Uttarakhand Earthquake: ಉತ್ತರಾಖಂಡದಲ್ಲಿ 48 ಗಂಟೆಗಳಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ: ಆತಂಕದಲ್ಲಿ ಜನ!
ಗುರುವಾರ ಮುಂಜಾನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದು ಜನ ಆತಂಕಗೊಂಡಿದ್ದಾರೆ. ಇಂದು ಬೆಳಗಿನ ಜಾವ 3:49ಕ್ಕೆ 5 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎಕ್ಸ್ (ಹಿಂದಿನ ಟ್ವಿಟರ್) ಪೋಸ್ಟ್ನಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ಹಂಚಿಕೊಂಡಿದೆ.
ರಾಜ್ಯದಲ್ಲಿ 48 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ದಾಖಲಾದ ಎರಡನೇ ಭೂಕಂಪ ಇದಾಗಿದೆ. ಮಂಗಳವಾರ ಪಿಥೋರಗಢದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೇ ದಿನ ನೇಪಾಳದಲ್ಲಿ ಸರಣಿ ನಾಲ್ಕು ಭೂಕಂಪಗಳು ಸಂಭವಿಸಿದೆ. ಅತ್ಯಂತ ಶಕ್ತಿಶಾಲಿ ಭೂಕಂಪದ ಕೇಂದ್ರಬಿಂದು ಉತ್ತರಾಖಂಡದ ಜೋಶಿಮಠದ ಆಗ್ನೇಯಕ್ಕೆ 206 ಕಿಮೀ ಮತ್ತು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 284 ಕಿಮೀ ಉತ್ತರದಲ್ಲಿದೆ.

ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಈ ಭೂಕಂಪದ ಕಂಪನದ ಅನುಭವವಾಗಿದೆ.
ಎನ್ಸಿಎಸ್ನ ಅಧಿಕಾರಿಯ ಪ್ರಕಾರ, ಮಂಗಳವಾರ ನೇಪಾಳದ ಭೂಕಂಪಗಳ ಅನುಕ್ರಮ ಹೀಗಿದೆ- ಪಶ್ಚಿಮ ನೇಪಾಳದಲ್ಲಿ ಮಧ್ಯಾಹ್ನ 2:25ರ ಸುಮಾರಿಗೆ 10 ಕಿಲೋಮೀಟರ್ ಆಳದಲ್ಲಿ 4.6 ತೀವ್ರತೆಯ ಭೂಕಂಪ ಆಯಿತು. ಇದರ ನಂತರ ಮಧ್ಯಾಹ್ನ 2:51 ಕ್ಕೆ 6.2 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ. ತರುವಾಯ, ಅದೇ ಪ್ರದೇಶದಲ್ಲಿ 3.6 ಮತ್ತು 3.1 ತೀವ್ರತೆಯ ಎರಡು ಕಂಪನಗಳು ಕ್ರಮವಾಗಿ 15 ಕಿಮೀ ಮತ್ತು 10 ಕಿಮೀ ಆಳದಲ್ಲಿ ಮಧ್ಯಾಹ್ನ 3:06 ಮತ್ತು 3:19 ಕ್ಕೆ ಸಂಭವಿಸಿದವು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications