ಉತ್ತರಾಖಂಡ: ತುರ್ತುಸ್ಥಿತಿಯಲ್ಲಿ ಅಲೋಪಥಿಕ್ ಔಷಧಿ ಶಿಫಾರಸ್ಸಿಗೆ ಆಯುರ್ವೇದ ವೈದ್ಯರಿಗೆ ಅನುಮತಿ
ಡೆಹ್ರಾಡೂನ್, ಜೂ.21: ತುರ್ತು ಪರಿಸ್ಥಿತಿಯಲ್ಲಿ ಅಲೋಪತಿ ಔಷಧಿಗಳನ್ನು ಶಿಫಾರಸು ಮಾಡಲು ಉತ್ತರಾಖಂಡ ಸರ್ಕಾರ ಆಯುರ್ವೇದ ವೈದ್ಯರಿಗೆ ಸೋಮವಾರ ಅನುಮತಿ ನೀಡಿದೆ.
ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಲೋಪತಿ ವೈದ್ಯರ ಉನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ) ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಕಾನೂನುಬಾಹಿರ ಎಂದು ಐಎಂಎ ಹೇಳಿದೆ.
ಇನ್ನು ಸರ್ಕಾರದ ಈ ಕ್ರಮವನ್ನು ರಾಜ್ಯದ ಆಯುಷ್ ಸಚಿವ ಹರಕ್ ಸಿಂಗ್ ರಾವತ್ ಶ್ಲಾಘಿಸಿದ್ದಾರೆ. " ಆಯುರ್ವೇದ ವೈದ್ಯರ ಬೇಡಿಕೆಗೆ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಬಹುನಿರೀಕ್ಷಿತ ಅನುಮೋದನೆ ನೀಡಿದ್ದಾರೆ. ಆಯುರ್ವೇದ ವೈದ್ಯರು ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ ತಮ್ಮ ಸಹವರ್ತಿಗಳಂತೆ ಅಲೋಪತಿ ಔಷಧಿಗಳನ್ನು ಶಿಫಾರಸು ಮಾಡಲು ಅನುಮತಿ ಪಡೆಯಬಹುದೇ ಎಂದು ಕೇಳುತ್ತಿದ್ದರು," ಎಂದಿದ್ದಾರೆ.

"ಈ ನಿರ್ಧಾರವು ಆರೋಗ್ಯ ಸೇವೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಲೋಪತಿ ಔಷಧಿಗಳನ್ನು ತುರ್ತು ಪರಿಸ್ಥಿತಿಗಳಲ್ಲಿ ಶಿಫಾರಸು ಮಾಡುವ ಆಯುರ್ವೇದ ವೈದ್ಯರ ಬೇಡಿಕೆಯನ್ನು ನಾವು ಅಂಗೀಕರಿಸಿದ್ದೇವೆ. ಈ ನಿರ್ಧಾರದಿಂದ ರಾಜ್ಯದ ದೂರದ ಪ್ರದೇಶಗಳಲ್ಲಿ ಸಾವಿರಾರು ಜನರಿಗೆ ಯಾವುದೇ ಅಲೋಪಥಿಕ್ ವೈದ್ಯರಿಲ್ಲದ ಕಾರಣ ಸಾಕಷ್ಟು ಸಹಾಯ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ," ಎಂದು ಆಯುಷ್ ಸಚಿವರು ಹೇಳಿದ್ದಾರೆ.
ಆದಾಗ್ಯೂ, ಈ ನಿರ್ಧಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ (ಐಎಂಎ) ವಿರೋಧ ವ್ಯಕ್ತಪಡಿಸಿದೆ. ಐಎಂಎ ಉತ್ತರಾಖಂಡದ ಅಧ್ಯಕ್ಷ ಡಾ.ಅರವಿಂದ್ ಶರ್ಮಾ, "ಈ ನಿರ್ಧಾರವು ನಿಯಮಗಳಿಗೆ ವಿರುದ್ದವಾಗಿದೆ. ಆಯುರ್ವೇದ ವೈದ್ಯರು ಅಲೋಪತಿ ಔಷಧಿಗಳನ್ನು ಶಿಫಾರಸು ಮಾಡವುದಾದರೆ, ಈ ಔಷಧಿಗಳನ್ನು ಪ್ರಶ್ನಿಸಿರುವುದೇಕೆ," ಎಂದು ಪ್ರಶ್ನಿಸಿದ್ದಾರೆ.
ಐಎಂಎ ಉತ್ತರಾಖಂಡ ಅಧ್ಯಾಯದ ಪ್ರಧಾನ ಕಾರ್ಯದರ್ಶಿ ಡಾ.ಅಜಯ್ ಖನ್ನಾ, "ಕಾನೂನಿನ ಬಗ್ಗೆ ಸರ್ಕಾರಕ್ಕೆ ತಿಳಿದಿಲ್ಲವೆಂದು ತೋರುತ್ತದೆ. ರಾಜ್ಯ ಸರ್ಕಾರದ ಈ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ," ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಲೋಪತಿ ಮತ್ತು ಆಯುರ್ವೇದದ ನಡುವಿನ ಚರ್ಚೆಯು ವಿವಾದವನ್ನು ಹುಟ್ಟುಹಾಕಿತ್ತು. ಯೋಗ ಗುರು ರಾಮದೇವ್ ಮೇ ತಿಂಗಳಲ್ಲಿ ವೈರಲ್ ಆದ ವೀಡಿಯೊವೊಂದರಲ್ಲಿ, ಅಲೋಪತಿಯನ್ನು ಅವಿವೇಕಿ ವಿಜ್ಞಾನ ಎಂದು ಹೇಳಿದ್ದರು. ಕೋವಿಡ್ ರೋಗಿಗಳಿಗೆ ನೀಡುವ ರೆಮ್ಡೆಸಿವಿರ್ ನಂತಹ ಔಷಧಗಳು ವಿಫಲವಾಗಿವೆ ಎಂದು ದೂರಿದ್ದರು. ಈ ಆರೋಪಗಳ ಮಧ್ಯೆ ಉತ್ತರಾಖಂಡದ ಐಎಂಎ ಬಾಬಾ ವಿರುದ್ಧ 1,000 ರೂ. ಮಾನನಷ್ಟ ನೋಟಿಸ್ ನೀಡಿತ್ತು.
(ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications