ಹಿಮಪಾತದ ನಂತರ IMDಯಿಂದ ಮಹತ್ವದ ಹವಾಮಾನ ಮುನ್ಸೂಚನೆ
ಚಮೋಲಿ, ಫೆಬ್ರವರಿ 7: ಚಮೋಲಿ ಜಿಲ್ಲೆಯ ಹಿಮಪರ್ವತಗಳಲ್ಲಿ ಭಾನುವಾರ ಉಂಟಾದ ಭಾರಿ ಹಿಮಪಾತದಿಂದ ದೇವ ಭೂಮಿ ಉತ್ತರಾಖಂಡ್ ಬೆಚ್ಚಿದೆ. ಈ ಪ್ರದೇಶದಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ತ್ವರಿತಗತಿಯಲ್ಲಿ ಏರಿಕೆ ಕಂಡು ಪ್ರವಾಹ ಭೀತಿ ಎದುರಾಗಿದೆ. ದೌಲಿಗಂಗಾ ನದಿ ನೀರಿನ ಮಟ್ಟದ ಅಪಾಯದ ಮೀರಿ ಹರಿಯುತ್ತಿದ್ದು, ನದಿಪಾತ್ರದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸೇರಿಸಲಾಗಿದೆ. ಈ ನಡುವೆ ಹಿಮಪಾತದ ನಂತರ ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಹವಾಮಾನ ಮುನ್ಸೂಚನೆ ಸಿಕ್ಕಿದೆ.
ಭಾರಿ ಹಿಮಪಾತ, ನದಿಪ್ರವಾಹದಿಂದ ಋಷಿಗಂಗಾ ಹೈಡ್ರೋಪವರ್ ಯೋಜನೆಗಾಗಿ ನಿರ್ಮಿಸಿದ್ದ ಬ್ಯಾರೇಜ್ ಧ್ವಂಸಗೊಂಡಿದೆ. ತಪೋವನ್ ಪ್ರದೇಶದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಆದರೆ, ಮುಂದಿನ ಎರಡು ದಿನಗಳ ಕಾಲ ಚಮೋಲಿ, ತಪೋವನ್ ಹಾಗೂ ಜೋಶಿಮಠ ಪ್ರದೇಶದಲ್ಲಿ ಒಣ ಹವೆ ಇರಲಿದ್ದು, ಯಾವುದೇ ಭಾರಿ ಪ್ರಮಾಣದ ಹಿಮ ಪಾತ, ಹಿಮನದಿಯ ಪ್ರವಾಹ ಸಾಧ್ಯತೆಯಿಲ್ಲ ಎಂದು ಐಎಂಡಿಯ ಹೆಚ್ಚುವರಿ ನಿರ್ದೇಶಕ ಜನರಲ್ ಆನಂದ್ ಶರ್ಮ ಹೇಳಿದ್ದಾರೆ.
''ಫೆಬ್ರವರಿ 7 ಹಾಗೂ 8ರಂದು ಹಿಮಪಾತ ಅಥವಾ ಭಾರಿ ಮಳೆ ಸಾಧ್ಯತೆ ಇಲ್ಲ'' ಎಂದು ಮುನ್ಸೂಚನೆ ನೀಡಿದ್ದಾರೆ. ಆದರೆ, ಫೆಬ್ರವರಿ 9 ಹಾಗೂ 10ರಂದು ಅಲ್ಪ ಪ್ರಮಾಣದಲ್ಲಿ ಮಳೆ ಹಾಗೂ ಹಿಮ ಪಾತ ನಿರೀಕ್ಷಿಸಬಹುದು ಆದರೆ, ಭಾನುವಾರ ಕಂಡು ಬಂದ ತ್ವರಿತ ಪ್ರವಾಹ ಸಾಧ್ಯತೆಯಿಲ್ಲ. ಚಮೋಲಿ ಜಿಲ್ಲೆಯ ಉತ್ತರ ಭಾಗದಲ್ಲಿ ಎರಡು ದಿನ ಬಿಟ್ಟು ಮಳೆ ಸುರಿಯಲಿದೆ'' ಎಂದು ಹವಾಮಾನ ಇಲಾಖೆ ಹೇಳಿದೆ.

ಚಮೋಲಿಯ ಜೋಶಿಮಠ ಸಮೀಪದ ನಂದಾದೇವಿ ಹಿಮಪರ್ವತದ ಭಾಗ ಕುಸಿತವಾಗಿದ್ದರಿಂದ ದೌಲಿಗಂಗಾ, ಅಲಕಾನಂದ ನದಿಯಲ್ಲಿ ತ್ವರಿತ ಪ್ರವಾಹ ಪರಿಸ್ಥಿತಿ ಉಂಟಾಯಿತು. ತಪೋವನ್-ರೇನಿ ಭಾಗದಲ್ಲಿ ಋಷಿಗಂಗಾ ಹೈಡ್ರೋ ಪವರ್ ಯೋಜನೆಯಲ್ಲಿ ಕಾರ್ಯ ನಿರತ 150ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಸಮೀಪದ ಸುರಂಗದಲ್ಲಿ ಸಿಲುಕಿದ್ದ 50ಕ್ಕೂ ಅಧಿಕ ಕಾರ್ಮಿಕರ ರಕ್ಷಣೆ ಕಾರ್ಯವನ್ನು ಐಟಿಬಿಪಿ ಮುಂದುವರೆಸಿದೆ.
ಘಟನಾ ಸ್ಥಳಕ್ಕೆ ಕೇದರಾನಾಥ್ ಕಡೆಯಿಂದ ಮಿಲಿಟರಿ ಪಡೆ ರವಾನೆಯಾಗಿದ್ದು, ಎನ್ ಡಿ ಆರ್ ಎಫ್ ಜೊತೆ ಕೈಜೋಡಿಸಿ ರಕ್ಷಣಾ ಕಾರ್ಯ, ವೈದ್ಯಕೀಯ ನೆರವು ಕಾರ್ಯದಲ್ಲಿ ತೊಡಗಿಕೊಂಡಿದೆ. ನಂದಾದೇವಿ ಹಿಮನದಿಯಲ್ಲಿ ಹಿಮ ಪಾತದ ಪರಿಣಾಮ ಉಂಟಾಗಿರುವ ಪ್ರವಾಹ ಭೀತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 1070 or 9557444486ಕ್ಕೆ ಕರೆ ಮಾಡಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications