DA Hike: ಸರ್ಕಾರಿ ನೌಕರರಿಗೆ ಭರ್ಜರಿ ತುಟ್ಟಿಭತ್ಯೆ ಹೆಚ್ಚಳ ಘೋಷಣೆ: ಸಂಪೂರ್ಣ ವಿವರ ತಿಳಿಯಿರಿ
ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 8ನೇ ವೇತನ ಆಯೋಗವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಇದರ ನಡುವೆ ಉತ್ತರಾಖಂಡದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸಾರ್ವಜನಿಕ ಸಂಸ್ಥೆಗಳು ಮತ್ತು ಉದ್ದಿಮೆಗಳ ನೌಕರರಿಗೆ ತುಟ್ಟಿಭತ್ಯೆ (ಡಿಎ) ಏರಿಕೆಗೆ ಅನುಮೋದನೆ ನೀಡಿದ್ದಾರೆ. ಈ ಘೋಷಣೆಯಿಂದ ಸರ್ಕಾರಿ ನೌಕರರಲ್ಲಿ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಬಹುದಿನಗಳಿಂದ ಕಾದು ಕುಳಿತ್ತಿದ್ದ ಸರ್ಕಾರಿ ನೌಕರರಿಗೆ ಕೊನೆಗೂ ಸರ್ಕಾರ ಶುಭ ಸುದ್ದಿ ನೀಡಿದಂತಾಗಿದೆ.

ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಐದನೇ ಕೇಂದ್ರ ವೇತನ ಶ್ರೇಣಿಯಲ್ಲಿ ಸಂಬಳ ಪಡೆಯುವ ಸಾರ್ವಜನಿಕ ಸಂಸ್ಥೆಗಳ ಉದ್ಯಮಗಳ ಉದ್ಯೋಗಿಗಳಿಗೆ ಜನವರಿ 01, 2025 ರಿಂದ ಪ್ರಸ್ತುತ ತುಟ್ಟಿಭತ್ಯೆಯ ದರವನ್ನು 455% ಪ್ರತಿಶತದಿಂದ 466 %ಪ್ರತಿಶತಕ್ಕೆ ಹೆಚ್ಚಿಸಲು ಮತ್ತು ಆರನೇ ಕೇಂದ್ರ ವೇತನ ಶ್ರೇಣಿಯಲ್ಲಿ ಸಂಬಳ ಪಡೆಯುವ ಸಾರ್ವಜನಿಕ ಸಂಸ್ಥೆಗಳು ಅಥವಾ ಉದ್ಯಮಗಳ ಉದ್ಯೋಗಿಗಳಿಗೆ ಪ್ರಸ್ತುತ ತುಟ್ಟಿಭತ್ಯೆಯ ದರವನ್ನು 246% ಪ್ರತಿಶತದಿಂದ 252% ಪ್ರತಿಶತಕ್ಕೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದರು.
ಇನ್ನೂ ಈ ತುಟ್ಟಿಭತ್ಯೆ ಹೆಚ್ಚಳದಿಂದಾಗಿ (ಡಿಎ) ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ತಿಂಗಳಿಗೆ 1,200 ರಿಂದ 2,200 ರೂಪಾಯಿಗಳ ಆರ್ಥಿಕ ಲಾಭವಾಗಲಿದೆ. ಉದಾಹರಣೆಗೆ, 20,000 ರೂಪಾಯಿಗಳ ಮೂಲ ವೇತನ ಪಡೆಯುವ ನೌಕರನಿಗೆ 11% ಏರಿಕೆಯಿಂದ ಸುಮಾರು 2,200 ರೂಪಾಯಿಗಳ ಹೆಚ್ಚುವರಿ ಲಾಭವಾಗಲಿದೆ. ಈ ತುಟ್ಟಿಭತ್ಯೆ ಏರಿಕೆಯಿಂದ ಉತ್ತರಾಖಂಡದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗಣನೀಯ ಆರ್ಥಿಕ ನೆರವಾಗಲಿದ್ದು, ರಾಜ್ಯ ಸರ್ಕಾರದ ಈ ಕ್ರಮವನ್ನು ವ್ಯಾಪಕವಾಗಿ ಸ್ವಾಗತಿಸಲಾಗಿದೆ.
ಐದನೇ ಕೇಂದ್ರ ವೇತನ ಆಯೋಗದ ಆಧಾರದ ಮೇಲೆ ತುಟ್ಟಿಭತ್ಯೆಯನ್ನು 455% ರಿಂದ 466% ಕ್ಕೆ ಏರಿಕೆ ಮಾಡಲಾಗಿದೆ. ಇದು ಜನವರಿ 01, 2025 ರಿಂದ ಜಾರಿಗೆ ಬರಲಿದೆ. ಆರನೇ ಕೇಂದ್ರ ವೇತನ ಆಯೋಗದ ಆಧಾರದ ಮೇಲೆ ತುಟ್ಟಿಭತ್ಯೆಯನ್ನು 246% ರಿಂದ 252% ಕ್ಕೆ ಏರಿಕೆ ಮಾಡಲಾಗಿದೆ. ಇದೂ ಸಹ ಜನವರಿ 01, 2025 ರಿಂದ ಅನ್ವಯವಾಗಲಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಈ ನಿರ್ಧಾರವು ಐದನೇ ಮತ್ತು ಆರನೇ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದು, ರಾಜ್ಯದ ಸರ್ಕಾರಿ ನೌಕರರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications