ಉತ್ತರಾಖಂಡ್ ಪ್ರವಾಹ: 2019ರಲ್ಲೇ ವಿಜ್ಞಾನಿಗಳು ಕೊಟ್ಟಿದ್ದರು ಎಚ್ಚರಿಕೆ
ಡೆಹ್ರಾಡೂನ್,ಫೆಬ್ರವರಿ 08: ಉತ್ತರಾಖಂಡ್ನಲ್ಲಿ ಸಂಭವಿಸಿರುವ ಪ್ರವಾಹನದ ಬಗ್ಗೆ 2019ರಲ್ಲೇ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು ಎನ್ನುವ ವಿಚಾರ ಬಹಿರಂಗಗೊಂಡಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾದೇವಿ ನೀರ್ಗಲ್ಲು ಸ್ಫೋಟಗೊಂಡಿದೆ. ಈ ಹಿಮ ಪ್ರವಾಹವು ಧೌಲಿಗಂಗಾ ನದಿಯ ಮೂಲಕ ಉಕ್ಕಿ ಹರಿದು ಹಲವು ಜೀವಗಳನ್ನು ಬಲಿತೆಗೆದುಕೊಂಡಿದೆ.
ಈ ಘಟನೆಗೆ ಹವಾಮಾನ ವೈಪರೀತ್ಯ ಕಾರಣ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲದೆ ಈ ಬಗ್ಗೆ 2019ರಲ್ಲೇ ವಿಜ್ಞಾನಿಗಳ ತಂಡ ಸಂಭಾವ್ಯ ದುರಂತದ ಕುರಿತು ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ.
ತಾಪಮಾನ ಏರಿಕೆಯಿಂದಾಗಿ ಉತ್ತರಾಖಂಡದ ಹಿಮಗಲ್ಲುಗಳು ಕರಗಿ ಸ್ಫೋಟವಾಗಿವೆ ಎಂದು ವಿಜ್ಞಾನಿಗಳ ತಂಡ ಅಭಿಪ್ರಾಯಪಟ್ಟಿದೆ. ಜಲ ಪ್ರವಾಹದಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ.

ನೀರ್ಗಲ್ಲು ಸ್ಫೋಟಕ್ಕೆ ಕಾರಣವೇನು?
ನೀರಿನ ಒತ್ತಡ ಹೆಚ್ಚುವುದು, ಸವಕಳಿ, ಹಿಮಪಾತ, ನೀರ್ಗಲ್ಲುಗಳ ಕೆಳಗೆ ಭೂಕಂಪ ಹೀಗೆ ಬೇರೆ ಬೇರೆ ಕಾರಣಗಳಿಂದ ನೀರ್ಗಲ್ಲುಗಳು ಸ್ಫೋಟಗೊಳ್ಳಬಹುದು. ಜತೆಗೆ, ಒಂದು ನೀರ್ಗಲ್ಲುಗಳ ಸರೋವರದ ಮೇಲೆ ಮತ್ತೂಂದು ನೀರ್ಗಲ್ಲು ಬಂದು ಢಿಕ್ಕಿ ಹೊಡೆದಾಗಲೂ ಇಂಥ ಘಟನೆ ಸಂಭವಿಸಬಹುದು.

170ಕ್ಕೂ ಅಧಿಕ ಮಂದಿ ನಾಪತ್ತೆ
ಉತ್ತರಾಖಂಡದಲ್ಲಿ ಸಂಭವಿಸಿರುವ ಪ್ರವಾಹದಲ್ಲಿ ಸುಮಾರು 170ಕ್ಕೂ ಅಧಿಕ ಮಂದಿ ನಾಪತ್ತೆಯಾಗಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಿಂದಾಗಿ ಉತ್ತರಾಖಂಡದಲ್ಲಿ ವ್ಯಾಪಕ ಪ್ರವಾಹ ಸಂಭವಿಸಿದ್ದು, ಹಲವು ಜೆಲ್ಲೆಗಳು ನೀರಿನಲ್ಲಿ ಮುಳುಗಿವೆ. ಘಟನೆಯಲ್ಲಿ ಕನಿಷ್ಟ 12 ಮಂದಿ ಸಾವನ್ನಪ್ಪಿದ್ದು, 170ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ನೀರ್ಗಲ್ಲುಗಳು ವರ್ಷಕ್ಕೆ ಅರ್ಧ ಮೀಟರ್ ನಷ್ಟು ಕರಗುತ್ತಿವೆ
ಈ ಹಿಂದೆ ನೀರ್ಗಲ್ಲುಗಳು ಸುಮಾರು 0.25 ಮೀಟರ್ನಷ್ಟು ಮಂಜುಗಡ್ಡೆಗಳನ್ನು ಕಳೆದುಕೊಂಡಿದ್ದರೆ, 2000ದ ಬಳಿಕ ವರ್ಷ ಅರ್ಧ ಮೀಟರ್ನಷ್ಟು ಮಂಜುಗಡ್ಡೆ ಕರಗಿ ಹೋಗಿವೆ ಎಂದು ವರದಿ ತಿಳಿಸಿದೆ. ಕಳೆದ 4 ದಶಕಗಳಲ್ಲಿ ನೀರ್ಗಲ್ಲುಗಳು ತಮ್ಮ ಕಾಲು ಭಾಗದಷ್ಟು ದ್ರವ್ಯ ರಾಶಿಯನ್ನೇ ಕಳೆದುಕೊಂಡಿವೆ. 1975- 2000ದ ಅವಧಿಗೆ ಹೋಲಿಸಿದರೆ 2000-2016ರ ವರೆಗೆ ತಾಪಮಾನವು ಸರಾಸರಿ 1 ಡಿ.ಸೆ.ನಷ್ಟು ಹೆಚ್ಚಾಗಿದೆ. 1975ರಿಂದ 2000ದ ವರೆಗೆ ಹಿಮಾಲಯದ ನೀರ್ಗಲ್ಲುಗಳು ಎಷ್ಟು ಪ್ರಮಾಣದಲ್ಲಿ ಕರಗಿದ್ದವೋ, ಅದರ ದುಪ್ಪಟ್ಟು ಪ್ರಮಾಣದಲ್ಲಿ ಈಗ ಅವುಗಳು ಕರಗತೊಡಗಿವೆ.

ತಾಪಮಾನ ಏರಿಕೆ
ಜಗತ್ತಿನ ವಿವಿಧೆಡೆಯ ಬೃಹತ್ ನೀರ್ಗಲ್ಲುಗಳು ದಪ್ಪಟ್ಟು ವೇಗದಲ್ಲಿ ಕರಗುತ್ತಿವೆ. ಇದಕ್ಕೆ ಹಿಮಾಲಯದ ನೀರ್ಗಲ್ಲುಗಳು ಕೂಡ ಹೊರತಾಗಿಲ್ಲ ಎಂದು ವಿಜ್ಞಾನಿಗಳ ತಂಡ ಆತಂಕ ವ್ಯಕ್ತಪಡಿಸಿತ್ತು. ತಾಪಮಾನ ಏರಿಕೆಯಿಂದಾಗಿ 21ನೇ ಶತಮಾನದ ಆರಂಭದಿಂದಲೇ ಹಿಮಾಲಯದ ನೀರ್ಗಲ್ಲುಗಳು ದುಪ್ಪಟ್ಟು ವೇಗದಲ್ಲಿ ಕರಗುತ್ತಿವೆ. ಪ್ರಮುಖವಾಗಿ ಭಾರತ, ಚೀನ, ನೇಪಾಲ ಮತ್ತು ಭೂತಾನ್ ನಾದ್ಯಂತ 40 ವರ್ಷಗಳ ಕಾಲ ಉಪಗ್ರಹದ ಮೂಲಕ ಪರಿವೀಕ್ಷಣೆ ನಡೆಸಿ 2019ರಲ್ಲಿ ಈ ವರದಿ ತಯಾರಿಸಲಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications