ಪಾಲನೆಯಾಗದ ಕೋವಿಡ್ ನಿಯಮ: ಇಂದೇ ಕುಂಭ ಮೇಳ ಅಂತ್ಯ?
ನವದೆಹಲಿ, ಏಪ್ರಿಲ್ 14: ಕೊರೊನಾ ವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆ ನಡುವೆಯೇ ಕುಂಭಮೇಳದಲ್ಲಿ ಲಕ್ಷಾಂತರ ಜನರು ಗುಂಪುಗೂಡಿ ಭಾಗಿಯಾಗುತ್ತಿರುವುದು ತೀವ್ರ ಟೀಕೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಕುಂಭಮೇಳ ಆಚರಣೆಗೆ ಎರಡು ವಾರಗಳ ಮುನ್ನ, ಇಂದೇ ಅಂತ್ಯ ಹಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಏರಿಕೆಯ ಭೀತಿ ಮೂಡಿಸಿದೆ. ಉತ್ತರಾಖಂಡದಲ್ಲಿ ಸುಮಾರು ಎರಡು ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದಕ್ಕೆ ಕುಂಭ ಮೇಳವೇ ಕಾರಣ ಎಂದು ಆರೋಪಿಸಲಾಗಿದೆ.
ಬುಧವಾರ ಬೆಳಿಗ್ಗೆ ಸಾಧುಗಳು ಮತ್ತು ಭಕ್ತರು ಹರ್ ಕಿ ಪೌರಿ ಮುಖ್ಯ ಘಟ್ಟದಲ್ಲಿ ಮೂರನೇ ಪ್ರಮುಖ ಸ್ನಾನವಾದ 'ಶಹಿ ಸ್ನಾನ್' ಕೈಗೊಂಡಿದ್ದಾರೆ. ಮಧ್ಯಾಹ್ನ 2 ಗಂಟೆಯವರೆಗೆ ಕುಂಭದ ಅತ್ಯಂತ ಮಹತ್ವದ ದಿನಗಳಲ್ಲಿ ಒಂದಾದ ಬುಧವಾರ 9,43,452 ಮಂದಿ ಗಂಗಾ ನದಿಯಲ್ಲಿ ಮುಳುಗೆದ್ದಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕುಂಭ ಮೇಳಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಧಾರ್ಮಿಕ ಮುಖಂಡರ ಜತೆ ಸಭೆ ನಡೆಸಿದ್ದು, ಇನ್ನೂ ಎರಡು ವಾರ ನಡೆಯಲಿರುವ ಕುಂಭಮೇಳವನ್ನು ಬುಧವಾರವೇ ಅಂತ್ಯಗೊಳಿಸುವ ಬಗ್ಗೆ ಚರ್ಚೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆಚರಣೆ ಪ್ರಕಾರ ಕುಂಭಮೇಳವು ಏಪ್ರಿಲ್ 27ರವರೆಗೆ ನಡೆಯಲಿದೆ.
ಜನಜಂಗುಳಿ ಇಲ್ಲದ ಘಾಟ್ಗಳಲ್ಲಿ ಸಾಮಾಜಿಕ ಅಂತರ ಕಾಪಾಡದ ಜನರಿಗೆ ದಂಡ ವಿಧಿಸಲಾಗುತ್ತಿದೆ. ಆದರೆ ಮುಖ್ಯ ಘಾಟ್ಗಳಲ್ಲಿ ಜನರನ್ನು ನಿಯಂತ್ರಿಸುವುದು ಕಷ್ಟವಾಗಿದೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಗುಂಜ್ಯಾಲ್ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications