ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡ ಬಿಜೆಪಿ ಬಿಕ್ಕಟ್ಟು; ಶನಿವಾರ ಮಹತ್ವದ ಸಭೆ

|
Google Oneindia Kannada News

ಡೆಹರಾಡೂನ್, ಜುಲೈ 02; ಉತ್ತರಾಖಂಡ ಬಿಜೆಪಿಯಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬದಲಾವಣೆ ಸುದ್ದಿಯೂ ಹಬ್ಬಿದ್ದು, ಶನಿವಾರ ಮಹತ್ವದ ಸಭೆಯನ್ನು ಸಹ ಕರೆಯಲಾಗಿದೆ.

ಸಂಸದರೂ ಆಗಿರುವ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ರಾವತ್ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಸೆಪ್ಟೆಂಬರ್ 10ರೊಳಗೆ ಶಾಸಕರಾಗಿ ಆಯ್ಕೆಯಾಗಬೇಕು.

ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್‌ ರಾಜೀನಾಮೆ?ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್‌ ರಾಜೀನಾಮೆ?

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಆದರೆ ಕೋವಿಡ್ ಕಾರಣದಿಂದಾಗಿ ಚುನಾವಣೆ ವಿಳಂಬವಾಗಿದೆ. ತೀರ್ಥಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಪಂಜಾಬ್‌ನಲ್ಲಿ ನಾಯಕರ ಹುಡುಕಾಟ ನಡೆಸುತ್ತಿರುವ ಬಿಜೆಪಿಪಂಜಾಬ್‌ನಲ್ಲಿ ನಾಯಕರ ಹುಡುಕಾಟ ನಡೆಸುತ್ತಿರುವ ಬಿಜೆಪಿ

Uttarakhand

ಉಪ ಚುನಾವಣೆ ವಿಳಂಬ ಆಗುವುದರಿಂದ ನಾಯಕತ್ವ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ಉಂಟಾಗಿದೆ. ಉಪ ಚುನಾವಣೆ ನಡೆಯದಿದ್ದರೆ ನಾಯಕತ್ವ ಬದಲಾವಣೆ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿದೆ.

 ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ

ಕೇವಲ ನಾಲ್ಕು ತಿಂಗಳ ಹಿಂದೆ ತೀರ್ಥಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಉತ್ತರಾಖಂಡ ವಿಧಾನಸಭೆ ಅವಧಿ ಮುಂದಿನ ವರ್ಷದ ಮಾರ್ಚ್ ತನಕ ಇದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ನಾಯಕತ್ವ ಬದಲಾವಣೆ ಮಾಡುವ ಅನಿವಾರ್ಯತೆ ಬಿಜೆಪಿಗೆ ಎದುರಾಗಿದೆ.

ಮಹತ್ವದ ಸಭೆ; ಶನಿವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಬೇರೆ ನಾಯಕನನ್ನು ಆಯ್ಕೆ ಮಾಡಲಾಗುತ್ತದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಉತ್ತರಾಖಂಡ ರಾಜ್ಯದ ಬಿಜೆಪಿ ವೀಕ್ಷಕರಾಗಿದ್ದಾರೆ. ಶನಿವಾರ ರಾಜ್ಯಕ್ಕೆ ಅವರು ಆಗಮಿಸುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಗಂಗೋತ್ರಿ ಮತ್ತು ಹಲ್ದವಾನಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಆದರೆ ಕೋವಿಡ್ ಪರಿಸ್ಥಿತಿಯಲ್ಲಿ 6 ತಿಂಗಳು ಯಾವುದೇ ಚುನಾವಣೆ ನಡೆಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿತ್ತು. ಇದರಿಂದಾಗಿ ಮುಖ್ಯಮಂತ್ರಿಗಳಿಗೆ ಶಾಸಕರಾಗಿ ಆಯ್ಕೆಯಾಗಲು ಯಾವುದೇ ಅವಕಾಶವಿಲ್ಲ.

English summary
BJP may change Uttarakhand chief minister. Tirath Singh Rawat elected as CM four months back. BJP legislature party meeting is scheduled to be held at 3 pm on July 3rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X