ಉತ್ತರಾಖಂಡ: 24 ಗಂಟೆ ವಿದ್ಯುತ್, ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ
ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 24 ಗಂಟೆ ವಿದ್ಯುತ್ ಪೂರೈಕೆ, ಭ್ರಷ್ಟಾಚಾರ ವಿರೋಧಿ ಘಟಕ ಸ್ಥಾಪನೆ ಮಾಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಡೆಹ್ರಾಡೂನ್, ಫೆಬ್ರವರಿ 5: 24 ಗಂಟೆ ವಿದ್ಯುತ್ ಪೂರೈಕೆ, ಭ್ರಷ್ಟಾಚಾರ ವಿರೋಧಿ ಘಟಕ ಸ್ಥಾಪನೆ ಮಾಡುವುದಾಗಿ ಬಿಜೆಪಿ ತನ್ನ ಉತ್ತರಾಖಂಡ ಪ್ರಣಾಳಿಕೆಯಲ್ಲಿ ತಿಳಿಸಿದೆ. [ಸಮೀಕ್ಷೆ: ಉತ್ತರಖಂಡ, ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ]
ಶನಿವಾರ ಹಣಕಾಸು ಸಚಿವ ಅರುಣ್ ಜೇಟ್ಲಿ ಉತ್ತರಾಖಂಡ ವಿಧಾನಸಭೆ ಚುನಾವಣೆ 2017ರ ಪ್ರಾಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಕೂಡಾ ಜೇಟ್ಲಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಆಡಳಿತರೂಢ ಕಾಂಗ್ರೆಸ್ ಸರಕಾರ ಅಭಿವೃದ್ಧಿಗಿಂತ ಜಾಸ್ತಿ ಹಗರಣಗಳಲ್ಲೇ ತೊಡಗಿಸಿಕೊಂಡಿದೆ ಎಂದು ದೂರಿದ್ದಾರೆ. [ಉತ್ತರಖಂಡ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪ್ರತಿಷ್ಠೆಯೇ ಹೈಲೈಟ್]

ಬಿಜೆಪಿಯ ಭರವಸೆಗಳೇನು?
ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಮುಖವಾಗಿ ಶಿಕ್ಷಣ, ಉದ್ಯೋಗ, ಸ್ವಚ್ಛತೆ ಮತ್ತು ಭ್ರಷ್ಟಾಚಾರ ಮುಕ್ತ ಸರಕಾರ ನೀಡುವುದಾಗಿ ಪ್ರಣಾಳಿಕೆ ಬಿಡುಗಡೆ ಮಾಡಿ ಅರುಣ್ ಜೇಟ್ಲಿ ಹೇಳಿದ್ದಾರೆ.

ಶಿಕ್ಷಣಕ್ಕೆ ಉತ್ತೇಜನ
ಬಿಜೆಪಿ ಪ್ರಣಾಳಿಕೆಯಲ್ಲಿ ಶಿಕ್ಷಣವನ್ನೇ ಗುರಿಯಾಗಿಸಿದೆ. ಬಡ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಜತೆಗೆ ಶೈಕ್ಷಣಿಕವಾಗಿ ಸಾಧನೆ ಮಾಡುವವರಿಗೆ ಉಚಿತ ಲ್ಯಾಪ್ ಟಾಪ್ ಮತ್ತು ಸ್ಮಾರ್ಟ್ ಫೋನ್ ನೀಡುವುದಾಗಿಯೂ ಹೇಳಿದೆ.

ಆಂಬ್ಯುಲೆನ್ಸ್ ಸೇವೆ
ಸಂಸ್ಕೃತ, ವೈದ್ಯಕೀಯ ಮತ್ತು ಜ್ಯೋತಿಷ್ಯ ಶಿಕ್ಷಣಕ್ಕೂ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿರುವುದು ವಿಶೇಷ. ಟೆಲಿ ಮೆಡಿಸಿನ್, ಏರ್ ಅಂಬ್ಯುಲೆನ್ಸ್ ಮತ್ತು ಇ-ಅಂಬ್ಯುಲೆನ್ಸ್ ಸೇವೆಗಳನ್ನು ಆರಂಭ ಮಾಡುವುದಾಗಿಯೂ ಬಿಜೆಪಿ ಹೇಳಿದೆ.

24 ಗಂಟೆ ವಿದ್ಯುತ್
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 24 ಗಂಟೆಯೂ ಕಡಿತವಿಲ್ಲದಂತೆ ವಿದ್ಯುತ್ ಪೂರೈಕೆ ಮಾಡುವುದಾಗಿ ಬಿಜೆಪಿ ಹೇಳಿದೆ. ಇದರ ಜತೆಗೆ ರಾಜ್ಯದಲ್ಲಿ ಭ್ರಷ್ಟಾಚಾರ ವಿರೋಧಿ ಘಟಕ ತೆರೆಯುತ್ತೇವೆ. ಯುವಕರಿಗಾಗಿ ಹೊಸ ಪಾಲಿಸಿ ಜಾರಿಗೆ ತರುವುದಾಗಿಯೂ ಹೇಳಿದೆ.

ಅಭಿವೃದ್ಧಿಯೇ ನಮ್ಮ ಮಂತ್ರ
ಉತ್ತರಾಖಂಡದ ಸಮಗ್ರ ಅಭಿವೃದ್ಧಿಗೆ ಬೇಕಾದ ನೀಲನಕ್ಷೆ ತಯಾರಿಸುತ್ತೇವೆ. ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲೂ ವೈ-ಫೈ ಸೌಲಭ್ಯ ನೀಡಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಬಾಲಕಿಯರಿಗೆ ವಸತಿ ಶಾಲೆಗಳನ್ನು ತೆರೆಯಲಾಗುವುದು. ಅತಿಥಿ ಉಪನ್ಯಾಸಕರನ್ನು ನಿರಂತರವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಬಿಜೆಪಿ ಹೇಳಿದೆ.

ರೈತ ಪರ
ರೈತರಿಗೆ ಬಡ್ಡಿ ರಹಿತ ಸಾಲ ನೀಡುತ್ತೇವೆ. ಸಾವಯವ ಕೃಷಿಗೆ ಉತ್ತೇಜನ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ರಾಜ್ಯದ ಎರಡು ನಗರಗಳಲ್ಲಿ ಟ್ರೂಮಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯ ಕಾರ್ಡುಗಳನ್ನು ನೀಡಲಾಗುವುದು ಎಂದು ಸರಕಾರ ಭರವಸೆ ನೀಡಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications