ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ 3 ಸಾವು, ನಾಲ್ವರು ನಾಪತ್ತೆ
ಉತ್ತರಕಾಶಿ, ಜುಲೈ 19: ಉತ್ತರಾಖಂಡದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಉತ್ತರ ಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘಸ್ಫೋಟದಿಂದ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಒಬ್ಬ ಪುರುಷ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ ನಾಪತ್ತೆ ಆಗಿರುವ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ ಪೆಕ್ಟರ್ ಜಗದಂಬಾ ಪ್ರಸಾದ್ ತಿಳಿಸಿದ್ದಾರೆ.
ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸೂಚನೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಶ್ಚಿಮ ಉತ್ತರ ಪ್ರದೇಶ, ವಾಯುವ್ಯ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ರಾಜಸ್ಥಾನ, ದಕ್ಷಿಣ ಹರಿಯಾಣ, ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಜುಲೈ 21ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಂಗಾ-ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ:
ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಗಂಗಾ-ಯಮುನಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಡೆಹ್ರಾಡೂನ್ನಲ್ಲಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನದಿಗಳ ಹರಿವಿನ ಮೇಲೆ ನಿರಂತರ ಜಾಗರೂಕತೆ ವಹಿಸಲಾಗಿದೆ. ಕಳೆದ ವಾರವಷ್ಟೇ ಉತ್ತರಕಾಶಿ ಜಿಲ್ಲೆಯ ದಬ್ರಾಣಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿತ್ತು. ಭೂಮಿ ಕುಸಿತದಿಂದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications