Shirur landslide: ಭೂಕುಸಿತದಿಂದ ನಾಪತ್ತೆ- 5 ದಿನಗಳಿಂದ ಕೇರಳದ ಅರ್ಜುನನಿಗಾಗಿ ಶೋಧ!
ಐದು ದಿನಗಳ ಹಿಂದೆ ಉತ್ತರ ಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭಾರೀ ಭೂಕುಸಿತದ ನಂತರ ನಾಪತ್ತೆಯಾಗಿದ್ದ ಕೋಝಿಕ್ಕೋಡ್ನ ಟ್ರಕ್ ಚಾಲಕ ಅರ್ಜುನ್ ಮೂಲಡಿಕುಜಿಯಿಲ್ ಮತ್ತು ಇತರರನ್ನು ಪತ್ತೆ ಮಾಡುವ ಪ್ರಯತ್ನಗಳು ಶನಿವಾರವೂ ಫಲ ನೀಡಲಿಲ್ಲ. ಅಧಿಕಾರಿಗಳ ಪ್ರಕಾರ ಭಾರೀ ಮಳೆ ಹಾಗೂ ಅಧಿಕ ಪ್ರಮಾಣದ ಮಣ್ಣು ಕುಸಿದಿದ್ದರಿಂದ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಅರ್ಜುನ್ ಸಂಬಂಧಿಕರು ರಾಜ್ಯ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಸೇನೆಯ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಜುಲೈ 16ರಂದು ಅಂಕೋಲಾದ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿತ್ತು. ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಅರ್ಜುನ್ ಸೇರಿದಂತೆ ಮೂವರ ಪತ್ತೆಗೆ ಎನ್ಡಿಆರ್ಎಫ್ ಮತ್ತು ರಾಜ್ಯ ಏಜೆನ್ಸಿಗಳು ಶನಿವಾರ ಬೆಳಿಗ್ಗೆ ತಮ್ಮ ಪ್ರಯತ್ನವನ್ನು ಪುನರಾರಂಭಿಸಿದ್ದವು.
ಅರ್ಜುನ್ ಪತ್ತೆಗೆ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ ಮತ್ತು ಮೆಟಲ್ ಡಿಟೆಕ್ಟರ್ಗಳಂತಹ ಸಲಕರಣೆಗಳನ್ನು ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡಲು ಬಳಸಿಕೊಳ್ಳಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಘಟನೆಯಿಂದ ಇದುವರೆಗೆ ಏಳು ಶವಗಳನ್ನು ಪತ್ತೆ ಮಾಡಲಾಗಿದೆ.
ಕೇರಳದ ಅರ್ಜುನ್ (30) ಕೇರಳಕ್ಕೆ ತೆರಳುತ್ತಿದ್ದ ವೇಳೆ ಟ್ರಕ್ ಸಮೇತ ನಾಪತ್ತೆಯಾಗಿದ್ದಾರೆ. ಟ್ರಕ್ಗೆ ಮರದ ಕಟ್ಟಿಗೆ ತುಂಬಿಕೊಂಡು ಜಗಲಪೇಟೆಯಿಂದ ಪ್ರಯಾಣ ಆರಂಭಿಸಿದ್ದರು. ಅವಘಡ ಸಂಭವಿಸಿದಾಗ ಅವರು ಶಿರೂರಿನ ಹೋಟೆಲ್ನಲ್ಲಿ ಚಹಾ ಕುಡಿಯಲು ನಿಂತಿದ್ದರು ಎಂದು ವರದಿಯಾಗಿದೆ. ಆದರೆ ಅವರು ಮಾತ್ರ ಇನ್ನೂ ಪತ್ತೆಯಾಗಿಲ್ಲ.

ರಾಜ್ಯದ ಅಧಿಕಾರಿಗಳ ಶೋಧ ಕಾರ್ಯಾಚರಣೆಯ ಪರಿಣಾಮಕಾರಿತ್ವದಲ್ಲಿ ಅರ್ಜುನ್ ಕುಟುಂಬಸ್ಥರು ನಂಬಿಕೆ ಕಳೆದುಕೊಂಡಿದ್ದಾರೆ. ಶೋಧ ಕಾರ್ಯಾಚರಣೆಗೆ ಸೇನೆಯನ್ನು ಕರೆತರುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಸಂಪರ್ಕಿಸಿರುವುದಾಗಿ ಎಂದು ಅರ್ಜುನ್ ಸಹೋದರಿ ಅಭಿರಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
"ಸೇನೆಯು ಅಧಿಕಾರ ವಹಿಸಿಕೊಳ್ಳುವುದು ಅತ್ಯಗತ್ಯ. ಕನಿಷ್ಠ ಕೇರಳದ ರಕ್ಷಣಾ ತಂಡಗಳಿಗೆ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಅವಕಾಶ ನೀಡಬೇಕು"ಎಂದು ಅವರು ಹೇಳಿದರು.
"ಕರ್ನಾಟಕದ ಅಧಿಕಾರಿಗಳು ಎಫ್ಐಆರ್ ದಾಖಲಿಸಲು ವಿಳಂಬ ಮಾಡುವ ಮೂಲಕ ಆರಂಭಿಕ ಎರಡು ದಿನಗಳನ್ನು ವ್ಯರ್ಥ ಮಾಡಿದರು. ಭೂಕುಸಿತ ಸಂಭವಿಸಿದ ಎರಡು ದಿನಗಳ ನಂತರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ, ಆದರೆ ನಾವು ಅದೇ ದಿನ ಅವರಿಗೆ ಮಾಹಿತಿ ನೀಡಿದ್ದೇವೆ" ಎಂದು ಅಭಿರಾಮಿ ವಿಷಾದಿಸಿದರು.
ಕುಟುಂಬಸ್ಥರು ಪ್ರತಿಭಟನೆ
ಅರ್ಜುನ್ ಇರುವ ಸ್ಥಳ ಪತ್ತೆ ಆಗುವವರೆಗೂ ಶೋಧ ಕಾರ್ಯ ಸ್ಥಗಿತಗೊಳಿಸಬಾರದು ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಅಲ್ಲದೆ ಶೋಧ ಕಾರ್ಯಾಚರಣೆ ನಡೆಸುವಲ್ಲಿ ಕರ್ನಾಟಕ ಸರ್ಕಾರ ನಿರಾಸಕ್ತಿ ತೋರುತ್ತಿದೆ ಎಂದು ಅರ್ಜುನ್ ಅವರ ಹುಟ್ಟೂರಾದ ಕನ್ನಡಿಕಲ್ನಲ್ಲಿ ಜನರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು. ಹವಾಮಾನ ವೈಪರೀತ್ಯದಿಂದಾಗಿ ಶೋಧ ಕಾರ್ಯಾಚರಣೆ ಸ್ಥಗಿತಗೊಂಡಿದೆ ಎಂಬ ಸುದ್ದಿ ತಿಳಿದ ಜನರು ರಾಜಕೀಯ ಪಕ್ಷಪಾತಕ್ಕೆ ಅಡ್ಡಿಪಡಿಸಿ ರಸ್ತೆ ತಡೆ ನಡೆಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications