ಉತ್ತರಾಖಂಡ್ ಅಸೆಂಬ್ಲಿ ಕಣದಲ್ಲಿ 200 ಮಂದಿ ಕೋಟ್ಯಧಿಪತಿಗಳು
ಉತ್ತರಾಖಂಡ್ ನಲ್ಲಿ ವಿಧಾನಸಭಾ ಚುನಾವಣೆ ಬಿಸಿ ದಿನೇ ದಿನೇ ಕಾವೇರುತ್ತಿದೆ. 2017ರ ಅಸೆಂಬ್ಲಿ ಕದನದಲ್ಲಿರುವ ಅಭ್ಯರ್ಥಿಗಳ ಆಸ್ತಿ ವಿವರ ಬಹಿರಂಗವಾಗಿದ್ದು, ಸರಿ ಸುಮಾರು 200ಕ್ಕೂ ಅಧಿಕ ಕೋಟ್ಯಧಿಪತಿಗಳು ಕಣದಲ್ಲಿದ್ದಾರೆ.
ಡೆಹ್ರಾಡೂನ್, ಫೆಬ್ರವರಿ 06: ಉತ್ತರಾಖಂಡ್ ನಲ್ಲಿ ವಿಧಾನಸಭಾ ಚುನಾವಣೆ ಬಿಸಿ ದಿನೇ ದಿನೇ ಕಾವೇರುತ್ತಿದೆ. 2017ರ ಅಸೆಂಬ್ಲಿ ಕದನದಲ್ಲಿರುವ ಅಭ್ಯರ್ಥಿಗಳ ಆಸ್ತಿ ವಿವರ ಬಹಿರಂಗವಾಗಿದ್ದು, ಸರಿ ಸುಮಾರು 200ಕ್ಕೂ ಅಧಿಕ ಕೋಟ್ಯಧಿಪತಿಗಳು ಕಣದಲ್ಲಿದ್ದಾರೆ. 91 ಮಂದಿ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯುಳ್ಳವರಾಗಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾರ್ಮ್ ವರದಿ ಮಾಡಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳು: ಒಟ್ಟಾರೆ 637 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 91 ಅಭ್ಯರ್ಥಿಗಳು ತಮ್ಮ ಮೇಲೆ ಕ್ರಿಮಿನಲ್ ಕೇಸ್ ಇದೆ ಎಂದು ಘೋಷಿಸಿಕೊಂಡಿದ್ದಾರೆ.
ತೀವ್ರವಾದ ಕ್ರಿಮಿನಲ್ ಕೇಸ್ : 54 ಮಂದಿ ಅಭ್ಯರ್ಥಿಗಳು ತಮ್ಮ ಮೇಲೆ ತೀವ್ರತರವಾದ ಆರೋಪಗಳು ಕೇಳಿ ಬಂದಿದ್ದು, ಕ್ರಿಮಿನಲ್ ಕೇಸ್ ಗಳು ಜಾರಿಯಲ್ಲಿವೆ ಎಂದಿದ್ದಾರೆ.
ಮರ್ಡರ್ ಕೇಸ್ : ಒಟ್ಟು 5 ಅಭ್ಯರ್ಥಿಗಳ ಮೇಲೆ ಕೊಲೆ ಹಾಗೂ ಕೊಲೆ ಯತ್ನದ ಕೇಸ್ ದಾಖಲಾಗಿದೆ.

ಮಹಿಳೆಯವರ ವಿರುದ್ಧ ಹಲ್ಲೆ ಪ್ರಕರಣ : ಮಹಿಳೆ ಮೇಲೆ ಹಲ್ಲೆ ಸೇರಿದಂತೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪ ಹೊತ್ತಿರುವ 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪಕ್ಷವಾರು ಕ್ರಿಮಿನಲ್ ಹಿನ್ನಲೆ: ಭಾರತೀಯ ಜನತಾ ಪಕ್ಷದ 70 ಮಂದಿ ಅಭ್ಯರ್ಥಿಗಳ ಪೈಕಿ 19 ಮಂದಿ ಮೇಲೆ ಕ್ರಿಮಿನಲ್ ಕೇಸ್ ಗಳಿವೆ. ಕಾಂಗ್ರೆಸ್ಸಿನಲ್ಲಿ 7 ಹಾಗೂ ಬಿಎಸ್ ಪಿಯಲ್ಲಿ 4 ಮಂದಿ ಅಭ್ಯರ್ಥಿಗಳಿದ್ದಾರೆ.
* 637 ಅಭ್ಯರ್ಥಿಗಳ ವಿವರ ವಿಶ್ಲೇಷಿಸಿದಾಗ 200ಕ್ಕೂ ಅಧಿಕ ಕೋಟ್ಯಧಿಪತಿಗಳು ಕಂಡು ಬಂದಿದ್ದಾರೆ.
* ಕಾಂಗ್ರೆಸ್ಸಿನಲ್ಲಿ 70 ಅಭ್ಯರ್ಥಿಗಳ ಪೈಕಿ 52 ಮಂದಿ ಕೋಟ್ಯಧಿಪತಿಗಳಿದ್ದಾರೆ. ಬಿಜೆಪಿಯಲ್ಲಿ 70 ರಲ್ಲಿ 48 ಅಭ್ಯರ್ಥಿಗಳು, ಬಿಎಸ್ ಪಿಯ 69 ಅಭ್ಯರ್ಥಿಗಳ ಪೈಕಿ 19 ಮಂದಿ ಅಭ್ಯರ್ಥಿಗಳು 1 ಕೋಟಿ ರು ಗೂ ಅಧಿಕ ಆಸ್ತಿ ಘೋಷಿಸಿದ್ದಾರೆ.
* ಪಕ್ಷಾವರು ಸರಾಸರಿ ಆಸ್ತಿ ಮೊತ್ತದಲ್ಲಿ ಬಿಜೆಪಿ 4.20 ಕೋಟಿ ರು, ಕಾಂಗ್ರೆಸ್ 3.08 ಕೋಟಿ ಹಾಗೂ ಬಿಎಸ್ ಪಿ 1.55 ಕೋಟಿ ರು ನಷ್ಟಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications