ಮತ್ತೊಂದು ದುರಂತ: ಮಹಿಳೆಗೆ ಡಿಕ್ಕಿ ಹೊಡೆದು, 3 ಕಿ.ಮೀ. ಮೃತದೇಹ ಎಳೆದೊಯ್ದ ಟ್ರಕ್
ಲಕ್ನೋ, ಜ. 04: ರಾಷ್ಟ್ರ ರಾಜಧಾನಿಯಲ್ಲಿ 20 ವರ್ಷದ ಯುವತಿಯ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಆಕೆಯನ್ನು 12 ಕಿಮೀ ಎಳೆದೊಯ್ದ ಆಘಾತಕಾರಿ ಘಟನೆಯ ಬೆನ್ನಲ್ಲೇ ಮತ್ತೊಂದು ದುರಂತ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
Uttar Pradesh | A lady govt officer died on the spot, in Banda district, after her two-wheeler vehicle was hit by a truck & got stuck into it. The vehicle was dragged after being stuck in the truck due to which a fire broke out in the truck: ASP Banda pic.twitter.com/cLSIMBrH6J
— ANI UP/Uttarakhand (@ANINewsUP) January 4, 2023
ಬುಧವಾರ ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಟ್ರಕ್ಗೆ ಡಿಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ಗೆ ಸಿಲುಕಿದ ಆಕೆಯ ಮೃತ ದೇಹವನ್ನು 3 ಕಿಲೋಮೀಟರ್ವರೆಗೆ ಟ್ರಕ್ ಎಳೆದುಕೊಂಡು ಹೋಗಿದೆ. ಈ ಘೋರ ಘಟನೆಯು ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮಾವಾಯಿ ಬುಜುರ್ಗ್ ಗ್ರಾಮದಲ್ಲಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಮಹಿಳೆಯ ದೇಹವು ಸಿಲುಕಿಕೊಂಡಿದ್ದರಿಂದ ಟ್ರಕ್ಗೆ ಬೆಂಕಿ ಹೊತ್ತಿಕೊಂಡಿದೆ. ಸಂತ್ರಸ್ತೆಯ ಸ್ಕೂಟರ್ ಕೂಡ ಸುಟ್ಟು ಬೂದಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಮೃತರ ದೇಹವನ್ನು ಟ್ರಕ್ನಿಂದ ಹೊರತೆಗೆದಿದ್ದಾರೆ.

ಈ ಬಗ್ಗೆ ವರದಿ ಮಾಡಿರುವ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಪಿಆರ್ಒ ಬಿಕೆ ಗುಪ್ತಾ, ಸಂತ್ರಸ್ತೆಯ ಹೆಸರು ಪುಷ್ಪಾ ಮತ್ತು ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿದ್ದರು. ಅಪಘಾತ ನಡೆದ ಸಮಯದಲ್ಲಿ ಗೃಹೋಪಯೋಗಿ ವಸ್ತುಗಳು ಮತ್ತು ಪೆಟ್ರೋಲ್ ಖರೀದಿಸಲು ಹೊರಗೆ ಹೋಗಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಅಪಘಾತದ ನಂತರ, ಟ್ರಕ್ ಮಹಿಳೆಯನ್ನು 3 ಕಿಲೋಮೀಟರ್ಗೂ ಹೆಚ್ಚು ದೂರ ಎಳೆದೊಯ್ದಿದೆ ಎಂದು ವರದಿಯಾಗಿದೆ. ಬಹಳಷ್ಟು ವಾಹನ ಸವಾರರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ ಆದರೆ ಚಾಲಕ ನಿಲ್ಲಿಸಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೃತ ಮಹಿಳೆ ಲಕ್ನೋ ನಿವಾಸಿಯಾಗಿದ್ದಾರೆ. ದೇಹವನ್ನು ಟ್ರಕ್ನ ಡಂಪರ್ನಿಂದ ಹೊರತೆಗೆಯಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಎಸ್ಪಿ ಲಕ್ಷ್ಮಿ ನಿವಾಸ್ ತಿಳಿಸಿದ್ದಾರೆ.
"ಬಂದಾ ಜಿಲ್ಲೆಯಲ್ಲಿ ಮಹಿಳಾ ಸರ್ಕಾರಿ ಅಧಿಕಾರಿಯೊಬ್ಬರ ದ್ವಿಚಕ್ರ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಅದರಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಯ ಕೆಳಗೆ ಮೃತದೇಹ ಸಿಲುಕಿದ ಪರಿಣಾಮ ಲಾರಿಗೆ ಬೆಂಕಿ ಹತ್ತಿಕೊಂಡಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications