ಉತ್ತರಾಖಂಡ್: ಜೋಶಿ ಮಠ ಭಾಗದಲ್ಲಿ ಭಾರಿ ಹಿಮಪಾತ, ಪ್ರವಾಹ ಭೀತಿ
ಚಮೋಲಿ, ಫೆಬ್ರವರಿ 7: ಚಮೋಲಿ ಜಿಲ್ಲೆಯ ಹಿಮಪರ್ವತಗಳಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಈ ಪ್ರದೇಶದಲ್ಲಿ ಹರಿಯುವ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದೌಲಿಗಂಗಾ ನದಿ ನೀರಿನ ಮಟ್ಟದ ಅಪಾಯದ ಮೀರಿ ಹರಿಯುತ್ತಿದೆ.
ಭಾರಿ ಹಿಮಪಾತದಿಂದಾಗಿ ಋಷಿಗಂಗಾ ವಿದ್ಯುತ್ ಯೋಜನೆಗೂ ಹಾನಿಯಾಗಿದೆ ಎಂದು ಎಎನ್ಐ ವರದಿ ಮಾಡಿದೆ. ರೇಣಿ ಗ್ರಾಮದ ತಪೋವನ ಪ್ರದೇಶವು ಹಿಮದಿಂದ ತುಂಬಿದೆ. ಸಾವು-ನೋವಿನ ಬಗ್ಗೆ ಸದ್ಯಕ್ಕೆ ಮಾಹಿತಿ ಸಿಕ್ಕಿಲ್ಲ.
ಐಟಿಬಿಪಿ ನೂರಾರು ಮಂದಿ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಘತನೆ ಸಂಭವಿಸಿದ ಸಮಯದಲ್ಲಿ ಸುಮಾರು 50 ಮಂದಿ ಕಾರ್ಮಿಕರು ಈ ಪ್ರದೇಶದಲ್ಲಿದ್ದರು ಎಂದು ತಿಳಿದು ಬಂದಿದೆ.
#WATCH | Water level in Dhauliganga river rises suddenly following avalanche near a power project at Raini village in Tapovan area of Chamoli district. #Uttarakhand pic.twitter.com/syiokujhns
— ANI (@ANI) February 7, 2021
ಅಲಕಾನಂದ, ದೌಲಿಗಂಗಾ ನದಿ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ. ಈ ನಡುವೆ ಯಾವುದೇ ಗಾಳಿಸುದ್ದಿಗೆ ಕಿವಿಗೊಡದಂತೆ ಮುಖ್ಯಮಂತ್ರಿ ಟಿಎಸ್ ರಾವತ್ ಅವರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.
#WATCH | Uttarakhand: Rescue workers reach Reni village in Joshimath area of Chamoli district.
— ANI (@ANI) February 7, 2021
(Video credit - police) pic.twitter.com/pXdBubzUCj