ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷಾ ವರದಿ; FIR ದಾಖಲಿಸಲು ಆದೇಶ
ನವದೆಹಲಿ, ಜೂನ್ 17: ಈ ಬಾರಿ ಹರಿದ್ವಾರದಲ್ಲಿ ಮಹಾ ಕುಂಭಮೇಳದ ಸಮಯ ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಹರಿದ್ವಾರ ಜಿಲ್ಲಾಡಳಿತಕ್ಕೆ ಉತ್ತರಾಖಂಡ ಸರ್ಕಾರ ಗುರುವಾರ ಆದೇಶಿಸಿದೆ.
ಕುಂಭಮೇಳದ ಸಮಯದಲ್ಲಿ ಸುಮಾರು 22 ಖಾಸಗಿ ಲ್ಯಾಬ್ಗಳನ್ನು ಕೊರೊನಾ ಪರೀಕ್ಷೆ ನಡೆಸಲು ನೇಮಕ ಮಾಡಿಕೊಳ್ಳಲಾಗಿತ್ತು. ಏಪ್ರಿಲ್ 1ರಿಂದ 30ರವರೆಗೂ ನಡೆದ ಕುಂಭಮೇಳದಲ್ಲಿ ದೆಹಲಿ, ಹರಿಯಾಣದ ಹಲವು ಖಾಸಗಿ ಲ್ಯಾಬ್ಗಳು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದವು.
ಹರಿದ್ವಾರ, ಋಷಿಕೇಶ, ಡೆಹ್ರಾಡೂನ್, ಮುನಿ ಕಿ ರೇಟಿಯ ತೆಹ್ರಿ ಹಾಗೂ ಪುರಿ ಸ್ವರ್ಗಾಶ್ರಮದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಆದರೆ ಕುಂಭಮೇಳದ ಸಮಯದಲ್ಲಿ ಕೊರೊನಾ ಪರೀಕ್ಷೆಯ ನಕಲಿ ವರದಿಗಳನ್ನು ನೀಡಲಾಗಿದೆ ಎಂಬ ವರದಿ ಕಳೆದ ವಾರ ಹೊರಬಿದ್ದಿತ್ತು. ಸುಮಾರು ಒಂದು ಲಕ್ಷ ಕೊರೊನಾ ಪರೀಕ್ಷೆಯ ನಕಲಿ ವರದಿ ನೀಡಿರುವುದು ಬೆಳಕಿಗೆ ಬಂದಿತ್ತು. ಆ ನಂತರ ಕ್ರಮಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿತ್ತು.
ನಕಲಿ ವರದಿ ಬಗ್ಗೆ ಪರೀಕ್ಷೆ ನಡೆಸಲು ಮುಖ್ಯ ಅಭಿವೃದ್ಧಿ ಅಧಿಕಾರಿ ನೇತೃತ್ವದ ಮೂರು ಸದಸ್ಯರ ಸಮಿತಿ ರಚಿಸಲಾಗಿತ್ತು. ಇದೀಗ ಪರೀಕ್ಷೆ ನಡೆಸಿ ನಕಲಿ ವರದಿಗಳನ್ನು ನೀಡಿದ ದೆಹಲಿ ಹಾಗೂ ಹರಿಯಾಣ ಪ್ರಯೋಗಾಲಯದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಕುಂಭಮೇಳದ ಸಂದರ್ಭ ಎರಡು ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, 2600 ಭಕ್ತರಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿತ್ತು. ಜೊತೆಗೆ ಕುಂಭಮೇಳದ ಅವಧಿ ನಡೆಸಲಾದ ಕೊರೊನಾ ಪರೀಕ್ಷೆಯ ಅಂಕಿ ಅಂಶಗಳನ್ನು, ಅದರ ಫಲಿತಾಂಶವನ್ನು, ಮಾಹಿತಿಯನ್ನು ನಿಖರವಾಗಿ ಹಂಚಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
''ಕುಂಭ ಮೇಳದ ಅವಧಿಯಲ್ಲಿ 10 ಐಸಿಎಂಆರ್ ಅನುಮೋದಿತ ಖಾಸಗಿ ಲ್ಯಾಬ್ಗಳಲ್ಲಿ ಆರ್ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ಸೇರಿದಂತೆ 2.52 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಲ್ಯಾಬ್ಗಳಿಗೆ 9.45 ಕೋಟಿ ರೂ. ಹಣ ನೀಡಬೇಕಾಗಿದೆ. ತನಿಖೆಯಲ್ಲಿರುವ ಲ್ಯಾಬ್ಗೆ ಇನ್ನೂ ಹಣ ಪಾವತಿ ಮಾಡಿಲ್ಲ'' ಎಂದು
ಕುಂಭಮೇಳ ಆರೋಗ್ಯ ಅಧಿಕಾರಿ ಅರ್ಜುನ್ ಸಿಂಗ್ ಸೆಂಗಾರ್ ತಿಳಿಸಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications