ಸೈನ್ಯದ ಸಾಹಸ: ನಿಯಂತ್ರಣಕ್ಕೆ ಬಂದ ಉತ್ತರಾಖಂಡ ಕಾಡ್ಗಿಚ್ಚು
ನವದೆಹಲಿ, ಮೇ. 02: ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಉತ್ತರಾಖಂಡಕ್ಕೆ ಇದೀಗ ಕಾಡ್ಗಿಚ್ಚಿನ ಕಾಟ. ಕಳೆದ ಒಂದು ವಾರದಿಂದ ಕಾಡನ್ನು ಬೆಂಕಿ ಆಹುತಿ ಪಡೆಯುತ್ತಲೇ ಇದೆ. ಇಸ್ರೋದ ಸಹಕಾರದಲ್ಲಿ ಭಾರತೀಯ ಸೈನ್ಯ ಕಾಡ್ಗಿಚ್ಚು ಆರಿಸುವ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ.
ಇನ್ನೊಂದೆಡೆ ಕಾಡ್ಗಿಚ್ಚು ಶೇಕಡ 70ರಷ್ಟು ನಿಯಂತ್ರಣಕ್ಕೆ ಬಂದಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಿಳಿಸಿದೆ. ಬೆಂಕಿ ನಿಯಂತ್ರಣಕ್ಕೆ ಕಾರ್ಯಾಚರಣೆ ನಡೆಯುತ್ತಿದ್ದು ಹೆಲಿಕ್ಯಾಪ್ಟರ್ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಎನ್ಡಿಆರ್ಎಫ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ತಿಳಿಸಿದ್ದಾರೆ.['ಸುಡುತ್ತಿರುವ ಪಶ್ಚಿಮ ಘಟ್ಟ ಮೊದಲು ಉಳಿಸಿಕೊಳ್ಳಿ']
WATCH: IAF team spraying water over forest area in Srinagar & Koteshwar as #UttarakhandForestFire continues to ragehttps://t.co/Bz0n0FvPpX
— ANI (@ANI_news) May 1, 2016
ಕಾಡ್ಗಿಚ್ಚಿನ ಆರ್ಭಟಕ್ಕೆ ಸಿಲುಕಿ ಉತ್ತರಾಖಂಡದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಇಸ್ರೋ ಸಹ ಕಾಡ್ಗಿಚ್ಚಿನ ಚಿತ್ರಗಳನ್ನು ಬಿಡುಗಡೆ ಮಾಡಿದೆ.[ಉತ್ತರಾಖಂಡ ಪ್ರವಾಹದ ಚಿತ್ರಗಳು]
ಜಮ್ಮು ಕಾಶ್ಮೀರ ಅರಣ್ಯದಲ್ಲೂ ಬೆಂಕಿ: ಸೋಮವಾರ ಜಮ್ಮು ಮತ್ತು ಕಾಶ್ಮೀರದ ಅರಣ್ಯ ಪ್ರದೇಶದಲ್ಲೂ ಬೆಂಕಿ ಕಾಣಿಸಿಕೊಂಡಿದ್ದು ಅಪಾಯದ ಮುನ್ಸೂಚನೆಯನ್ನು ನೀಡಿದೆ. ಸ್ಯಾಟಲೈಟ್ ಚಿತ್ರಗಳನ್ನು ಬಿಡುಗಡೆ ಮಾಡಿರುವ ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರ, ಉತ್ತರ ಭಾರತದಾದ್ಯಂತ ಸುಮಾರು 1, 300 ಸಕ್ರಿಯ ಕಾಡ್ಗಿಚ್ಚು ಪ್ರಕರಣಗಳು ಕಂಡುಬಂದಿದೆ ಎಂದು ಹೇಳಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications