Breaking : ನಿರ್ಮಾಣ ಹಂತದ ಸೇತುವೆ ಕುಸಿತ, 6 ಮಂದಿಗೆ ಗಾಯ
ಡೆಹ್ರಾಡೂನ್, ಜುಲೈ 20: ಉತ್ತರಾಖಂಡದ ಋಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ನಾರ್ಕೋಟಾ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರುದ್ರಪ್ರಯಾಗದಿಂದ 6 ಕಿ. ಮೀ. ದೂರದಲ್ಲಿರುವ ನಾರ್ಕೋಟಾ ಬಳಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ನಿರ್ಮಾಣ ಹಂತದ ಸೇರಯವೆ ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಅರ್ಧ ಡಜನ್ಗೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ 4 ರಿಂದ 5 ಮಂದಿ ಸಿಕ್ಕಿಬಿದ್ದಿರುವ ಆತಂಕವಿದೆ.

ಎಸ್ಡಿಆರ್ಎಫ್ ಮತ್ತು ಪೊಲೀಸರು ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದಾರೆ. ಸುಮಾರು 10 ಮಂದಿ ಸೇತುವೆ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಏಕಾಏಕಿ ಕುಸಿದಿದೆ.
Recommended Video
ದಿನೇಶ್ ಕಾರ್ತಿಕ್ ಇಂದು ವಿರಾಟ್ ಕೊಹ್ಲಿ ಮುಂದಿನ ಶತಕದ ಬಗ್ಗೆ ಭವಿಷ್ಯ ನುಡಿದಿದ್ದಾರೆ | *Cricket | OneIndia
ಘಟನೆಯ ಇನ್ನಷ್ಟು ಅಂಶಗಳು ತಿಳಿಯಬೇಕಿದೆ....












Click it and Unblock the Notifications