ಉತ್ತರಖಂಡದ ಬಿಜೆಪಿ ಮುಖಂಡನ ಪತ್ನಿ ಯುಪಿ ಪೊಲೀಸರ ಗುಂಡಿಗೆ ಬಲಿ
ಡೆಹ್ರಾಡೂನ್, ಅಕ್ಟೋಬರ್ 13: ಅಕ್ರಮ ಗಣಿಗಾರಿಕೆ ಆರೋಪಿ ವಿರುದ್ಧ ಉತ್ತರಾಖಂಡದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉತ್ತರ ಪ್ರದೇಶದ ಮೊರಾದಾಬಾದ್ ಠಾಣೆಯ ಐವರು ಪೊಲೀಸರು ಗಾಯಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಭರತ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ ನಡೆದ ಶೂಟೌಟ್ನಲ್ಲಿ ಮೃತಪಟ್ಟಿರುವ ಮಹಿಳೆ ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರ ಗುಂಡಿಗೆ ಮಹಿಳೆ ಬಲಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪೊಲೀಸರು ಹಾಗೂ ಅಕ್ರಮ ಗಣಿಗಾರಿಕೆ ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಆ ವೇಳೆ, ಉತ್ತರ ಪ್ರದೇಶ ಪೊಲೀಸರು ಹಾರಿಸಿದ ಗುಂಡು ಮಹಿಳೆಗೆ ತಗುಲಿದೆ. ಬಿಜೆಪಿ ಮುಖಂಡ ಗುರ್ತಾಜ್ ಭುಲ್ಲರ್ ಪತ್ನಿ ಗುರುಪ್ರೀತ್ ಕೌರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜಾಫರ್ ಎಂಬುವವನು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರು. ಆತನನ್ನು ಬಂಧಿಸಲು ಮೊರಾದಾಬಾದ್ ಪೊಲೀಸರ ತಂಡವು ಉತ್ತರಾಖಂಡದ ಭರತ್ಪುರಕ್ಕೆ ತಲುಪಿದಾಗ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಐವರು ಪೊಲೀಸರು ಗಾಯಗೊಂಡರು ಮತ್ತು ಮಹಿಳೆಯೊಬ್ಬರು ಮೃತಪಟ್ಟರು ಎಂದು ಎನ್ಡಿಟಿವಿ ವರದಿ ಮಾಡಿದೆ.
ಆರೋಪಿ ಜಾಫರ್ ತಲೆ ಮೇಲೆ 50,000 ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಬಿಜೆಪಿ ಮುಖಂಡ ಭುಲ್ಲರ್ ಮನೆಯಲ್ಲಿ ಆರೋಪಿ ತಲೆಮರೆಸಿಕೊಂಡಿದ್ದನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಿಜೆಪಿ ಮುಖಂಡನ ಪತ್ನಿಯ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ನಾಲ್ವರು ಉತ್ತರ ಪ್ರದೇಶ ಪೊಲೀಸರನ್ನು ಒತ್ತೆಯಾಳಾಗಿಸಿಕೊಂಡಿದ್ದಾರೆ. ಯುಪಿ ಪೊಲೀಸರ ವಿರುದ್ಧ ಉತ್ತರಾಖಂಡದಲ್ಲಿ ಕೊಲೆ ಪ್ರಕರಣವೂ ದಾಖಲಾಗಿದೆ.
ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಮ್ಮ ಪೊಲೀಸರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ಮೊರಾದಾಬಾದ್ ಪೊಲೀಸ್ ಅಧಿಕಾರಿ ಸುಲಭ್ ಮಾಥುರ್ ಹೇಳಿದ್ದಾರೆ.
ಗಾಯಗೊಂಡಿರುವ ಐವರು ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಮಾಥುರ್ ತಿಳಿಸಿದ್ದಾರೆ.
ಘಟನೆ ಕುರಿತು ಸುದ್ದಿಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿರುವ ಉತ್ತರಖಂಡ ಪೊಲೀಸ್ ಆಯುಕ್ತ ನಿಲೇಶ್ ಆನಂದ್, "ಪ್ರಕರಣವನ್ನು ತನಿಖೆ ಮಾಡುತ್ತಿದ್ದೇವೆ. ಕಾರ್ಯಾಚರಣೆ ಬಗ್ಗೆ ಉತ್ತರ ಪ್ರದೇಶ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು. ಈ ಪ್ರದೇಶದ ಬಗ್ಗೆ ನಮಗೆ ಹೆಚ್ಚು ತಿಳಿದಿರುವುದರಿಂದ ಯುಪಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದೆವು. ಗಾಯಗೊಂಡ ಯುಪಿ ಪೊಲೀಸ್ ಅಧಿಕಾರಿಗಳು ನಮಗೆ ಮಾಹಿತಿ ನೀಡದೆ ಮೊರಾದಾಬಾದ್ ಆಸ್ಪತ್ರೆಗೆ ತೆರಳಿದ್ದಾರೆ" ಎಂದು ಹೇಳಿದ್ದಾರೆ.
"ಅಕ್ರಮ ಗಣಿಗಾರಿಕೆ ಆರೋಪಿ ಜಾಫರ್ನನ್ನು ಬಂಧಿಸಲು ಮೊರಾದಾಬಾದ್ ಪೊಲೀಸರು ಇಲ್ಲಿಗೆ ಬಂದಿದ್ದರು. ಆ ವೇಳೆ, ಬಿಜೆಪಿಯ ಜಸ್ಪುರ್ ಬ್ಲಾಕ್ ಮುಖ್ಯಸ್ಥ ಗುರ್ತಾಜ್ ಭುಲ್ಲರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಹಾಗೂ ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದ ಕಾರಣ ಭುಲ್ಲರ್ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರು ಯುಪಿ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ" ಎಂದು ನಿಲೇಶ್ ಆನಂದ್ ಹೇಳಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಉತ್ತರಖಂಡದ ತನಿಖಾಧಿಕಾರಿಗಳು ವಿಧಿವಿಜ್ಞಾನ ಪರೀಕ್ಷೆ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications