ಉತ್ತರಾಖಂಡ ಚುನಾವಣೆ: ಬಿಜೆಪಿ ಗೆದ್ದರೆ ಬಡವರಿಗೆ ಮೂರು ಸಿಲಿಂಡರ್ ಉಚಿತ
ಡೆಹ್ರಾಡೂನ್ ಫೆಬ್ರವರಿ 09: ಭಾರತೀಯ ಜನತಾ ಪಕ್ಷವು 2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮಂಗಳವಾರ (ಫೆಬ್ರವರಿ 09) ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಪ್ರಣಾಳಿಕೆಗೆ 'ದೃಷ್ಟಿ ಪತ್ರ' ಎಂದು ಹೆಸರಿಟ್ಟಿದೆ. ಪ್ರಣಾಳಿಕೆ ಬಿಡುಗಡೆ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಿಎಂ ಪುಷ್ಕರ್ ಸಿಂಗ್ ಧಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಕೌಶಿಕ್, ಮಾಜಿ ಕೇಂದ್ರ ಸಚಿವ ಡಾ.ರಮೇಶ್ ಪೊಖ್ರಿಯಾಲ್ ನಿಶಾಂಕ್ ಉಪಸ್ಥಿತರಿದ್ದರು. ಈ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬಿಜೆಪಿಯ ಪ್ರಣಾಳಿಕೆ 'ದೃಷ್ಟಿ ಪತ್ರ' ಬಿಡುಗಡೆ ಮಾಡುವಾಗ ರೈತರ ಮೇಲೆ ವಿಶೇಷ ಗಮನ ಹರಿಸುವ ಕುರಿತು ಮಾತನಾಡಿದರು. ಉತ್ತರಾಖಂಡದ ಪ್ರತಿ ಬ್ಲಾಕ್ನಲ್ಲಿ ಮಂಡಿ(ಮಾರುಕಟ್ಟೆ) ಸ್ಥಾಪಿಸಲಾಗುವುದು. ರೈತರಿಗೂ ಸಮ್ಮಾನ್ ನಿಧಿ ನೀಡಲಾಗುವುದು. ಕೃಷಿ ಭೂಮಿ ಸಮೀಕ್ಷೆ ಮತ್ತು ವಿಮೆಯಲ್ಲಿ ಹೊಸ ಡ್ರೋನ್ ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಜೊತೆಗೆ ಆರ್ಥಿಕವಾಗಿ ದುರ್ಬಲವಾಗಿರುವ ರೈತರಿಗೂ ಸುಲಭವಾಗಿ ಸಾಲ ದೊರೆಯಲಿದೆ ಎಂದು ಭರವಸೆ ನೀಡಿದ್ದಾರೆ.
ಅದೇ ಸಮಯದಲ್ಲಿ, 2025 ರ ವೇಳೆಗೆ ಉತ್ತರಾಖಂಡವನ್ನು ದೇಶದ ಅತ್ಯುತ್ತಮ ರಾಜ್ಯವನ್ನಾಗಿ ಮಾಡಲು ನಾವು ಬಯಸುತ್ತೇವೆ ಎಂದು ರಮೇಶ್ ಪೋಖ್ರಿಯಾಲ್ ಹೇಳಿದರು. ಸುರಕ್ಷಿತ ದೇವಭೂಮಿ ಬೇಕು, ಅಕ್ರಮ ಭೂಮಿ ಒತ್ತುವರಿಯಿಂದ ಜನಸಂಖ್ಯಾ ಬದಲಾವಣೆ ಆಗುತ್ತಿದೆ, ಇದಕ್ಕಾಗಿ ಕಾನೂನು ತರುತ್ತೇವೆ. ಇದಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಕೇಂದ್ರ ಸರ್ಕಾರ ಮತ್ತು 6 ಸಾವಿರ ರಾಜ್ಯ ಸರ್ಕಾರ ನೀಡಲಿದೆ ಎಂದು ಹೇಳಿದರು. ಅಂದರೆ 12 ಸಾವಿರ ರೈತರ ಖಾತೆಗೆ ಸೇರಲಿದೆ. ಹರಿದ್ವಾರವನ್ನು ಯೋಗದ ರಾಜಧಾನಿಯನ್ನಾಗಿ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು. ಬಡ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಯೋಜನೆ ಇದೆ. ಬಡ ಕುಟುಂಬಗಳಿಗೆ ಒಂದು ವರ್ಷದಲ್ಲಿ 3 ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುವುದು. ಇದಲ್ಲದೇ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಮಾಸಿಕ 2000, ಬಡ ಮಕ್ಕಳಿಗೆ ಮಾಸಿಕ 1000 ನೀಡಲಾಗುವುದು ಎಂದಿದ್ದಾರೆ.

ಮೊದಲು ಉತ್ತರಾಖಂಡದ 70 ಕ್ಷೇತ್ರಗಳ ಪೈಕಿ 59 ಸ್ಥಾನಗಳಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಎರಡನೇ ಪಟ್ಟಿಯೊಂದಿಗೆ ಪಕ್ಷವು ಒಟ್ಟು 70 ಸ್ಥಾನಗಳ ಪೈಕಿ 68 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುಷ್ಕರ್ ಸಿಂಗ್ ಧಾಮಿ ಖತಿಮಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications