ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷಾ ವರದಿ; FIR ದಾಖಲಿಸಲು ಆದೇಶ
ನವದೆಹಲಿ, ಜೂನ್ 17: ಈ ಬಾರಿ ಹರಿದ್ವಾರದಲ್ಲಿ ಮಹಾ ಕುಂಭಮೇಳದ ಸಮಯ ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಹರಿದ್ವಾರ ಜಿಲ್ಲಾಡಳಿತಕ್ಕೆ ಉತ್ತರಾಖಂಡ ಸರ್ಕಾರ ಗುರುವಾರ ಆದೇಶಿಸಿದೆ.
ಕುಂಭಮೇಳದ ಸಮಯದಲ್ಲಿ ಸುಮಾರು 22 ಖಾಸಗಿ ಲ್ಯಾಬ್ಗಳನ್ನು ಕೊರೊನಾ ಪರೀಕ್ಷೆ ನಡೆಸಲು ನೇಮಕ ಮಾಡಿಕೊಳ್ಳಲಾಗಿತ್ತು. ಏಪ್ರಿಲ್ 1ರಿಂದ 30ರವರೆಗೂ ನಡೆದ ಕುಂಭಮೇಳದಲ್ಲಿ ದೆಹಲಿ, ಹರಿಯಾಣದ ಹಲವು ಖಾಸಗಿ ಲ್ಯಾಬ್ಗಳು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದವು.
ಹರಿದ್ವಾರ, ಋಷಿಕೇಶ, ಡೆಹ್ರಾಡೂನ್, ಮುನಿ ಕಿ ರೇಟಿಯ ತೆಹ್ರಿ ಹಾಗೂ ಪುರಿ ಸ್ವರ್ಗಾಶ್ರಮದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಆದರೆ ಕುಂಭಮೇಳದ ಸಮಯದಲ್ಲಿ ಕೊರೊನಾ ಪರೀಕ್ಷೆಯ ನಕಲಿ ವರದಿಗಳನ್ನು ನೀಡಲಾಗಿದೆ ಎಂಬ ವರದಿ ಕಳೆದ ವಾರ ಹೊರಬಿದ್ದಿತ್ತು. ಸುಮಾರು ಒಂದು ಲಕ್ಷ ಕೊರೊನಾ ಪರೀಕ್ಷೆಯ ನಕಲಿ ವರದಿ ನೀಡಿರುವುದು ಬೆಳಕಿಗೆ ಬಂದಿತ್ತು. ಆ ನಂತರ ಕ್ರಮಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿತ್ತು.
ನಕಲಿ ವರದಿ ಬಗ್ಗೆ ಪರೀಕ್ಷೆ ನಡೆಸಲು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದ ಮೂರು ಸದಸ್ಯರ ಸಮಿತಿ ರಚಿಸಲಾಗಿತ್ತು. ಇದೀಗ ಪರೀಕ್ಷೆ ನಡೆಸಿ ನಕಲಿ ವರದಿಗಳನ್ನು ನೀಡಿದ ದೆಹಲಿ ಹಾಗೂ ಹರಿಯಾಣ ಪ್ರಯೋಗಾಲಯದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಕುಂಭಮೇಳದ ಸಂದರ್ಭ ಎರಡು ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 2600 ಭಕ್ತರಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿತ್ತು. ಜೊತೆಗೆ ಕುಂಭಮೇಳದ ಅವಧಿ ನಡೆಸಲಾದ ಕೊರೊನಾ ಪರೀಕ್ಷೆಯ ಅಂಕಿ ಅಂಶಗಳನ್ನು, ಅದರ ಫಲಿತಾಂಶವನ್ನು, ಮಾಹಿತಿಯನ್ನು ನಿಖರವಾಗಿ ಹಂಚಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
''ಕುಂಭ ಮೇಳದ ಅವಧಿಯಲ್ಲಿ 10 ಐಸಿಎಂಆರ್ ಅನುಮೋದಿತ ಖಾಸಗಿ ಲ್ಯಾಬ್ಗಳಲ್ಲಿ ಆರ್ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ಸೇರಿದಂತೆ 2.52 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಲ್ಯಾಬ್ಗಳಿಗೆ 9.45 ಕೋಟಿ ರೂ. ಹಣ ನೀಡಬೇಕಾಗಿದೆ. ತನಿಖೆಯಲ್ಲಿರುವ ಲ್ಯಾಬ್ಗೆ ಇನ್ನೂ ಹಣ ಪಾವತಿ ಮಾಡಿಲ್ಲ'' ಎಂದು
ಕುಂಭಮೇಳ ಆರೋಗ್ಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications