ಆಮ್ಲಜನಕವನ್ನು ಉಚ್ವಾಸ-ನಿಶ್ವಾಸ ಮಾಡುವ ಏಕೈಕ ಪ್ರಾಣಿ ಗೋವು!
ಡೆಹರಾಡೂನ್, ಜುಲೈ 26: ಎಲ್ಲ ಪ್ರಾಣಿ ಪಕ್ಷಿಗಳೂ ಆಮ್ಲಜನಕವನ್ನು ಎಳೆದುಕೊಂಡು ಇಂಗಾಲದ ಡೈ ಆಕ್ಸೈಡ್ಅನ್ನು ಹೊರಬಿಡುತ್ತವೆ. ಸಸ್ಯಗಳು ಇಂಗಾಲದ ಡೈಆಕ್ಸೈಡ್ ಹೀರಿಕೊಂಡು ಆಮ್ಲಜನಕ ಹೊರಬಿಡುತ್ತವೆ ಎಂಬುದನ್ನು ಓದಿದ್ದೇವೆ. ಆದರೆ, ಗೋವುಗಳು ಆಮ್ಲಜನಕವನ್ನು ಒಳಗೆಳೆದುಕೊಂಡು, ಆಮ್ಲಜನಕವನ್ನೇ ಹೊರಬಿಡುತ್ತವೆ ಎನ್ನುವುದು ಗೊತ್ತಿದೆಯೇ?
ಇದು ವಿಜ್ಞಾನಿಗಳ ಅಧ್ಯಯನ ವರದಿಯಲ್ಲ. ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರ ಸಂಶೋಧನೆ!
ಆಮ್ಲಜನಕವನ್ನು ಉಚ್ವಾಸ-ನಿಶ್ವಾಸ ಮಾಡುವ ಏಕೈಕ ಪ್ರಾಣಿಯೆಂದರೆ ಹಸು. ಹಸುವಿಗೆ ಮಸಾಜ್ ಮಾಡುವ ಮೂಲಕ ನಮ್ಮ ಉಸಿರಾಟದ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಎಂಬ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ನಗೆಪಾಟಲಿಗೀಡಾಗಿದ್ದಾರೆ.

ಹಸುವಿನ ಹಾಲು ಮತ್ತು ಗೋಮೂತ್ರದಿಂದ ಇರುವ ವೈದ್ಯಕೀಯ ಉಪಯೋಗಗಳ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ರಾವತ್ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಗೋವುಗಳು ಆಮ್ಲಜನಕವನ್ನು ಒಳಗೆ ಎಳೆದುಕೊಳ್ಳುವುದು ಮಾತ್ರವಲ್ಲ, ಆಮ್ಲಜನಕವನ್ನೇ ಹೊರಬಿಡುತ್ತವೆ ಎಂದು ಅವರು ಹೇಳಿದ್ದಾರೆ.
ಒಂದು ಹಸುವಿಗೆ ಮಸಾಜ್ ಮಾಡಿದರೆ ಉಸಿರಾಟದ ಸಮಸ್ಯೆಯಿದ್ದರೆ ನಿವಾರಣೆಯಾಗುತ್ತದೆ. ಗೋವುಗಳೊಂದಿಗೆ ಆಪ್ತ ಬಾಂಧವ್ಯ ಹೊಂದಿದ್ದರೆ ಕ್ಷಯ ರೋಗವೂ ವಾಸಿಯಾಗುತ್ತದೆ ಎಂದು ಹೇಳಿದ್ದಾರೆ.
ಅಂದಹಾಗೆ, ಈ 'ಸಂಶೋಧನೆ'ಯ ಶ್ರೇಯಸ್ಸು ರಾವತ್ ಅವರಿಗೆ ಸಿಗುವುದಿಲ್ಲ. ಏಕೆಂದರೆ ಎರಡು ವರ್ಷಗಳ ಮೊದಲೇ ಸಚಿವರೊಬ್ಬರು ಈ 'ಸಂಶೋಧನೆ' ಮಂಡಿಸಿದ್ದರು.
2017ರಲ್ಲಿ ರಾಜಸ್ಥಾನದ ಶಿಕ್ಷಣ ಸಚಿವರಾಗಿದ್ದ ವಾಸುದೇವ್ ದೇವ್ನಾನಿ ಆಮ್ಲಜನಕವನ್ನು ಉಚ್ವಾಸ-ನಿಶ್ವಾಸ ಮಾಡುವ ಏಕೈಕ ಪ್ರಾಣಿ ಗೋವು ಎಂದು ಹೇಳಿಕೆ ನೀಡಿದ್ದರು.
ಉತ್ತರಾಖಂಡ್ನ ಮುಖ್ಯಮಂತ್ರಿ ಕಚೇರಿ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಇದು ಉತ್ತರಾಖಂಡದ ಗುಡ್ಡಗಾಡುಗಳಲ್ಲಿ ಇರುವ ಸಾಮಾನ್ಯ ನಂಬಿಕೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications