಂಪಿನಲ್ಲಿ ಏಕಾಏಕಿ ಜನ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಈ ವೇಳೆ ಕೆಲವರು ಗಾಬರಿಗೊಂಡು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದರಿಂದ ಕಾಲ್ತುಳಿತಕ್ಕೆ 107 ಮಂದಿ ಬಲಿಯಾಗಿದ್ದಾರೆ.

ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅಲ್ಲದೆ ಈ ದುರ್ಘಟನೆಯಲ್ಲಿ 100ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಇವರಲ್ಲೂ ಮಹಿಳೆಯರು ಮತ್ತು ಮಕ್ಕಳು ಸಂಖ್ಯೆ ಹೆಚ್ಚಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಂತರ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
VIDEO | Injured persons brought to a hospital for treatment in UP's Hathras following a stampede-like situation at a 'satsang' in the city.
— Press Trust of India (@PTI_News) July 2, 2024
(Disclaimer: Video contains disturbing visuals. Viewer discretion is advised.)
(Full video available on PTI Videos -… pic.twitter.com/b6GEbaC3Ze
ವರದಿಯ ಪ್ರಕಾರ ಕಾಲ್ತುಳಿತಕ್ಕೆ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ ಭದ್ರತಾ ಸಿಬ್ಬಂದಿ ಭಕ್ತರನ್ನು ಒಂದೇ ಕಡೆ ನಿಲ್ಲಿಸಿದ್ದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಇದರಿಂದ ಹಲವರು ಸ್ಥಳದಲ್ಲೇ ಪ್ರಜ್ಞಾಹೀನರಾಗಿದ್ದಾರೆ. ಪ್ರಸ್ತುತ ಈ ಘಟನೆಯನ್ನು ಆಡಳಿತವು ತನಿಖೆ ನಡೆಸುತ್ತಿದೆ. ಡಿಎಂ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಆಮ್ಲಜನಕ ಕಾರಣದಿಂದಾಗಿ ದುರ್ಘಟನೆ
ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ನೆರೆದಿದ್ದರು. ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮಕ್ಕೆ ಅನುಮತಿ ಕೋರಿದ್ದರು. ಆದರೆ ಭಕ್ತರ ಸಂಖ್ಯೆ ಕುರಿತು ಆಡಳಿತ ಮಂಡಳಿಗೆ ನೀಡಿದ ಮಾಹಿತಿಗಿಂತ ಹೆಚ್ಚಿನ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಆಡಳಿತದ ನಿರ್ಲಕ್ಷ್ಯ
ಸತ್ಸಂಗದಲ್ಲಿ ಭಾಗವಹಿಸಿದ ಇಷ್ಟೊಂದು ಸಂಖ್ಯೆ ನೋಡಿದರೆ ಆಡಳಿತದ ನಿರ್ಲಕ್ಷ್ಯ ಬೆಳಕಿಗೆ ಬರುತ್ತಿದೆ. ಆಡಳಿತವು ಈ ಕಾರ್ಯಕ್ರಮಕ್ಕೆ ಸರಿಯಾಗಿ ತಯಾರಿ ನಡೆಸಿರಲಿಲ್ಲ. ಅನಿಯಂತ್ರಿತ ಜನಸಂದಣಿ ಮತ್ತು ಆಮ್ಲಜನಕ ಕೊರತೆ ಕಾರಣ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.
#WATCH | Uttar Pradesh: Etah SSP Rajesh Kumar Singh says, "... A religious event was going on in Mughalgarhi village of Hathras district when the stampede occurred. So far 27 dead bodies have been received in the Etah Hospital, including 23 women, 3 children, and 1 man. The… https://t.co/Ih37mRehAY pic.twitter.com/xJa3AN4Yo4
— ANI (@ANI) July 2, 2024
ಪ್ರತ್ಯಕ್ಷದರ್ಶಿಗಳು ವಿವರಿಸಿದ್ದು ಹೀಗೆ...
ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಸತ್ಸಂಗ ಮುಗಿದ ಮೇಲೆ ಹೊರಡಲು ಶುರು ಮಾಡಿದೆವು. ಅಲ್ಲಿ ಭಾರೀ ಜನಸಂದಣಿ ಇತ್ತು. ಆಗ ಇದ್ದಕ್ಕಿದ್ದಂತೆ ಗುಂಪಿನಲ್ಲಿ ಕಾಲ್ತುಳಿತ ಉಂಟಾಯಿತು. ಅನೇಕ ಜನರು ಪ್ರಜ್ಞೆತಪ್ಪಿ ಬಿದ್ದರು. ಅನೇಕ ಜನರು ಸ್ಥಳದಲ್ಲಿ ಪ್ರಾಣ ಕಳೆದುಕೊಂಡರು. ನನ್ನ ಜೊತೆ ಬಂದಿದ್ದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನನಗೂ ನಾನು ಬದುಕುವುದು ಖಚಿತವಿರಲಿಲ್ಲ. ಹೇಗೋ ತಪ್ಪಿಸಿಕೊಂಡು ಹೊರಬಂದೆ ಎಂದು ಅವರು ನೋವಿನಿಂದ ಹೇಳಿಕೊಂಡಿದ್ದಾರೆ.
ಯುಪಿ ಸಿಎಂ ಸಂತಾಪ
"ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಂತೆ ಅವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ" ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications