ಉತ್ತರಾಖಂಡ್ ಸಿಎಂ ಆಯ್ಕೆ ಕುರಿತಂತೆ ಅಮಿತ್ ಶಾ ಮಹತ್ವದ ಮೀಟಿಂಗ್
ಡೆಹ್ರಾಡೂನ್, ಮಾರ್ಚ್ 20: ದೇವಭೂಮಿ ಉತ್ತರಾಖಂಡ್ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಮತ್ತೊಮ್ಮೆ ಸ್ಥಾಪಿಸಲು ಸಜ್ಜಾಗಿದೆ. ಆದರೆ, ಹಾಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಚುನಾವಣೆಯಲ್ಲಿ ಸೋಲು ಕಂಡಿದ್ದು, ಹೊಸ ಸಿಎಂ ಆಯ್ಕೆ ಬಗ್ಗೆ ಚರ್ಚೆಗೆ ನಾಂದಿ ಹಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡದ ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಚರ್ಚಿಸಲು ಸಭೆ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಉತ್ತರಾಖಂಡ್ ಸಿಎಂ ಯಾರು ಎಂಬುದನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.
ಉತ್ತರಾಖಂಡದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮದನ್ ಕೌಶಿಕ್, ರಮೇಶ್ ಪೋಖ್ರಿಯಾಲ್ 'ನಿಶಾಂಕ್', ಬಿಎಲ್ ಸಂತೋಷ್ ಮತ್ತು ಸತ್ಪಾಲ್ ಮಹಾರಾಜ್ ಸೇರಿದಂತೆ ಪಕ್ಷದ ನಾಯಕರು ಸಭೆಯಲ್ಲಿ ಹಾಜರಿದ್ದಾರೆ.

ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದು, ಮಾರ್ಚ್ 10 ರಂದು ಫಲಿತಾಂಶ ಹೊರ ಬಂದಿದೆ. ಉತ್ತರಾಖಂಡ ಚುನಾವಣೆಯಲ್ಲಿ ಅಂತಿಮ ಮತದಾನದ ಶೇಕಡಾ 62.51 ರಷ್ಟಾಗಿದ್ದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಶೇ.65.56ರಷ್ಟು ಮತದಾನವಾಗಿತ್ತು.
2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಉತ್ತರಾಖಂಡದ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸಿತ್ತು. ಕಾಂಗ್ರೆಸ್ ಪಕ್ಷ ಕೇವಲ 11 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. 2022ರಲ್ಲಿ ಉತ್ತರಾಖಂಡದ 70 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಪಕ್ಷ ಸರ್ಕಾರ ರಚಿಸುವುದಕ್ಕೆ ಮ್ಯಾಜಿಕ್ ನಂಬರ್ 36 ಆಗಿದೆ. ಆದರೆ ಬಿಜೆಪಿಯು 47 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ ಹಾರಿಸುವ ಮೂಲಕ ಅಧಿಕಾರವನ್ನು ಪಕ್ಕಾ ಮಾಡಿಕೊಂಡಿದೆ. 19 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸಿದ ಎರಡನೇ ಪಕ್ಷವಾಗಿ ಹೊರ ಹೊಮ್ಮಿದೆ. ಉಳಿದಂತೆ ಬಹುಜನ ಸಮಾಜವಾದಿ ಪಕ್ಷ 2, ಸ್ವತಂತ್ರ್ಯ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ.

ಚುನಾವಣಾ ಸಮೀಕ್ಷೆಗಳಲ್ಲಿ ಉತ್ತಮ ಸ್ಕೋರ್ ಮಾಡಿದ್ದ ಹರೀಶ್ ರಾವತ್ ಸರಾಸರಿ ಸಮೀಕ್ಷೆಗಳಲ್ಲಿ ವಿರುದ್ಧ ಅಭಿಮತ ಪಡೆದುಕೊಂಡಿದ್ದರು. ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರ ಕಾರ್ಯಾವಧಿಯ ಬಗ್ಗೆ ಸಾರ್ವಜನಿಕರೂ ಈಗಲೂ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, 2017ರ ಚುನಾವಣೆಯಲ್ಲಿ ಉಧಮ್ ಸಿಂಗ್ ನಗರ್ ಜಿಲ್ಲೆಯ ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಕಪ್ರಿಯನ್ನು ಧಾಮಿ ಕೇವಲ 2700 ಮತಗಳ ಅಂತರದಿಂದ ಸೋಲಿಸಿದ್ದರು. ಇದಕ್ಕೆ ಪ್ರತಿಕಾರವಾಗಿ 2022ರಲ್ಲಿ ನಡೆದ ಚುನಾವಣೆಯಲ್ಲಿ ಅದೇ ಧಾಮಿ ಅವರನ್ನು ಕಪ್ರಿ 7000 ಮತಗಳ ಅಂತರದಿಂದ ಸೋಲಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications