ಹಠಾತ್ ಹಿಮಕುಸಿತದಿಂದ ಪ್ರವಾಹ ಸಂಭವಿಸಿದ್ದೇ ವಿನಾ, ಹಿಮನದಿ ಸ್ಫೋಟದಿಂದಲ್ಲ: ರಾವತ್
ಡೆಹ್ರಾಡೂನ್, ಫೆಬ್ರವರಿ 8: ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಭೀಕರ ಹಿಮಪ್ರವಾಹವು ಪರ್ವತವೊಂದರಿಂದ ಮಿಲಿಯನ್ ಟನ್ಗಟ್ಟನೆ ಹಿಮ ಕುಸಿದು ಜಾರಿದ್ದರಿಂದ ಸಂಭವಿಸಿದ್ದೇ ವಿನಾ ಹಿಮನದಿ ಸ್ಫೋಟದಿಂದ ಅಲ್ಲ ಎಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.
ತೀವ್ರ ಹಾನಿಗೊಳಗಾದ ಚಮೋಲಿಯಲ್ಲಿನ ಪರಿಸ್ಥಿತಿ ಪರಿಶೀಲನೆಗೆಂದು ಸೋಮವಾರ ತೆರಳುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭಾನುವಾರ ಹಿಮಪಾತದ ಹೊಡೆತಕ್ಕೆ ಸಿಲುಕಿದ ಜಾಗಗಳಲ್ಲಿ ಅಂತಹ ಚಟುವಟಿಕೆಗಳು ನಡೆದಿರಲಿಲ್ಲ. ಈ ದುರ್ಘಟನೆಯನ್ನು ಅಭಿವೃದ್ಧಿ ವಿರೋಧಿ ದೃಷ್ಟಿಕೋನದಲ್ಲಿ ಕಟ್ಟಲು ಹೋಗಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ಇಸ್ರೋ ವಿಜ್ಞಾನಿಗಳು ಮತ್ತು ಸೇನೆ ಹಾಗೂ ಇಂಡೋ-ಟಿಬೆಟ್ ಪೊಲೀಸ್ ವಿಭಾಗದ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು ಈ ಭೀಕರ ದುರಂತಕ್ಕೆ ನಿಖರ ಕಾರಣ ಏನಿರಬಹುದು ಎಂಬ ಬಗ್ಗೆ ಚರ್ಚಿಸಿದರು. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಯಾವುದೇ ಹಿಮರಾಶಿ ಕಾಣಿಸುತ್ತಿರಲಿಲ್ಲ. ಕೇವಲ ಖಾಲಿ ಬೆಟ್ಟ ಮಾತ್ರ ಕಂಡುಬಂದಿತ್ತು ಎಂದು ಇಸ್ರೋ ಅಧಿಕಾರಿಗಳು ತಮಗೆ ಫೋಟೊಗಳನ್ನು ತೋರಿಸಿರುವುದಾಗಿ ರಾವತ್ ತಿಳಿಸಿದ್ದಾರೆ.

'ಬೆಟ್ಟದ ಮೇಲೆ ಏನೋ ಕಾಣುತ್ತಿತ್ತು. ಬಹುಶಃ ಭಾರಿ ಪ್ರಮಾಣದಲ್ಲಿ ಹಿಮ ಕುಸಿದು ಕೆಳಗೆ ಜಾರಿ ಬರಲು ಅದೇ ಮೂಲ ಕಾರಣವಾಗಿರಬಹುದು. ಇದರಿಂದ ರಿಶಿಗಂಗಾ ಮತ್ತು ಧೌಲಿ ಗಂಗಾ ನದಿಗಳಲ್ಲಿ ಇದ್ದಕ್ಕಿದ್ದಂತೆ ಪ್ರವಾಹ ಸೃಷ್ಟಿಯಾಗಿದೆ. ವಿಜ್ಞಾನಿಗಳ ಪ್ರಕಾರ ದುರ್ಘಟನೆ ನಡೆದ ಸ್ಥಳವು ಹಿಮಪಾತದ ಜಾಗವೇ ಅಲ್ಲ. ಪ್ರಾಥಮಿಕ ವರದಿಗಳ ಪ್ರಕಾರ ಖಂಡಿತವಾಗಿಯೂ ಇದು ಹಿಮನದಿ ಸ್ಫೋಟದಿಂದ ಉಂಟಾಗಿರುವುದಲ್ಲ' ಎಂದು ಹೇಳಿದ್ದಾರೆ.
ಸ್ಪಷ್ಟವಾಗಿ ಕಾಣುತ್ತಿದ್ದ ಖಾಲಿ ಬೆಟ್ಟದ ಒಂದು ಪ್ರಚೋದಕ ಜಾಗದಿಂದ ಲಕ್ಷಾಂತರ ಮೆಟ್ರಿಕ್ ಟನ್ ಹಿಮ ಜಾರಿಕೊಂಡು ಬಂದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications